ಐಟಿ ಕಂಪನಿಗಳಿಂದ ತಮ್ಮ ಉದ್ಯೋಗಿಗಳಿಗೆ ಮೆಟ್ರೋ ಪ್ರಯಾಣಕ್ಕೆ ಉತ್ತೇಜನ
ಬೆಂಗಳೂರು, ಸೆಪ್ಟೆಂಬರ್ 22: ಕೆಆರ್ ಪುರದಿಂದ ಬೈಯಪ್ಪನಹಳ್ಳಿ ಮೆಟ್ರೋ ಮಾರ್ಗವನ್ನು ಶೀಘ್ರದಲ್ಲೇ ಕಾರ್ಯಾರಂಭ ಮಾಡಿದ ನಂತರ ವೈಟ್ಫೀಲ್ಡ್ನಿಂದ ಕೆಂಗೇರಿವರೆಗಿನ ಸಂಪೂರ್ಣ ನೇರಳೆ ಮಾರ್ಗವನ್ನು ಸಂಪರ್ಕಿಸಲು ನಿರ್ಧರಿಸಲಾಗಿದ್ದು, ಐಟಿ ಕಂಪನಿಗಳು ತಮ್ಮ ಸಿಬ್ಬಂದಿ ಪ್ರಯಾಣಿಸಲು ಮೆಟ್ರೋವನ್ನು ಬಳಸುವುದಕ್ಕೆ ಹೆಚ್ಚು ಉತ್ತೇಜನ ನೀಡುತ್ತಿವೆ.
ಕಂಪನಿಗಳು ವೈಟ್ಫೀಲ್ಡ್ ಅಥವಾ ಕೆಆರ್ ಪುರ ಮೆಟ್ರೋ ನಿಲ್ದಾಣಗಳಿಂದ ತಮ್ಮ ಕಚೇರಿಗಳಿಗೆ ಬಸ್ಗಳನ್ನು ಬಳಸಲು ವಿವಿಧ ಆಯ್ಕೆಗಳ ಕುರಿತು ಬಿಎಂಟಿಸಿಯೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿವೆ ಎಂದು ಟಿಎನ್ಐಎಕ್ಸ್ ವರದಿ ಮಾಡಿದೆ.

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ಪಿಆರ್ಒ, ಬಿಎಲ್ ಯಶವಂತ ಚವಾಣ್, "ಕಂಪೆನಿಗಳು ಮೆಟ್ರೋವನ್ನು ಬಳಸಲು ಐಟಿ ಉದ್ಯೋಗಿಗಳಿಗೆ ಹೆಚ್ಚಿನ ಉತ್ತೇಜನ ನೀಡಿವೆ. ವೈಟ್ಫೀಲ್ಡ್ನಲ್ಲಿರುವ ITPB (ಇಂಟರ್ನ್ಯಾಷನಲ್ ಟೆಕ್ನಾಲಜಿ ಪಾರ್ಕ್ ಬೆಂಗಳೂರು) ನಲ್ಲಿರುವ ಅಪ್ಲೈಡ್ ಮೆಟೀರಿಯಲ್ಸ್ ಇಂಕ್ ಕಂಪನಿಯು ಈಗಾಗಲೇ ತಮ್ಮ ಉದ್ಯೋಗಿಗಳಿಗಾಗಿ 500 ಟ್ರಾವೆಲ್ ಕಾರ್ಡ್ಗಳನ್ನು ಖರೀದಿಸಿದೆ. ಇದು ಈಗಾಗಲೇ 100 ಕಾರ್ಡ್ಗಳನ್ನು ಸಿಬ್ಬಂದಿಗೆ ಹಸ್ತಾಂತರಿಸಿದೆ ಎಂದು ತಿಳಿಸಿದೆ.
ಒಂದು ಕಾರ್ಡ್ನ ಬೆಲೆ 50 ರೂಪಾಯಿಗಳು ಮತ್ತು ಉದ್ಯೋಗಿಗಳ ಅವಶ್ಯಕತೆಗೆ ಅನುಗುಣವಾಗಿ ಕಂಪನಿಯು ಅದನ್ನು ಟಾಪ್ ಅಪ್ ಮಾಡುತ್ತದೆ ಎಂದು ಮೂಲಗಳು ತಿಳಿಸಿವೆ. ಆಟೋ ಸಂಸ್ಥೆ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್, ಬಿಡದಿ ಘಟಕ ಕೂಡ ಮೆಟ್ರೋ ಬಳಸಲು ನೌಕರರನ್ನು ಉತ್ತೇಜಿಸಲು ಆಸಕ್ತಿ ತೋರಿಸಿದೆ. ತಮ್ಮ ಸಿಬ್ಬಂದಿಗಾಗಿ ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್ಗಳನ್ನು ಖರೀದಿಸಲು ಚಿಂತನೆ ನಡೆಸಿದ್ದಾರೆ ಎಂದು ಅವರು ಹೇಳಿದರು.
ಬೆಂಗಳೂರಿನ ವಿವಿಧ ಪ್ರದೇಶಗಳಿಂದ ಕಂಪನಿಯ ಬಸ್ನಲ್ಲಿ ತಮ್ಮ ಉದ್ಯೋಗಿಗಳನ್ನು ಕರೆದೊಯ್ಯುವ ಬದಲು, ನಿರ್ದಿಷ್ಟ ಮೆಟ್ರೋ ನಿಲ್ದಾಣದಿಂದ ಉದ್ಯೋಗಿಗಳನ್ನು ಪಿಕ್ ಮಾಡುವ ಸಾಧ್ಯತೆಯನ್ನು ಅವರು ನೋಡುತ್ತಿದ್ದಾರೆ ಎಂದು ಅಧಿಕಾರಿ ಹೇಳಿದರು.
ಔಟರ್ ರಿಂಗ್ ರೋಡ್ ಕಂಪನಿಗಳ ಸಂಘದ ಅಧ್ಯಕ್ಷ ಮಾನಸ್ ದಾಸ್, "ನಮ್ಮ ಗುಂಪಿನ ಭಾಗವಾಗಿರುವ ಸುಮಾರು 500 ಐಟಿ ಮತ್ತು ಬಿಟಿ ಕಂಪನಿಗಳಿಗೆ ನಮ್ಮ ನಿರ್ದಿಷ್ಟ ಅವಶ್ಯಕತೆಗಳನ್ನು ಪೂರೈಸಲು ನಾವು ಸಿದ್ಧತಾ ಪ್ರಕ್ರಿಯೆಯಲ್ಲಿದ್ದೇವೆ, ಇದರಿಂದ ನಾವು ಬಿಎಂಆರ್ಸಿಎಲ್ ಮತ್ತು ಬಿಎಂಟಿಸಿಗೆ ಸಂಯೋಜಿತ ವಿನಂತಿಯನ್ನು ಸಲ್ಲಿಸುತ್ತೇವೆ. ನಾವು ಎರಡು ಆಯ್ಕೆಗಳನ್ನು ಪರಿಗಣಿಸುತ್ತಿದ್ದೇವೆ. ಕಂಪನಿಯಿಂದ ಪೂರ್ಣ ಚಾರ್ಟರ್ಡ್ ಬಸ್ ಅನ್ನು ಬಾಡಿಗೆಗೆ ಪಡೆಯುವುದು ಅಥವಾ ಬಹು ಕಂಪನಿಗಳು ಇರುವ ನಿರ್ದಿಷ್ಟ ಮಾರ್ಗದಲ್ಲಿ ಬಸ್ ಅನ್ನು ಹೊಂದುವುದು ಎಂದು ತಿಳಿಸಿದ್ದಾರೆ.
ಫೀಡರ್ ಬಸ್ಗಳು ಚಲಿಸಬಹುದಾದ ನಿರ್ದಿಷ್ಟ ನಿಲ್ದಾಣಗಳನ್ನು ಗುರುತಿಸಲು, ಉದ್ಯೋಗಿಗಳಿಗೆ ಗರಿಷ್ಠ ಪ್ರಯೋಜನವನ್ನು ನೀಡಲು BMRCL ಮತ್ತು ನಗರ ಭೂ ಸಾರಿಗೆ ನಿರ್ದೇಶನಾಲಯ (DULT) ಜೊತೆಗೆ ಕ್ರಿಯಾ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಹಿರಿಯ BMTC ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
IPL 2026: ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ದರೆ 'ನಮ್ಮ ಮೆಟ್ರೋ' ಪ್ರಯಾಣ ಉಚಿತ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Namma Metro: ಏರ್ಪೋರ್ಟ್ ಮೆಟ್ರೋ ನೀಲಿ ಮಾರ್ಗಕ್ಕೆ ಬರಲಿವೆ 2 ಡ್ರವರ್ಲೆಸ್ ರೈಲು -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?











Click it and Unblock the Notifications