ಯಶ್ ಅವರ ಆಡಿಟರ್ ಬಸವರಾಜ್ ಕಚೇರಿ ಮೇಲೆ ಐಟಿ ದಾಳಿ
Recommended Video

ಬೆಂಗಳೂರು, ಜನವರಿ 11: ನಟ ಯಶ್ ಅವರ ಮನೆ, ಕಚೇರಿ ಮೇಲೆ ಐಟಿ ದಾಳಿ ನಡೆದ ಬಳಿಕ ಕೊಂಚ ಬ್ರೇಕ್ ತೆಗೆದುಕೊಂಡಿದ್ದ ಐಟಿ ಇಲಾಖೆ ಅಧಿಕಾರಿಗಳು, ಗುರುವಾರ ರಾತ್ರಿ ವೇಳೆ ಮತ್ತೆ ದಾಳಿ ಮುಂದುವರೆಸಿದ್ದಾರೆ. ಯಶ್ ಅವರ ಅಡಿಟರ್ ಬಸವರಾಜ್ ಅವರ ಕಚೇರಿ ಮೇಲೆ ಪರಿಶೀಲನೆ ನಡೆಸಲಾಗಿದೆ.
ಐದು ಅಧಿಕ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿದ್ದ ತಂಡವೊಂದು ಬೆಂಗಳೂರಿನ ಶೇಷಾದ್ರಿಪುರದಲ್ಲಿರುವ ಬಸವರಾಜ್ ಅವರ ಕಚೇರಿಗೆ ಗುರುವಾರ ಸಂಜೆ ವೇಳೆ ಭೇಟಿ ನೀಡಿದರು. ಈ ವೇಳೆಯಲ್ಲಿ ಬಸವರಾಜ್ ಅವರು ಕಚೇರಿಯಲ್ಲೇ ಇದ್ದರು ಎಂದು ತಿಳಿದು ಬಂದಿದೆ.
ಯಶ್ ಸೇರಿದಂತೆ ಹಲವು ನಟ, ನಿರ್ಮಾಪಕರಿಗೆ ಆಡಿಟರ್ ಆಗಿರುವ ಬಸವರಾಜ್ ಅವರ ಕಚೇರಿಯಲ್ಲಿ ಯಶ್ ಅವರಿಗೆ ಸಂಬಂಧಿಸಿದ ಆಸ್ತಿ ದಾಖಲೆ, ಬ್ಯಾಂಕ್ ಖಾತೆಯ ವಿವರಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ ಎನ್ನಲಾಗಿದೆ.

ತಡರಾತ್ರಿವರೆಗೂ ದಾಖಲೆಗಳ ಪರಿಶೀಲನೆ ಮುಂದುವರೆದಿದ್ದು, ಇಬ್ಬರು ಅಧಿಕಾರಿಗಳು ಕಚೇರಿಯಿಂದ ಮುರ್ನಾಲ್ಕು ಬ್ಯಾಗ್ ಗಳೊಂದಿಗೆ ಹೊರಕ್ಕೆ ಹೋಗಿದ್ದು ಬಿಟ್ಟರೆ, ಹೆಚ್ಚಿನ ಬೆಳವಣಿಗೆ ಕಂಡು ಬಂದಿಲ್ಲ. ಯಶ್ ಅವರು ಆದಾಯ ತೆರಿಗೆ ಕಚೇರಿಗೆ ತೆರಳಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಬೇಕಿದೆ. ಇದಕ್ಕೂ ಮುನ್ನ ಈ ದಾಳಿ ನಡೆದಿರುವುದು ಕುತೂಹಲ ಮೂಡಿಸಿದೆ.
ಇತ್ತೀಚೆಗಷ್ಟೇ ನಟರಾದ ಶಿವರಾಜ್ ಕುಮಾರ್, ಸುದೀಪ್, ಪುನೀತ್ ರಾಜ್ ಕುಮಾರ್, ಯಶ್ ಹಾಗೂ ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್, ವಿಜಯ ಕಿರಗಂದೂರು, ಜಯಣ್ಣ, ಸಿ.ಆರ್. ಮನೋಹರ್ ಅವರ ನಿವಾಸಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು.
ಸುಮಾರು 109ಕೋಟಿ ಬೇನಾಮಿ ಆಸ್ತಿ ಪತ್ತೆಯಾಗಿತ್ತು. ಇದಾದ ಬಳಿಕ ನಟ ಪುನೀತ್, ರಾಕ್ ಲೈನ್ ವೆಂಕಟೇಶ್, ಶಿವರಾಜ್ ಕುಮಾರ್ ಅವರು ಐಟಿ ಕಚೇರಿಗೆ ಭೇಟಿ ನೀಡಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications