ಜನರ ಶೈಕ್ಷಣಿಕ, ಆರ್ಥಿಕ ಸ್ಥಿತಿ ಸುಧಾರಿಸುತ್ತಿದ್ದರೂ ರಾಜ್ಯದಲ್ಲಿ ಅಪರಾಧ ಪ್ರಮಾಣ ಹೆಚ್ಚಳ- ಗೃಹ ಸಚಿವ ಆರಗ ಜ್ಞಾನೇಂದ್ರ
ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿಯಲ್ಲಿ ದಾಖಲಾಗಿರುವ ಅಪರಾಧಗಳ ಸಂಖ್ಯೆಯು ಕಳೆದ ಮೂರು ವರ್ಷಗಳಲ್ಲಿ ಪ್ರತಿ ವರ್ಷ 14,000 ದಷ್ಟು ಏರಿಕೆಯಾಗಿದೆ.
ಬೆಂಗಳೂರು, ಫೆಬ್ರವರಿ. 24: ಸಾಮಾನ್ಯವಾಗಿ ಜನರ ಶೈಕ್ಷಣಿಕ ಮತ್ತು ಆರ್ಥಿಕ ಪರಿಸ್ಥಿತಿ ಸುಧಾರಿಸಿದಂತೆ ಅಪರಾಧಗಳು ಕಡಿಮೆಯಾಗುತ್ತವೆ ಎಂಬ ನಂಬಿ ಎಲ್ಲರಲ್ಲೂ ಇರುತ್ತದೆ. ಆದರೆ, ಜನರ ಶಿಕ್ಷಣ ಮತ್ತು ಆರ್ಥಿಕ ಸ್ಥಿತಿಗತಿಗಳು ಸುಧಾರಿಸುತ್ತಿದ್ದರೂ ರಾಜ್ಯದಲ್ಲಿ ಅಪರಾಧ ಪ್ರಮಾಣ ಹೆಚ್ಚಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಗುರುವಾರ ರಾಜ್ಯ ವಿಧಾನಸಭೆಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.
"ಜನರು ಉತ್ತಮ ಶಿಕ್ಷಣ ಪಡೆಯುತ್ತಿರುವಾಗ ಮತ್ತು ಅವರ ಆರ್ಥಿಕ ಸ್ಥಿತಿಗತಿ ಸುಧಾರಿಸುತ್ತಿರುವ ಜೊತೆಗೆ ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗುತ್ತಿರುವುದು ದುರದೃಷ್ಟಕರ" ಎಂದು ಆರಗ ಜ್ಞಾನೇಂದ್ರ ಕಳವಳ ವ್ಯಕ್ತಪಡಿಸಿದ್ದಾರೆ. ಗೃಹ ಸಚಿವರ ಮಾತಿಗೆ ಸಹಮತ ವ್ಯಕ್ತಪಡಿಸಿದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಶಿಕ್ಷಣದಲ್ಲಿ ಸುಧಾರಣೆಯಾಗುತ್ತಿದ್ದಂತೆ ಅಪರಾಧ ಪ್ರಕರಣಗಳ ಅಂಕಿ ಸಂಖೆಗಳು ಹೆಚ್ಚಾಗುತ್ತಿವೆ ಎಂದಿದ್ದಾರೆ.

ರಾಜ್ಯ ಗೃಹ ಇಲಾಖೆಯ ಅಂಕಿ ಅಂಶಗಳು, ವಿಶೇಷವಾಗಿ ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿಯಲ್ಲಿ ದಾಖಲಾಗಿರುವ ಅಪರಾಧಗಳ ಸಂಖ್ಯೆಯು ಕಳೆದ ಮೂರು ವರ್ಷಗಳಲ್ಲಿ ಪ್ರತಿ ವರ್ಷ 14,000 ದಷ್ಟು ಏರಿಕೆಯಾಗಿದೆ. ಆದರೆ ವಿಶೇಷ ಸ್ಥಳೀಯ ಕಾನೂನುಗಳು (SLL) ಮತ್ತು ಸೈಬರ್ ಅಪರಾಧಗಳ ಅಡಿಯಲ್ಲಿ ದಾಖಲಾದ ಪ್ರಕರಣಗಳಲ್ಲಿ ಸುಮಾರು 4,000 ಹೆಚ್ಚಳವಾಗಿದೆ ಎಂಬಮಾಹಿತಿಯನ್ನು ಹೊರಹಾಕಿದೆ.
ಹನೂರಿನ ಕಾಂಗ್ರೆಸ್ ಶಾಸಕ ಆರ್ ನರೇಂದ್ರ ಅವರ ಅಭಿಪ್ರಾಯಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಹ ಒಪ್ಪಿಗೆ ಸೂಚಿಸಿದ್ದಾರೆ. ಶಾಸಕ ಆರ್ ನರೇಂದ್ರ ಅವರು ವಿಧಾನಸಭೆಯಲ್ಲಿ ಆರಂಭಿಸಿದ ಚರ್ಚೆಗೆ ಪ್ರತಿಕ್ರಿಯಿಸಿದ ಸಚಿವ ಆರಗ ಜ್ಞಾನೇಂದ್ರ, ಅಪರಾಧ ಪ್ರಕರಣಗಲ ಬಗ್ಗೆ ಉತ್ತಮ ತನಿಖೆ ಮತ್ತು ಶಿಕ್ಷೆಯ ಪ್ರಮಾಣವನ್ನು ಸುಧಾರಿಸಲು ಹಲವಾರು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ.

ಈ ಹಿಂದೆ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಗಳನ್ನು ಪಡೆಯುವಲ್ಲಿ ವಿಳಂಬ ಸೇರಿದಂತೆ ವಿವಿಧ ಕಾರಣಗಳಿಂದ ಮೂರು ವರ್ಷಗಳ ನಂತರ ಪ್ರಕರಣಗಳು ವಿಚಾರಣೆಗೆ ಬರುತ್ತಿವೆ. ಇಂತಹ ವಿಳಂಬದ ಸಮಸ್ಯೆಯನ್ನು ಪರಿಹರಿಸಲು, ರಾಜ್ಯ ಸರ್ಕಾರವು ವಿಧಿವಿಜ್ಞಾನ ಪ್ರಯೋಗಾಲಯಗಳ ಸಂಖ್ಯೆಯನ್ನು ಹೆಚ್ಚಿಸಿದೆ. ಇದಲ್ಲದೆ, ಅಪರಾಧದ ಸ್ಥಳದಿಂದ ಸಾಕ್ಷ್ಯವನ್ನು ಸಂಗ್ರಹಿಸಲು ತಜ್ಞರು ರಾಜ್ಯ ಸರ್ಕಾರವು ಅಪರಾಧ ಅಧಿಕಾರಿಗಳನ್ನು (ಎಸ್ಒಸಿಒ) ನೇಮಿಸಿದೆ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.
"ಅತ್ಯಾಚಾರ ಅಥವಾ ಕೊಲೆ ಪ್ರಕರಣಗಳು ವರದಿಯಾದಾಗ, ಸಬ್ ಇನ್ಸ್ಪೆಕ್ಟರ್ ಸ್ಥಳಕ್ಕೆ ಹೋಗಿ ಸಾಕ್ಷ್ಯ ಸಂಗ್ರಹಿಸುತ್ತಾರೆ. ಆದರೆ, ಈಗ ನಾವು ತಜ್ಞರ ಮೂಲಕ ಸಾಕ್ಷ್ಯ ಸಂಗ್ರಹಿಸುವ ಪ್ರಯತ್ನ ಮಾಡುತ್ತಿದ್ದೇವೆ. ಅದಕ್ಕಾಗಿಯೇ ನಾವು ಗುಜರಾತ್ ಎಫ್ಎಸ್ಎಲ್ ವಿಶ್ವವಿದ್ಯಾಲಯದಿಂದ ವಿಶೇಷ ತರಬೇತಿ ಪಡೆದ 206 ಎಸ್ಒಸಿಒ ಅವರನ್ನು ನೇಮಿಸಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯ ಸರಕಾರ ಪ್ರತಿ ತಾಲೂಕಿನಲ್ಲಿ ಒಬ್ಬ ಎಸ್ಒಸಿಒ ನಿಯೋಜಿಸಲಿದೆ. ಇಲಾಖೆಯು ಸೈಬರ್ ಅಪರಾಧಗಳ ತನಿಖೆಯ ತಂಡಗಳನ್ನು ಬಲಪಡಿಸಿದೆ" ಎಂದು ಮಾಹಿತಿ ನೀಡಿದ್ದಾರೆ.
"ನಮ್ಮ ಅಧಿಕಾರಿಗಳು ಎಫ್ಐಆರ್ ದಾಖಲಿಸುತ್ತಾರೆ. ಚಾರ್ಜ್ಶೀಟ್ ಸಲ್ಲಿಸುತ್ತಾರೆ, ಆದರೆ ಯಾವುದೇ ಶಿಕ್ಷೆಯಾಗದಿದ್ದರೆ, ಪೊಲೀಸರು ನಿರಾಶೆಗೊಳ್ಳುತ್ತಾರೆ. ಇದು ಅಪರಾಧಿಗಳಿಗೂ ಉತ್ತೇಜನ ನೀಡುತ್ತಿದೆ. ಈ ವರ್ಷವೇ ಸರ್ಕಾರ ವಿವಿಧೆಡೆ 200 ಕೋಟಿ ರೂಪಾಯಿ ವೆಚ್ಚದಲ್ಲಿ ಪೊಲೀಸ್ ಠಾಣೆಗಳನ್ನು ನಿರ್ಮಿಸುತ್ತಿದೆ. ಎಲ್ಲಾ ಕೇಂದ್ರ ಕಾರಾಗೃಹಗಳಲ್ಲಿ ಹೆಚ್ಚುವರಿ ಬ್ಯಾರಕ್ ಜೊತೆಗೆ ಶಿವಮೊಗ್ಗದಲ್ಲಿ ಹೊಸ ಜೈಲು ನಿರ್ಮಿಸಲಾಗುತ್ತಿದೆ" ಎಂದು ಗೃಹ ಸಚಿವರು ಹೇಳಿದ್ದಾರೆ. ಇದಕ್ಕೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಅಪರಾಧ ತಡೆಗೆ ರಾಜ್ಯ ಸರ್ಕಾರ ಈ ಕ್ರಮಗಳನ್ನು ಕೈಗೊಂಡರೆ ರಾಜ್ಯದ ಜೈಲುಗಳು ಭರ್ತಿಯಾಗಲಿವೆ ಎಂದಿದ್ದಾರೆ.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ










Click it and Unblock the Notifications