ಲಾಲ್ಬಾಗ್ ಪ್ರದರ್ಶನಕ್ಕೆ ಬಂದವರು 5 ಲಕ್ಷ ಜನ
ಬೆಂಗಳೂರು, ಆ.18 : ಸ್ವಾತಂತ್ರ್ಯೋತ್ಸವ ಅಂಗವಾಗಿ ಬೆಂಗಳೂರಿನ ಸಸ್ಯಕಾಶಿ ಲಾಲ್ಬಾಗ್ನಲ್ಲಿ ಆಯೋಜಿಸಲಾಗಿದ್ದ ಹತ್ತು ದಿನಗಳ ಫಲಪುಷ್ಪ ಪ್ರದರ್ಶನಕ್ಕೆ ಭಾನುವಾರ ತೆರೆಬಿದ್ದಿದೆ. 5 ಲಕ್ಷ ಜನರು ಬಾರಿಯ ಪ್ರದರ್ಶನಕ್ಕೆ ಭೇಟಿ ನೀಡಿರುವ ಅಂದಾಜಿದ್ದು, ಸುಮಾರು ರೂ 1.79 ಕೋಟಿ ಶುಲ್ಕ ಸಂಗ್ರಹವಾಗಿದೆ.
ಮೈಸೂರು ಉದ್ಯಾನ ಕಲಾ ಸಂಘ ಮತ್ತು ತೋಟಗಾರಿಕೆ ಇಲಾಖೆ ಜಂಟಿಯಾಗಿ 200ನೇ ಫಲಪುಷ್ಪ ಪ್ರದರ್ಶನವನ್ನು ಲಾಲ್ಬಾಗ್ನಲ್ಲಿ ಆಯೋಜಿಸಿದ್ದವು. ಮೈಸೂರು ಅರಮೆನೆ ಈ ಬಾರಿಯ ಪ್ರದರ್ಶನದ ಪ್ರಮುಖ ಆಕರ್ಷಣೆಯಾಗಿತ್ತು. ಹತ್ತುದಿನಗಳ ಪ್ರದರ್ಶನ ಭಾನುವಾರ ಮುಕ್ತಾಯವಾಗಿದೆ. [ಲಾಲ್ ಬಾಗ್ ನಲ್ಲಿ ಮೈಸೂರು ಅರಮನೆ ನೋಡಿ]

ಈ ಬಾರಿ ಪ್ರದರ್ಶನದಲ್ಲಿ ದಾಖಲೆಯ ಶುಲ್ಕ ಸಂಗ್ರಹವಾಗಿದೆ. 2013ರಲ್ಲಿ ರೂ 1.46 ಕೋಟಿ ಸಂಗ್ರಹವಾಗಿತ್ತು. ಈ ಬಾರಿ 1.79 ಕೋಟಿ ಸಂಗ್ರಹವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸುಮಾರು 2 ಲಕ್ಷ ಮಕ್ಕಳು ಈ ಬಾರಿಯ ಫಲಪುಷ್ಪ ಪ್ರದರ್ಶನ ವೀಕ್ಷಿಸಿದ್ದಾರೆ. ಪಾಸ್ ಹೊಂದಿದವರು ಹಾಗೂ ಟಿಕೆಟ್ ಇಲ್ಲದೇ ಒಳ ಹೋದವರ ಸಂಖ್ಯೆಯೂ ಹೆಚ್ಚಾಗಿದೆ ಎನ್ನುತ್ತಾರೆ ಅಧಿಕಾರಿಗಳು.
ಹೂವಿನ ಅಲಂಕಾರ ಹಾಗೂ ಭದ್ರತೆಗಾಗಿ ಹೆಚ್ಚು ಹಣ ಖರ್ಚು ಮಾಡಲಾಗಿದೆ. ತ್ಯಾಜ್ಯ ವಿಲೇವಾರಿಯತ್ತಲೂ ಗಮನ ಹರಿಸಬೇಕಾಗಿದ್ದು, ಸೋಮವಾರ ಸಂಜೆ ವೇಳೆಗೆ ಲಾಲ್ಬಾಗ್ ಆವರಣವನ್ನು ಸ್ವಚ್ಛಗೊಳಿಸಲಿದ್ದೇವೆ ಅಧಿಕಾರಿಗಳು ತಿಳಿಸಿದ್ದಾರೆ. ಅಂತಿಮ ದಿನವಾದ ಭಾನುವಾರ ಕೂಡ ಸುಮಾರು 1 ಲಕ್ಷ ಮಂದಿ ಭೇಟಿ ನೀಡಿದ್ದರು. ಆದರೆ, ಪ್ರಮುಖ ಆಕರ್ಷಣೆ ಎನಿಸಿದ್ದ ಹೂವಿನ ಮೈಸೂರು ಅರಮನೆಯ ಕೆಲಭಾಗ ಒಣಗಿ ಹೋಗಿತ್ತು. [ಫಲಪುಷ್ಪ ಪ್ರದರ್ಶನದ ಚಿತ್ರಗಳು]
ಭಾನುವಾರ ಮಾರತ್ಹಳ್ಳಿಯ ನ್ಯೂ ಹೊರೈಜಾನ್ ಕಾಲೇಜು ವಿದ್ಯಾರ್ಥಿಗಳು ಲಾಲ್ಬಾಗ್ ಆವರಣವನ್ನು ಸ್ವಚ್ಛಗೊಳಿಸುವ ಅಭಿಯಾನ ನಡೆಸಿದರು.ಜನಸಾಗರ ಹರಿದುಬಂದಿದ್ದರಿಂದ ಉದ್ಯಾನದಲ್ಲಿ ಕಸದ ರಾಶಿಯೇ ನಿರ್ಮಾಣವಾಗಿತ್ತು. ಸುಮಾರು 40 ವಿದ್ಯಾರ್ಥಿಗಳು ಕಸ ಪೊರಕೆ ಹಿಡಿದು ನಾಲ್ಕೈದು ಗಂಟೆ ಸ್ವಚ್ಛಗೊಳಿಸಿದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications