ಜಯನಗರ ವಿಧಾನಸಭಾ ಕ್ಷೇತ್ರ 'ಮಾದರಿ' ಪ್ರಣಾಳಿಕೆ
ಬೆಂಗಳೂರು, ಜೂನ್ 03: ಜಯನಗರ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರವಿ ಕೃಷ್ಣಾರೆಡ್ಡಿಯವರು ಜಯನಗರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಪಣತೊಟ್ಟಿದ್ದಾರೆ. ಜಯನಗರ ಕ್ಷೇತ್ರಕ್ಕೆ ಜೂನ್ 11 ರಂದು ಮತದಾನ ನಡೆಯಲಿದ್ದು,
ಈ ನಿಟ್ಟಿನಲ್ಲಿ ಅವರು ಜಯನಗರ ನಾಲ್ಕನೇ ಬ್ಲಾಕಿನ ಮಯ್ಯಾಸ್ ವೃತ್ತದಲ್ಲಿ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮವನ್ನು ಏರ್ಪಡಿಸಿದ್ದರು. ಈ ಸಮಾರಂಭದಲ್ಲಿ ಕ್ಷೇತ್ರದ ಹಿರಿಯ ನಾಗರಿಕರಾದ ಶ್ರೀಮತಿ ಶೋಭಾ ಕಿಣಿ, ಡಾ. ಕೆ. ಶಿವರಾಂ, ಆನೆಪ್ಪ ಮತ್ತು ನಂಜುಂಡ ರಾವ್ ಅವರುಗಳು ರವಿ ಕೃಷ್ಣಾರೆಡ್ಡಿಯವರ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.

ತಮ್ಮ ಪ್ರಣಾಳಿಕೆಯಲ್ಲಿ ಜಯನಗರ ಕ್ಷೇತ್ರವನ್ನು ಲಂಚಮುಕ್ತ ಮಾಡುವುದು, ಶಿಕ್ಷಣ ಮತ್ತು ಆರೋಗ್ಯಕ್ಕೆ ಒತ್ತು, ಪರಿಸರ ಸ್ನೇಹಿ ಹಾಗು ಕಸಮುಕ್ತ ಕ್ಷೇತ್ರವನ್ನಾಗಿ ಮಾಡಲು ಬದ್ಧರಾಗಿರುವುದಾಗಿ ತಮ್ಮ ಪ್ರಣಾಳಿಕೆಯಲ್ಲಿ ಹೇಳಿದ್ದಾರೆ.
ಪ್ರಣಾಳಿಕೆಗೆ ಜಯನಗರ ಕ್ಷೇತ್ರದ ಮತದಾರರನ್ನು ಭೇಟಿ ಮಾಡಿ ಅವರ ಸಲಹೆ ಸೂಚನೆಗಳನ್ನು ಪಡೆದು ಹಾಗು ಇಡೀ ಕ್ಷೇತ್ರದ ಪರ್ಯಟನೆ ಮಾಡಿ ತಯಾರಿಸಲಾಗಿದೆ. ಇದೇ ಸಂದರ್ಭದಲ್ಲಿ, ಆಡಳಿತದಲ್ಲಿ ಜನರ ಸಹಭಾಗಿತ್ವ, ಬೀದಿ ವ್ಯಾಪಾರಿಗಳ ರಕ್ಷಣೆ, ಉತ್ತಮ ವಸತಿ ಸೌಕರ್ಯ, ಸರ್ಕಾರಿ ಭೂಮಿಯನ್ನು ರಕ್ಷಿಸಿ, ಅಲ್ಲಿ ಸಾರ್ವಜನಿಕ ಉದ್ಯಾನ ಮತ್ತು ಇತರೆ ಸೌಕರ್ಯಗಳನ್ನು ಒದಗಿಸಲು ಕಾರ್ಯಕ್ರಮ ಹಾಕಿಕೊಂಡಿದ್ದಾರೆ.
ಹಾಗೆಯೇ, ಅವರ ಶಾಸಕರಾಗಿರುವ ಅವಧಿಯಲ್ಲಿ ಯಾವುದೇ ಆಸ್ತಿಯನ್ನು ಕೊಳ್ಳುವುದಿಲ್ಲ, ಯಾವುದೇ ಲಾಭ ತರುವ ವ್ಯವಹಾರವನ್ನಾಗಲಿ, ಉದ್ದಿಮೆಯನ್ನಾಗಲಿ ನಡೆಸುವುದಿಲ್ಲ, ಮತ್ತು ಕುಟುಂಬದ ಖರ್ಚು ವೆಚ್ಚಗಳನ್ನೆಲ್ಲ ಶಾಸಕನಾಗಿ ಅವರಿಗೆ ಬರುವ ಸಂಬಳ ಮತ್ತು ಅವರ ಪತ್ನಿಯ ಆದಾಯದಲ್ಲಿ ಮಾತ್ರ ನಿಭಾಯಿಸುವುದಾಗಿ ಕ್ಷೇತ್ರದ ಜನತೆಗೆ ವಚನ ನೀಡಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications