ಯುವಕರು ವೈಜ್ಞಾನಿಕ ಸಂಶೋಧನೆಗಳಲ್ಲಿ ತೊಡಗಬೇಕು
ಬೆಂಗಳೂರು, ಸೆ.3 : ವಿಜ್ಞಾನ ಮತ್ತು ವೈಜ್ಞಾನಿಕ ಸಂಶೋಧನಾ ಕ್ಷೇತ್ರದಲ್ಲಿ ಭಾರತ ಬೇರೆ ದೇಶಗಳಿಗೆ ಹೋಲಿಸಿದಾಗ ಹಿಂದುಳಿದಿದೆ. ದೇಶದ ಯುವಕರು ಈ ಕ್ಷೇತ್ರಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಂಡರೆ ಭಾರತ ಇತರ ದೇಶಗಳಿಗೆ ಪೈಪೋಟಿ ನೀಡಲು ಸಾಧ್ಯವಾಗುತ್ತದೆ ಎಂದು ಭಾರತರತ್ನ ಪ್ರಶಸ್ತಿ ವಿಜೇತ ವಿಜ್ಞಾನಿ ಪ್ರೊ.ಸಿ.ಎನ್.ಆರ್.ರಾವ್ ಹೇಳಿದ್ದಾರೆ.
ಬೆಂಗಳೂರಿನ ಕೆಎಲ್ಇ ಸಂಸ್ಥೆಯ ಎಸ್.ನಿಜಲಿಂಗಪ್ಪ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಂಗಳವಾರ ಪಾಲ್ಗೊಂಡು ಮಾತನಾಡಿದ ಸಿ.ಎನ್.ಆರ್.ರಾವ್ ಅವರು, ಇತರ ದೇಶಗಳಿಗೆ ಹೋಲಿಕೆ ಮಾಡಿ ನೋಡಿದರೆ, ವಿಜ್ಞಾನ ಮತ್ತು ವೈಜ್ಞಾನಿಕ ಸಂಶೋಧನಾ ಕ್ಷೇತ್ರದಲ್ಲಿ ಭಾರತ ಹಿಂದುಳಿದಿದೆ ಎಂದು ಹೇಳಿದರು. [ವಿಜ್ಞಾನ ಕ್ಷೇತ್ರದ ಅಭಿವೃದ್ಧಿಗೆ ದುಡಿಯುವೆ : ರಾವ್]

ಇಂದಿನ ದಿನಗಳಲ್ಲಿ ವೈಜ್ಞಾನಿಕ ಕ್ಷೇತ್ರಗಳಲ್ಲಿ ಸಾಕಷ್ಟು ಸಂಶೋಧನೆಗಳು ಆಗುತ್ತಿಲ್ಲ. ಇಂದಿನ ಯುವಕರು ಈ ಕ್ಷೇತ್ರಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಂಡರೆ ಬೇರೆ ದೇಶಗಳಿಗೆ ನಾವು ಪೈಪೋಟಿ ನೀಡಲು ಸಾಧ್ಯವಾಗುತ್ತದೆ ಎಂದು ಸಿ.ಎನ್.ಆರ್.ರಾವ್ ಅಭಿಪ್ರಾಯಪಟ್ಟರು. [ಸಿ.ಎನ್.ಆರ್.ರಾವ್ ಸಂದರ್ಶನ ಓದಿ]
ಅಮೆರಿಕಾ ವಿಶ್ವದಲ್ಲೇ ಶೇ 64ರಷ್ಟು ಕೊಡುಗೆಯನ್ನು ವಿಜ್ಞಾನ ಕ್ಷೇತ್ರಕ್ಕೆ ನೀಡಿದೆ. ಆದರೆ, ಭಾರತ ಶೇ 2.5ರಷ್ಟು ಮಾತ್ರ ಕೊಡುಗೆ ನೀಡಲು ಸಾಧ್ಯವಾಗಿದೆ. ಕೆಲವು ದಶಕಗಳ ಹಿಂದೆ ಭಾರತ ಮತ್ತು ಚೀನಾ ವಿಜ್ಞಾನ ಕ್ಷೇತ್ರಕ್ಕೆ ಶೇ 2.5ರಷ್ಟು ಕೊಡುಗೆ ನೀಡಿದ್ದವು. ಆದರೆ, ಈಗ ಚೀನಾ ತನ್ನ ಕೊಡುಗೆಯನ್ನು ಶೇ 15ರಷ್ಟು ವಿಸ್ತರಿಸಿಕೊಂಡಿದೆ ಎಂದು ರಾವ್ ಹೇಳಿದರು.
ವಿಜ್ಞಾನ ಮತ್ತು ವೈಜ್ಞಾನಿಕ ಸಂಶೋಧನೆ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ಇದು ಸರಿಯಾದ ಸಮಯವಾಗಿದ್ದು, ದೇಶದ ಯುವಕರು ಈ ಕ್ಷೇತ್ರಗಳಲ್ಲಿ ಹೆಚ್ಚಾಗಿ ತೊಡಿಸಿಕೊಳ್ಳಬೇಕು ಎಂದು ರಾವ್ ಕರೆ ನೀಡಿದರು. ದೇಶದಲ್ಲಿ ಹಲವಾರು ವ್ಯಕ್ತಿಗಳು ವೈಯಕ್ತಿವಾಗಿ ಸಾಧನೆ ಮಾಡಿದ್ದಾರೆ. ಆದರೆ, ದೇಶವಾಗಿ ನಾವು ಸಾಧನೆ ಮಾಡುವುದಲ್ಲಿ ಹಿಂದುಳಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

ನಮ್ಮ ದೇಶದ ಯುವಕರು ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆಗಳನ್ನು ಓದುವ ಮೂಲಕ ಸ್ಫೂರ್ತಿ ಪಡೆದುಕೊಳ್ಳಬೇಕು. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಿದ ವ್ಯಕ್ತಿಗಳ ಜೀವನ ಚರಿತ್ರೆಗಳನ್ನು ಓದುವುದರಿಂದ ಸ್ಫೂರ್ತಿ ಪಡೆಯಬಹುದು ಎಂದು ರಾವ್ ಸಲಹೆ ನೀಡಿದರು.
ಮಾಜಿ ರಾಜ್ಯಪಾಲ ಎಂ.ಪಿ.ರಾಮಜೋಯಿಸ್ ಮುಂತಾದವರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಪ್ರೊ.ಸಿ.ಎನ್.ಆರ್.ರಾವ್ ದಂಪತಿಯನ್ನು ಸನ್ಮಾನಿಸಲಾಯಿತು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications