INDIA ಒಕ್ಕೂಟದ ಹಿಂದೂ ವಿರೋಧಿ ನಿಲುವು ಬಹಿರಂಗ: ಉದಯನಿಧಿ ಹೇಳಿಕೆಗೆ ಯಶ್‌ಪಾಲ್ ಸುವರ್ಣ ಆಕ್ರೋಶ

ಬೆಂಗಳೂರು, ಸೆಪ್ಟೆಂಬರ್‌, 04: ತಮಿಳುನಾಡು ಮುಖ್ಯಮಂತ್ರಿ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಭಾರತದ ಸಾಮಾಜಿಕ ವ್ಯವಸ್ಥೆಯ ಹೆಮ್ಮೆಯ ಪ್ರತೀಕವಾದ ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಸಮಸ್ತ ಹಿಂದೂ ಸಮಾಜಕ್ಕೆ ಅವಮಾನಿಸಿದ್ದಾರೆ. ಈ ಮೂಲಕ INDIA ವಿಪಕ್ಷಗಳ ಒಕ್ಕೂಟದ ಹಿಂದೂ ವಿರೋಧಿ ನಿಲುವು ಬಹಿರಂಗವಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತನ್ನ ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ನಿರ್ಧಿಷ್ಟ ಸಮುದಾಯದ ಓಲೈಕೆಗಾಗಿ ಹಿಂದೂ ದ್ವೇಷಿ ಹೇಳಿಕೆಯ ಮೂಲಕ ಸನಾತನ ಧರ್ಮ ಅಪಮಾನಿಸಲು ಮುಂದಾಗಿದ್ದಾರೆ. ಈ ಹಿಂದೆ ಬ್ರಿಟಿಷರು, ಮುಸ್ಲಿಂ ಮತಾಂಧ ರಾಜರು ಮತಾಂತರ, ದಬ್ಬಾಳಿಕೆಯ ಮೂಲಕ ಸನಾತನ ಧರ್ಮದ ನಿರ್ಮೂಲನೆಗೆ ವಿಫಲ ಪ್ರಯತ್ನಕ್ಕೆ ಮುಂದಾಗಿದ್ದರು. ಇದೀಗ ಅದೇ ಮನಸ್ಥಿತಿಯಲ್ಲಿ ಉದಯನಿಧಿ ಈ ಹೇಳಿಕೆಯ ಮೂಲಕ ಮಹಮ್ಮದ್ ಘೋರಿ, ಘಜನಿ ವಂಶದ ಪರಂಪರೆಯನ್ನು ಮುಂದುವರಿಸುವ ಕಾಯಕದಲ್ಲಿ ತೊಡಗಿದ್ದಾರೆ ಎಂದು ಹರಿಹಾಯ್ದರು.

INDIA Union hates Hinduism: Yashpal Anand Suvarna reaction on Udayanidhi Statement

ಸನಾತನ ಧರ್ಮ ಕೇವಲ ಒಂದು ಧರ್ಮವಾಗಿರದೇ ಭಾರತದ ಜನರ ಜೀವನ ಪದ್ಧತಿಯಾಗಿದ್ದು, ಕೇವಲ ಅಲ್ಪಸಂಖ್ಯಾತ ಓಲೈಕೆ, ಕ್ರೈಸ್ತ ಮತಾಂತರ ಸಂಸ್ಥೆಗಳ ಹಿಡನ್ ಅಜೆಂಡಾದ ಟೂಲ್ ಕಿಟ್ ಭಾಗವಾಗಿ ಉದಯನಿಧಿ ಬಹು ಸಂಖ್ಯಾತ ಹಿಂದೂ ದ್ವೇಷಿ ನಿಲುವು ತಾಳಿ ಓರ್ವ ಜವಾಬ್ದಾರಿ ಸಚಿವನಾಗಿ ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ಉದಯನಿಧಿ ಹೇಳಿಕೆಗೆ INDIA ಒಕ್ಕೂಟದ ಕಾಂಗ್ರೆಸ್ ಸಹಿತ ವಿವಿಧ ಪಕ್ಷಗಳು ದಿವ್ಯ ಮೌನ ತಾಳುವ ಮೂಲಕ ಪರೋಕ್ಷವಾಗಿ ತಮ್ಮ ಸಹಮತ ಸೂಚಿಸಿ ಹಿಂದೂ ವಿರೋಧಿ ಹೇಳಿಕೆಗೆ ಸಮ್ಮತಿ ಸೂಚಿಸಿದೆ. ವಿಪಕ್ಷ ನಾಯಕರು ತಮ್ಮ ನಿಲುವನ್ನು ಕೂಡಲೇ ಸ್ಪಷ್ಟಪಡಿಸಬೇಕು. ತಮಿಳುನಾಡು ಸರ್ಕಾರ ಹಿಂದೂ ವಿರೋಧಿ ಹೇಳಿಕೆ ನೀಡಿದ ಉದಯನಿಧಿಯನ್ನು ಕೂಡಲೇ ಮಂತ್ರಿ ಸ್ಥಾನದಿಂದ ವಜಾಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಜನತೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+