ಸಿಐಡಿ ಅರಣ್ಯ ಘಟಕದಿಂದ ಕಾಡಮ್ಮೆ ಕೊಂಬು ವಶ !
ಬೆಂಗಳೂರು, ಡಿಸೆಂಬರ್ 18: ವಿಶೇಷ ಕಾರ್ಯಾಚರಣೆ ನಡೆಸಿದ ಬೆಂಗಳೂರು ಸಿಐಡಿ ಅರಣ್ಯ ಘಟಕದ ಪೊಲೀಸರು ಕಾಡಮ್ಮೆ ಕೊಂಬು ವಶಪಡಿಸಿಕೊಂಡಿದ್ದಾರೆ. ಕಾಡಮ್ಮೆ ಕೊಂಬು ಮಾರಲು ಯತ್ನಿಸುತ್ತಿದ್ದ ಆರೋಪಿ ಬೈಕ್ ನಲ್ಲಿ ಪರಾರಿಯಾಗಿದ್ದಾನೆ.
ವನ್ಯ ಜೀವಿ ರಕ್ಷಣಾ ಕಾಯ್ದೆ ಉಲ್ಲಂಘಿಸಿ ಕಾಡಮ್ಮೆ ಕೊಂಬು ಮಾರಾಟ ಮಾಡುವ ಖಚಿತ ಮಾಹಿತಿ ಸಿಐಡಿ ಅರಣ್ಯ ಘಟಕದ ಪೊಲೀಸರಿಗೆ ಸಿಕ್ಕಿತ್ತು. ಮಾಹಿತಿ ಆಧರಿಸಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅಶೋಕ್ ಮತ್ತು ತಂಡ ರಾಮನಗರ ತಾಲೂಕಿನ ಬಿಡದಿ ಸಮೀಪ ಹಳ್ಳಿ ಬಳಿ ಕಾರ್ಯಾಚರಣೆಗೆ ಮುಂದಾಗಿದ್ದರು. ದ್ವಿಚಕ್ರ ವಾಹನದಲ್ಲಿ ಕಾಡಮ್ಮೆ ಕೊಂಬು ತಂದಿದ್ದ ಆರೋಪಿ ಪೊಲೀಸರ ಬಗ್ಗೆ ಸಂಶಯಗೊಂಡು ರಸ್ತೆ ಬದಿ ಚೀಲ ಬಿಸಾಡಿ ಪರಾರಿಯಾಗಿದ್ದಾನೆ. ಬ್ಯಾಗ್ ಪರಿಶೀಲಿಸಿದರೆ ಅದು ಕಾಡು ಕೊಂಬು ಪತ್ತೆಯಾಗಿದ್ದು, ರಾಮನಗರ ವಿಭಾಗದ ಅರಣ್ಯ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಶೋಧ ನಡೆಸಲಾಗುತ್ತಿದೆ.

Recommended Video
ಕಾಡು ಎಮ್ಮೆ ಕೊಂಬಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ದುಬಾರಿ ಬೆಲೆ ಇದೆ. ಅದರಲ್ಲೂ ಭಾರತದ ಕಾಡಮ್ಮೆ ಕೊಂಬುಗಳಿಗೆ ಬಹುಬೇಡಿಕೆ. ಐಶರಾಮಿ ಜೀವನ ನಡೆಸುವರು ಮನೆಯಲ್ಲಿ ಇಟ್ಟುಕೊಳ್ಳಲು ಲಕ್ಷಾಂತರ ರೂಪಾಯಿ ಕೊಟ್ಟು ಅಸಲಿ ಕಾಡಮ್ಮೆ ಕೊಂಬು ಖರೀದಿಸುತ್ತಾರೆ. ಇದಕ್ಕಾಗಿ ವನ್ಯ ಜೀವಿಗಳನ್ನು ಕೊಂದು ಅವನ್ನು ಕಾನೂನು ಬಾಹಿರವಾಗಿ ವಿದೇಶಗಳಿಗೆ ರವಾನೆ ಮಾಡುತ್ತಾರೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications