ಬೆಂಗಳೂರು 'ಸೇನಾ ಮೇಳ' ದಲ್ಲಿ ಪುಳಕಿತರಾದ ವಿದ್ಯಾರ್ಥಿಗಳು
ಬೆಂಗಳೂರು, ಆಗಸ್ಟ್, 14 : ದೈತ್ಯಾಕಾರದ ಟ್ಯಾಂಕರ್ ಏರಿ ಕುಪ್ಪಳಿಸುತ್ತಿದ್ದ ಪುಟಾಣಿ ವಿದ್ಯಾರ್ಥಿಗಳಿಗೆ ದಣಿವಿರಲಿಲ್ಲ. ಪಿಸ್ತೂಲು, ರೈಫಲ್ಗಳನ್ನು ಸವರುತ್ತಿದ್ದ ಆ ಪುಟಾಣಿಗಳ ಕುತೂಹಲ ತಣಿದಿರಲಿಲ್ಲ. ತೇಲುವ ಸೇತುವೆ ಮೇಲೆ ಕುಪ್ಪಳಿಸುತ್ತಿದ್ದವರಿಗಂತೂ ಸಮಯದ ಪರಿವೇ ಇರಲಿಲ್ಲ.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಭಾರತೀಯ ಸೇನೆ ನಗರದ ಮದ್ರಾಸ್ ಎಂಜಿನಿಯರ್ ಗ್ರೂಪ್ ಕೇಂದ್ರದಲ್ಲಿ ಗುರುವಾರ ಮತ್ತು ಶುಕ್ರವಾರ 'ಸೇನಾ ಮೇಳ' ಆಯೋಜನೆಗೊಳಿಸಿದೆ. ಆ ಸಮಯದಲ್ಲಿ ಇಂತಹ ಮನೋಹರ ದೃಶ್ಯಗಳು ಕಂಡು ಬಂದಿದ್ದು, ಮೇಳದಲ್ಲಿ ಲವಲವಿಕೆ ತುಂಬಿ ತುಳುಕುತ್ತಿತ್ತು.[ಮಂಗಳೂರಿನಲ್ಲಿ ಸೈನಿಕ ಭವನ ಲೋಕಾರ್ಪಣೆ]

ಪ್ರದರ್ಶನದಲ್ಲಿದ್ದ ವಿವಿಧ ಬಗೆಯ ಪಿಸ್ತೂಲ್, ರೈಫಲ್ಗಳು, ಕ್ಷಿಪಣಿ ಬಗ್ಗೆ ವಿದ್ಯಾರ್ಥಿಗಳು ಕುತೂಹಲಶೀಲರಾಗಿ ಮಾಹಿತಿ ಪಡೆಯುತ್ತಿದ್ದರು. ಮೇಳದಲ್ಲಿ ಭೂಮಾಪನ ಮಾಡುವ ಸುಧಾರಿತ ಉಪಕರಣಗಳು, ಸಂವಹನ ಸಾಧನಗಳು, ಬಗೆಬಗೆಯ ಪ್ಯಾರಾಚೂಟ್ ಗಳು ನೋಡುಗರಲ್ಲಿ ಬೆರಗು ಹುಟ್ಟಿಸಿದ್ದವು.
ನೆಲ ಬಗೆಯುವ, ಕಲ್ಲು, ಹಿಮಗಡ್ಡೆ ಒಡೆದು ಹಾಕುವ ದೈತ್ಯ ಯಂತ್ರೋಪಕರಣಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು. ಬಗೆ ಬಗೆಯ ಸೇತುವೆ, ಯುದ್ಧ ವಾಹನಗಳು, ಹಿಮ ಮತ್ತು ನೀರಿನಲ್ಲಿ ಸೈನಿಕರು ಬಳಸುವ ವಾಹಕಗಳು ಪ್ರದರ್ಶನಕ್ಕೆ ಮೆರಗು ಹೆಚ್ಚಿಸಿದ್ದವು.[ಅಪ್ರತಿಮ ಪ್ರಾಮಾಣಿಕ ಸೈನಿಕನಿಗೊಂದು ಸೆಲ್ಯೂಟ್]

ಬಾಂಬ್ ಪತ್ತೆ, ಸ್ಥಳಾಂತರ ಮತ್ತು ಎದುರಾಳಿಗಳನ್ನು ನಿಷ್ಕ್ರಿಯಗೊಳಿಸುವ ಸಾಧನಗಳು ಮೇಳದಲ್ಲಿ ಗಮನ ಸೆಳೆದವು. ಜೊತೆಗೆ ಮೇಳಕ್ಕೆ ಹಿನ್ನೆಲೆಯಾಗಿ ಕೇಳಿ ಬರುತ್ತಿದ್ದ ಸೇನೆಯ ಬ್ಯಾಂಡ್ ತಂಡದ ಸಂಗೀತ ಆಹ್ಲಾದಕರ ವಾತಾವರಣ ಸೃಷ್ಟಿಸಿತ್ತು.
ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಾಕಷ್ಟು ಮಾಹಿತಿ ಕಲೆಹಾಕಿದ್ದಾರೆ. ಸೇನಾ ಕಾರ್ಯವೈಖರಿ ಕಂಡು ಆಶ್ಚರ್ಯಚಕಿತರಾಗಿದ್ದಾರೆ. ವಿದ್ಯಾರ್ಥಿಗಳು ಇದರ ಕುರಿತಾಗಿ ಇನ್ನಷ್ಟು ಹೆಚ್ಚಿನ ತರಬೇತಿ ಪಡೆಯುವ ಉತ್ಸಾಹ ತೋರಿದ್ದಾರೆ ಎಂದು ಶಾಲಾ ಶಿಕ್ಷಕರು ಹೇಳಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಏಪ್ರಿಲ್ 1 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭ: 9ನೇ ತರಗತಿಯ ಪರಿಷ್ಕೃತ NCERT ಪಠ್ಯಪುಸ್ತಕ ವಿಳಂಬ, ಹೆಚ್ಚಾದ ಗೊಂದಲ












Click it and Unblock the Notifications