ಸಿಡ್ನಿ ಟೆಕ್ಕಿ ಪ್ರಭಾ ಕೊಲೆ ಪ್ರಕರಣ: ಸಂಬಂಧಿಕರಿಂದಲೇ ಹತ್ಯೆ?
ಬೆಂಗಳೂರು, ಫೆಬ್ರವರಿ 9: ಆಸ್ಟ್ರೇಲಿಯಾದಲ್ಲಿ ಹತ್ಯೆ ಗೀಡಾದ ನಗರದ ಸಾಫ್ಟ್ ವೇರ್ ಉದ್ಯೋಗಿ ಪ್ರಭಾಶೆಟ್ಟಿ ಪ್ರಕರಣ ಕುರಿತು ಸಿಡ್ನಿಯ ಪೊಲೀಸರು ಈ ಹತ್ಯೆಯು ಅವರ ಆಪ್ತರಿಂದಲೇ ಜರುಗಿದೆ ಎಂಬುದು ತಿಳಿದುಬಂದಿದೆ. ಕೆಲವು ದಿನದಲ್ಲಿಯೇ ಹತ್ಯೆ ನಿಗೂಢತೆಯನ್ನು ಬಯಲು ಮಾಡುವುದಾಗಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ.
ಈ ಪ್ರಕರಣ ಕುರಿತು 'ಎನ್ಎಸ್ಡಬ್ಲ್ಯು(ನ್ಯೂ ಸೌತ್ ವೇಲ್ಸ್) ನರಹತ್ಯೆ ವಿಭಾಗದ ಕ್ರೈಂ ಕಮಾಂಡ್ ರಿಚಿ ಸಿಮ್, ಹಿರಿಯ ಕಾನ್ಸ್ಟೇಬಲ್ ಗಳಾದ ಡೇನಿಯಲ್ ಲವೆಲ್ ಹಾಗೂ ಬಿಕ್ ಸಿಂಗ್ ಅವರ ತಂಡ ಜ.14ರಂದು ನಗರಕ್ಕೆ ಬಂದಿತ್ತು.
ಕುಟುಂಬದ ಆಪ್ತರ ಮೇಲೆಯೆ ಇರುವ ತೀವ್ರ ಶಂಕೆಯಿಂದಾಗಿ 28 ಜನರನ್ನು ವಿಚಾರಣೆಗೊಳಪಡಿಸಿ ದೃಶ್ಯ ಸಂಗ್ರಹವನ್ನು ಮಾಡಲಾಗಿತ್ತು. ವಿಚಾರಣೆಯಲ್ಲಿ ಪ್ರಭಾ ಪತಿ, ಅರುಣ್ ಕುಮಾರ್, ಅತ್ತೆ, ಮಾವ, ಪ್ರಭಾ, ಸ್ನೇಹಿತರು ಮತ್ತು ಪೋಷಕರನ್ನು ವಿಚಾರಣೆ ನಡೆಸಿದ್ದರು.[ಟೆಕ್ಕಿ ಪ್ರಭಾ ಅರುಣ್ ಕುಮಾರ್ ಮೃತದೇಹ ಬೆಂಗಳೂರಿಗೆ]

ಅಲ್ಲದೆ ಪತಿಯ ಕೈವಾಡ ವಿದೇಯೇ ಎಂಬ ಅನುಮಾನದಿಂದ ಎರಡು ಬಾರಿ ಅರುಣ್ ಕುಮಾರ್ ಅವರನ್ನು ಆಸ್ಟ್ರೇಲಿಯಾಕ್ಕೆ ಕರೆಸಿಕೊಂಡು ವಿಚಾರಣೆ ನಡೆಸಿದ್ದಾರೆ. ವಿಚಾರಣೆಯಲ್ಲಿ ಪತಿ-ಪತ್ನಿ ಇಬ್ಬರೂ ಅನ್ಯೋನ್ಯ ವಾಗಿದ್ದೆವು. 2012ರಿಂದ ಮೂರು ವರ್ಷ ಆಕೆ ಆಸ್ಟ್ರೇಲಿಯಾದಲ್ಲಿದ್ದಳು. ಒಮ್ಮೆ ಮಾತ್ರ ನಾನು ಆಸ್ಟ್ರೇಲಿಯಾಕ್ಕೆ ಬರಲು ಸಾಧ್ಯವಾಗಿತ್ತು.
2015ರ ಮಾರ್ಚ್ 7ರಂದು ನನ್ನನ್ನು ಯಾರೋ ಹಿಂಬಾಲಿಸುತ್ತಿದ್ದಾರೆ ಎಂದು ಕರೆ ಮಾಡಿದ್ದಳು ಆಗ ನಾನು ಆಕೆಗೆ ಧೈರ್ಯ ತುಂಬಿದ್ದೆ. ಆ ವೇಳೆಯಲ್ಲಿಯೇ ಆಕೆ ಚೀರಾಡಿದ್ದಳು ಕರೆ ಸ್ಥಗಿತವಾಗಿತ್ತು ಎಂದು ಅರುಣ್ ತಿಳಿಸಿದ್ದಾರೆ.
ಈ ವಿಚಾರಣೆಯಿಂದ ಸುಪಾರಿ ಹತ್ಯೆ ಎಂಬ ತೀರ್ಮಾನಕ್ಕೆ ಬಂದ ತಂಡ ನ್ಯಾಯಾಲಯಕ್ಕೆ ವರದಿಸಲ್ಲಿಸಿದೆ. ಇನ್ನು ಪ್ರಭಾ ಸಂಬಂಧಿಕ ನೊಬ್ಬ ಆಸ್ತಿ ಹಂಚಿಕೆ ವಿಚಾರವಾಗಿ ಪ್ರಭಾ ಪೋಷಕರ ಜತೆ ಗಲಾಟೆ ಮಾಡುತ್ತಿದ್ದ ಎಂಬ ವಿಚಾರ ತಿಳಿದು ಬಂದಿದ್ದು ಆಸ್ತಿ ವಿಚಾರವಾಗಿ ಸಂಚುರೂಪಿಸಿ ಸುಪಾರಿ ಹತ್ಯೆ ನಡೆದಿರ ಬಹುದೇ ಎಂಬ ಶಂಕೆ ವ್ಯಕ್ತವಾಗಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications