ಭಾರತದ ಮೊಟ್ಟ ಮೊದಲ ಬಿಟ್ ಕಾಯಿನ್ ಎಟಿಎಂ ಬಂದ್
ಬೆಂಗಳೂರು, ಅಕ್ಟೋಬರ್ 24: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ ಬಿಐ) ಅನುಮತಿ ಇಲ್ಲದೆ ಬಿಟ್ ಕಾಯಿನ್ ಎಟಿಎಂ ಸ್ಥಾಪಿಸಿದ್ದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ನಗರದ ಕೆಂಪ್ ಫೋರ್ಟ್ ನಲ್ಲಿದ್ದ ಎಟಿಎಂ ಕಿಯೋಸ್ಕ್ ಜಪ್ತಿ ಮಾಡಲಾಗಿದೆ.
ಜಯನಗರದ ನಿವಾಸಿ, ತುಮಕೂರು ಮೂಲದ 37 ವರ್ಷ ವಯಸ್ಸಿನ ಹರೀಶ್ ಬಿವಿ ಎಂಬಾತನನ್ನು ಎಚ್ಎಎಲ್ ಠಾಣೆ ಹಾಗೂ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ನಿಷೇಧಿತ ಬಿಟ್ ಕಾಯಿನ್ ದಂಧೆ ನಡೆಸುತ್ತಿದ್ದ ಆರೋಪವನ್ನು ಹೊರೆಸಲಾಗಿದ್ದು, ಈ ಸಂಬಂಧ ಆರೋಪಿಯನ್ನು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿ ಹರೀಶ್ ಬಳಿ ಇದ್ದ ಒಂದು ಮೊಬೈಲ್ ಫೋನ್, 2 ಲ್ಯಾಪ್ಟಾಪ್, 3 ಕ್ರೆಡಿಟ್ಕಾರ್ಡ್, 5 ಡೆಬಿಟ್ ಕಾರ್ಡ್, 1 ಪಾಸ್ಪೋರ್ಟ್, ಯುನೊಕಾಯಿನ್ ಕಂಪನಿಯ ಹೆಸರಿನ 5 ಸೀಲ್, 1 ಕ್ರಿಪ್ಟೋ ಕರೆನ್ಸಿಯ ಸಾಧನ ಮತ್ತು 1.8 ಲಕ್ಷ ರೂ. ನಗದು ಹಣ ವಶಪಡಿಸಿಕೊಳ್ಳಲಾಗಿದೆ

ಕಾನೂನು ಬಾಹಿರವಾಗಿ ಆನ್ಲೈನ್ ಮೂಲಕ ಕ್ರಿಪ್ಟೋ ಕರೆನ್ಸಿ ವ್ಯವಹಾರ ನಡೆಸುತ್ತಿದ್ದ. ಹಳೆ ವಿಮಾನ ನಿಲ್ದಾಣ ರಸ್ತೆಯ ಕೆಂಪ್ಫೋರ್ಟ್ ಮಾಲ್ನಲ್ಲಿ ಯುನೊಕಾಯಿನ್ ಕಂಪನಿಯ ಹೆಸರಿನಲ್ಲಿ ಎಟಿಎಂ ಕಿಯಾಸ್ಕೋ ಅಳವಡಿಸಿದ್ದ.
ಆದರೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜಾಜಿನಗರದಲ್ಲಿ ಕಚೇರಿ ಹೊಂದಿರುವ ಯುನೋಕಾಯಿನ್ ಟೆಕ್ನಾಲಜೀಸ್ ಕಂಪನಿ ಸ್ಥಾಪಕ ಸಾತ್ವಿಕ್ ವಿಶ್ವನಾಥ್, ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಬಿಟ್ ಕಾಯಿನ್ ಮಾದರಿ ಕ್ರಿಪ್ಟೋ ಕರೆನ್ಸಿ ಬಳಕೆಗೆ ಭಾರತದಲ್ಲಿ ಕಾನೂನು ಮಾನ್ಯತೆ ಇಲ್ಲ ಎಂದಿದ್ದಾರೆ.

ಆದರೆ, ಎಟಿಎಂ ಅಳವಡಿಕೆಯಿಂದ ಕಾನೂನು ಉಲ್ಲಂಘನೆ ಆಗಿದೆ ಎಂದು ಕೆಲ ಮಾಧ್ಯಮಗಳಲ್ಲಿ ಸುದ್ದಿಯನ್ನು ತಪ್ಪಾಗಿ ಬಿಂಬಿಸಲಾಗಿದೆ. ಎಟಿಎಂ ಇನ್ನೂ ಪರೀಕಾರ್ಥವಾಗಿ ಬಳಸಲಾಗುತ್ತಿತ್ತು. ಯಾವ ಗ್ರಾಹಕರು ಇದನ್ನು ಉಪಯೋಗಿಸಿಲ್ಲ. ನಮ್ಮ ಕಂಪನಿ ಎಟಿಎಂ ಹಾಗೂ ಬಿಟ್ ಕಾಯಿನ್ ಬಗ್ಗೆ ಅನೇಕ ತಪ್ಪು ಮಾಹಿತಿಯುಳ್ಳ ವಿಡಿಯೋಗಳು ಪ್ರಸಾರವಾಗಿವೆ ಎಂದಿದ್ದಾರೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications