ಇಂದಿರಾ ಕ್ಯಾಂಟೀನ್: ಸ್ವಚ್ಚತೆಗೆ, ಗುಣಮಟ್ಟಕ್ಕಾಗಿ ಬಿಬಿಎಂಪಿ ಅಧಿಕಾರಿ ನೇಮಕ, ಸಹಾಯವಾಣಿ ಆರಂಭ
ಬೆಂಗಳೂರು, ಜುಲೈ 11: ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷೆ ಯೋಜನೆಯಾದ ಮತ್ತು ಸಿಎಂ ಸಿದ್ದರಾಮಯ್ಯನವರ ಕನಸಿನ ಕೂಸಾದ 'ಇಂದಿರಾ ಕ್ಯಾಂಟಿನ್' ನಲ್ಲಿನ ಆಹಾರಗಳಿಗೆ ಹೆಚ್ಚಿನ ಹಣ ಪಡೆಯಲಾಗುತ್ತದೆ ಎಂಬ ಮಾತು ಕೇಳಿ ಬಂದಿದೆ. ಹೀಗಾಗಿ ಜನರಿಗೆ ಹೊರೆಯಾಗದಂತೆ ತಡೆಯಲು ಮತ್ತು ಉತ್ತಮ ವ್ಯವಸ್ಥೆ ನೀಡಲು, ಹೊಸದಾಗಿ ಸಹಾಯವಾಣಿ ಆರಂಭಿಸಲು ಬಿಬಿಎಂಪಿ ಮುಂದಾಗಿದೆ.
ನಿತ್ಯ ಸಾವಿರಾರು ಮಂದಿ ಬಡವರ ಹೊಟ್ಟೆ ತುಂಬಿಸುವ ಯೋಜನೆಯಾದ ಇಂದಿರಾ ಕ್ಯಾಂಟೀನ್ಗೆ ಇತ್ತಿಚೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭೇಟಿ ನೀಡಿದ್ದರು ಈ ವೇಳೆ ಇಂದಿರಾ ಕ್ಯಾಂಟೀನ್ನಲ್ಲಿ ಊಟ, ತಿಂಡಿಗೆ ಹೆಚ್ಚಿನ ಹಣ ಪಡೆಯುತ್ತಿರುವ ಬಗ್ಗೆ ಮಾಹಿತಿ ಗೊತ್ತಾಗಿದೆ. ಇದನ್ನು ಪರೀಶಿಲಿಸಿ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದರು.

ಈಗಾಗಲೇ ಇಂದಿರಾ ಕ್ಯಾಂಟೀನ್ ಅಭಿವೃದ್ಧಿಗಾಗಿ ಇತ್ತಿಚೆಗೆ ಮಂಡನೆಯಾದ ರಾಜ್ಯ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರು 100 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ಆದರೆ ಊಟ, ತಿಂಡಿಗೆ ಹೆಚ್ಚಿನ ಹಣ ಪಡೆಯುತ್ತಿರುವುದನ್ನು ಸರಿಪಡಿಸಲು ಬಿಬಿಎಂಪಿ ಕ್ರಮ ಕೈಗೊಳ್ಳುತ್ತಿದೆ. ಜೊತೆಗೆ ಆಹಾರ ಗುಣಮಟ್ಟ ಕಾಯ್ದುಕೊಳ್ಳಲು, ಸ್ವಚ್ಚತೆ, ನೀರಿನ ವ್ಯವಸ್ಥೆ ನಿರ್ವಹಣೆ ಸೇರಿದಂತೆ ಒಟ್ಟಾರೆ ಇಂದಿರಾ ಕ್ಯಾಂಟಿನ್ಗೆ ಬಿಬಿಎಂಪಿ ಅಧಿಕಾರಿ ನೇಮಕ ಮಾಡಲು ಯೋಜಿಸಿದೆ.
ಬಿಬಿಎಂಪಿ ಅಧಿಕಾರಿಗಳು ಕ್ಯಾಂಟೀನ್ನಲ್ಲಿ ಆಹಾರ ಪದಾರ್ಥಗಳಿಗೆ ಗ್ರಾಹಕರಿಂದ ಹೆಚ್ಚಿನ ಹಣ ಪಡೆಯುತ್ತಿರುವ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ನೇಮಕಗೊಳ್ಳಲಿರುವ ಅಧಿಕಾರಿಗಳು ಆಹಾರದ ಗುಣಮಟ್ಟದ ಬಗ್ಗೆ ಸದಾ ನಿಗಾ ಇಡಲಿದ್ದಾರೆ. ಯಶಸ್ವಿಯಾಗಿ ಕ್ಯಾಂಟೀನ್ ನಿರ್ವಹಿಸುವಲ್ಲಿ ಈ ಅಧಿಕಾರಿಗಳು ಮಹತ್ವದ ಪಾತ್ರ ವಹಿಸಲಿದ್ದಾರೆ. ಅಧಿಕಾರ ನೇಮಕ ಜೊತೆಗೆ ಬಿಬಿಎಂಪಿ ಹೊಸ ಸಹಾಯವಾಣಿ ಆರಂಭ ಮಾಡಲು ನಿರ್ಧರಿಸಿದೆ.
ಏನಿದು ಇಂದಿರಾ ಕ್ಯಾಂಟೀನ್ ಸಹಾಯವಾಣಿ?
ಬಿಬಿಎಂಪಿ ರೂಪಿಸಿರುವ 1533 ಸಹಾಯವಾಣಿ ಮೂಲಕ ಜನರಿಗೆ ಸೇವೆ ನೀಡಲು ಹೊಸ ಸಹಾಯವಾಣಿ ರೂಪಿಸಲಾಗಿದೆ. ಈ ಸಹಾಯವಾಣಿಯನ್ನು ಎಲ್ಲ ಇಂದಿರಾ ಕ್ಯಾಂಟೀನ್ಗಳಿಗೂ ವಿಸ್ತರಿಸಲು ತೀರ್ಮಾನಿಸಲಾಗಿದೆ. ಇದರ ಜೊತೆಗೆ ಇಂದಿರಾ ಕ್ಯಾಂಟಿನ್ ಬಳಿ, ರಸ್ತೆ ಪಕ್ಕ ಎಲ್ಲೆಂದರಲ್ಲಿ ಕಸ ಸುರಿಯುವುದನ್ನ ತಡೆಯಲು ಬಿಬಿಎಂಪಿ ಚಿಂತನೆ ನಡೆಸಿದೆ.

ಈ ಹಿಂದೆ ಇದ್ದಂತೆ ಕಸ ಸುರಿಯುವವರ ಮೇಲೆ ನಿಗಾ ಇಡಲು ಮಾರ್ಷಲ್ ಗಳನ್ನು ಮತ್ತು ಅಧಿಕಾರಿಗಳ ತಂಡ ರಚನೆ ಮಾಡಿದೆ. ರಸ್ತೆ ಬದಿ ಕಸ ಹಾಕುವವರ ಮೇಲೆ ನಿಗಾ, ಬ್ಲಾಕ್ ಸ್ಪಾಟ್, ರಸ್ತೆ ಗುಂಡಿ ಮೇಲೂ ಈ ತಂಡ ನಿಗಾ ವಹಿಸಲಿದೆ. ತ್ಯಾಜ್ಯವನ್ನು ಸೂಕ್ತವಾಗಿ ವಿಲೇವಾರಿ ಮಾಡುವ ಬಿಬಿಎಂಪಿ ಕಾಂಪ್ಯಾಕ್ಟರ್ಗಳ ಮೇಲೆ ಮಾರ್ಷಲ್ಗಳು ಕಣ್ಣಿಡಲಿದ್ದಾರೆ. ಇದೆಲ್ಲವು ಮೊದಲಿಗೆ ಆರಂಭಿಕ ಹಂತದಲ್ಲಿ ಒಂದು ವಲಯದಲ್ಲಿ ಜಾರಿಗೆ ತರಲು ಬಿಬಿಎಂಪಿ ಚಿಂತನೆ ನಡೆಸಿದೆ.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Free Biryani: ಒಂದು ಸಿಲಿಂಡರ್ ಕೊಡಿ, ತಿಂಗಳು ಪೂರ್ತಿ ಉಚಿತ ಬಿರಿಯಾನಿ ತಿನ್ನಿ: ಹೊಸೂರು ಹೋಟೆಲ್ನಿಂದ ಭರ್ಜರಿ ಆಫರ್ -
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು










Click it and Unblock the Notifications