ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಂದಿರಾ ಕ್ಯಾಂಟೀನ್‌ನಲ್ಲಿ ಅನ್ನ, ಸಾಂಬಾರ್ ಸವಿದ ರಾಹುಲ್

|
Google Oneindia Kannada News

ಬೆಂಗಳೂರು, ಅ.16 : ಬಡವರಿಗೆ ಕಡಿಮೆ ದರದಲ್ಲಿ ಆಹಾರ ಒದಗಿಸುವ ಇಂದಿರಾ ಕ್ಯಾಂಟೀನ್‌ಗೆ ಚಾಲನೆ ಸಿಕ್ಕಿದೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಇಂದಿರಾ ಕ್ಯಾಂಟೀನ್‌ ಉದ್ಘಾಟಿಸಿದರು.

ಬುಧವಾರ ಜಯನಗರದ ಕನಕನಪಾಳ್ಯದಲ್ಲಿ ರಾಹುಲ್ ಗಾಂಧಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

rahul gandi

ಕ್ಯಾಂಟೀನ್ ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ರಾಹುಲ್ ಗಾಂಧಿ, 'ಕಡುಬಡವರಿಗೆ ಇಂದಿರಾ ಕ್ಯಾಂಟೀನ್ ನೆರವಾಗಲಿದೆ. ಇದು ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾಗಿದೆ' ಎಂದು ಶ್ಲಾಘಿಸಿದರು.

ಇಂದಿರಾ ಕ್ಯಾಂಟೀನ್ ಜೊತೆ ಸೆಲ್ಫೀ ತಗೊಳ್ಳಿ, 1 ಲಕ್ಷ ಗೆಲ್ಲಿ!ಇಂದಿರಾ ಕ್ಯಾಂಟೀನ್ ಜೊತೆ ಸೆಲ್ಫೀ ತಗೊಳ್ಳಿ, 1 ಲಕ್ಷ ಗೆಲ್ಲಿ!

ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 'ಬಜೆಟ್‌ನಲ್ಲಿ ಬಡವರಿಗೆ ಕಡಿಮೆ ದರದಲ್ಲಿ ಆಹಾರ ಒದಗಿಸಲು ಇಂದಿರಾ ಕ್ಯಾಂಟೀನ್ ಯೋಜನೆ ಘೋಷಣೆ ಮಾಡಲಾಗಿತ್ತು. ಬೆಂಗಳೂರು ನಗರದ ಎಲ್ಲಾ ವಾರ್ಡ್‌ ಗಳಲ್ಲಿ ಕ್ಯಾಂಟೀನ್ ಆರಂಭವಾಗಲಿದೆ' ಎಂದರು.

'ಸ್ಥಳವಕಾಶದ ಸಮಸ್ಯೆಯಿಂದಾಗಿ ಸಮಸ್ಯೆಯಿಂದಾಗಿ 97 ಕ್ಯಾಂಟೀನ್ ನಿರ್ಮಾಣ ವಿಳಂಬವಾಗಲಿದೆ. ಇಂದು 101 ಇಂದಿರಾ ಕ್ಯಾಂಟೀನ್ ಉದ್ಘಾಟನೆಗೊಳ್ಳುತ್ತಿದೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು' ಎಂದು ಸಿದ್ದರಾಮಯ್ಯ ಕರೆ ನೀಡಿದರು.

ಇಂದಿರಾ ಕ್ಯಾಂಟೀನ್‌ ಮಾರ್ಗ, ಮೆನು ತಿಳಿಸಲಿದೆ ಬಿಬಿಎಂಪಿಯ ಹೊಸ ಆ್ಯಪ್‌ಇಂದಿರಾ ಕ್ಯಾಂಟೀನ್‌ ಮಾರ್ಗ, ಮೆನು ತಿಳಿಸಲಿದೆ ಬಿಬಿಎಂಪಿಯ ಹೊಸ ಆ್ಯಪ್‌

ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಿದ ಬಳಿಕ ರಾಹುಲ್ ಗಾಂಧಿ ಅನ್ನ ಸಾಂಬಾರ್, ವಾಂಗೀಬಾತ್ ಸವಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಅನ್ನ, ಸಾಂಬಾರ್ ಸವಿದರು.

English summary
Congress vice-president Rahul Gandi inaugurated the Indira canteen in Kanakanapalya, Jayanagar Bengaluru on August 16, 2017. Along with the Kanakanapalya branch 101 outlets of the total 198 planned by the BBMP will start service on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X