ಏರ್ ಪೋರ್ಟ್ ನಲ್ಲಿ ಇಂದಿರಾ ಕ್ಯಾಂಟೀನ್: ಸಿಎಂಗೆ ಪ್ರತಾಪ್ ಸಿಂಹ ಮನವಿ!
ಬೆಂಗಳೂರು, ಆಗಸ್ಟ್ 23: 'ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಇಂದಿರಾ ಕ್ಯಾಂಟಿನ್ ತೆರೆಯಿರಿ' ಎಂದು ಮೈಸೂರು-ಕೊಡಗು ಸಂಸದ ಪ್ರತಾಪ ಸಿಂಹ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟ್ವೀಟ್ ಮಾಡಿದ್ದಾರೆ.
ಎಕನಾಮಿಕ್ ಕ್ಲಾಸ್ ನಲ್ಲಿ ಓಡಾಡುವ ಜನರಿಗೆ ಏರ್ ಪೋರ್ಟ್ ನಲ್ಲಿ ಸಿಗುವ ದುಬಾರಿ ಬೆಲೆಯ ತಿಂಡಿಗಳಿಗೆ ಹಣ ನೀಡುವುದು ಕಷ್ಟ. ಆದ್ದರಿಂದ ಏರ್ ಪೋರ್ಟ್ ನಲ್ಲಿಯೂ ಒಂದು ಇಂದಿರಾ ಕ್ಯಾಂಟೀನ್ ತೆರೆಯಿರಿ' ಎಂದು ಅವರು ಮಾಡಿರುವ ಟ್ವೀಟ್ ನ ಆರಂಭದಲ್ಲೇ 'serious note' ಎಂದು ಉಲ್ಲೇಖಿಸಿರುವುದರಿಂದ ಇದು ತಮಾಷೆಯಂತೂ ಅಲ್ಲ ಎಂದುಕೊಳ್ಳಬಹುದು. ಆದರೆ ಸಂಸದರ ಈ ಟ್ವೀಟ್ ಮತ್ತಷ್ಟು ವಿವಾದವನ್ನೇ ಸೃಷ್ಟಿಸುವ ಲಕ್ಷಣಗಳಂತೂ ನಿಚ್ಛಳವಾಗಿದೆ.
On a serious note, @CMofKarnataka Sir, we need one Indira Canteen at Kempegowda Airport. Food is unaffordable for economy class travellers.
— Pratap Simha (@mepratap) August 23, 2017
ಏರ್ ಪೋರ್ಟ್ ನಲ್ಲಿ ತಿಂಡಿ, ತಿನಿಸುಗಳು ತೀರಾ ದುಬಾರಿ ಎಂಬುದರಲ್ಲಿ ಎರಡು ಮಾತಿಲ್ಲ. ಈ ಕುರಿತು ಎಂದಿಗೂ ದೂರಿದ್ದೇ ಇದೆ. ಆದರೆ ಅದಕ್ಕಾಗಿ ಏರ್ ಪೋರ್ಟ್ ಗಳಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಬೇಕು ಎನ್ನುವುದು ಎಷ್ಟು ಸರಿ ಎಂದು ಹಲವರು ಪ್ರಶ್ನಿಸಿದ್ದಾರೆ.

ವಿಮಾನಯಾನ ಮಾಡುವವರು ಎಂದಮೇಲೆ ಒಂದೋ ಶ್ರೀಮಂತರು, ಇಲ್ಲವೇ ಮಧ್ಯಮ, ಮೇಲ್ಮಧ್ಯಮ ವರ್ಗದವರು. ಆದರೆ ಇಂದಿರಾ ಕ್ಯಾಂಟೀನ್ ತೆರೆದಿರುವುದು ಬಡವರಿಗೆ, ಕಡು ಬಡವರಿಗಾಗಿ. ಹೀಗಿರುವಾಗ ಏರ್ ಪೋರ್ಟ್ ನಲ್ಲಿ ಇಂದಿರಾ ಕ್ಯಾಂಟೀನ್ ತೆರೆಯುವುದು ಹೇಗೆ ಸಾಧ್ಯ ಎಂಬುದು ಹಲವರ ಪ್ರಶ್ನೆ.
If you can request such a canteen for poor cab drivers, it is fine.
— Sudhindra Haldodderi (@haldodderi) August 23, 2017
ಅಕಸ್ಮಾತ್ ಏರ್ ಪೋರ್ಟ್ ನಲ್ಲಿ ಇಂದಿರಾ ಕ್ಯಾಂಟೀನ್ ತೆರೆದರೆ ಅದು ಇಲ್ಲಿಗೆ ಬರುವ ಬಡ ಟ್ಯಾಕ್ಸಿ ಡ್ರೈವರ್ ಗಳಿಗೆ ಸಹಾಯವಾಗುತ್ತದಾದರೆ ಪರವಾಗಿಲ್ಲ ಎಂದೂ ಒಬ್ಬರು ಟ್ವೀಟ್ ಮಾಡಿದ್ದಾರೆ.
ಪ್ರತಾಪ್ ಸಿಂಹ ಅವರ ಈ ಟ್ವೀಟ್ ಅನ್ನು 171 ಕ್ಕೂ ಹೆಚ್ಚು ಜನ ರಿಟ್ವೀಟ್ ಮಾಡಿದ್ದು, 62 ಜನ ಈ ಟ್ವೀಟ್ ಗೆ ಕಮೆಂಟ್ ಮಾಡಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications