ಇಂದಿರಾ ಕ್ಯಾಂಟೀನ್ ಯಶಸ್ಸಿನ ಸಂಭ್ರಮಕ್ಕೆ ಕಾಫಿಬುಕ್
ಬೆಂಗಳೂರು, ನವೆಂಬರ್ 19: ದೇಶ ಕಂಡ ಅತ್ಯಂತ ಪ್ರಭಾವಿ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರ ಜನ್ಮ ಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ ಇಂದಿರಾ ಕ್ಯಾಂಟೀನ್ ಯಶಸ್ಸಿನ ಸಂಭ್ರಮವನ್ನು ಆಚರಿಸಲು ಕಾಫಿ ಬುಕ್ ಸಿದ್ಧಪಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶೀಘ್ರದಲ್ಲೇ ಈ ಕಾಫಿ ಟೇಬಲ್ ಬುಕ್ ಬಿಡುಗಡೆ ಮಾಡುತ್ತಿದ್ದಾರೆ.
ಕರ್ನಾಟಕ ಸರ್ಕಾರ ಆರಂಭಿಸಿರುವ ಬಹು ಜನಪ್ರಿಯ ಯೋಜನೆ ಇಂದಿರಾ ಕ್ಯಾಂಟೀನ್ ಈಗ ರಾಜ್ಯಾದ್ಯಂತ ವಿಸ್ತರಣೆಗೊಳ್ಳುತ್ತಿರುವ ಈ ಸಂದರ್ಭದಲ್ಲಿ ಚಿರಂತನಾ ಮೀಡಿಯಾ ಸಲ್ಯೂಷನ್ಸ್ ಈ ಯಶಸ್ಸನ್ನು ದಾಖಲಿಸಿದ್ದು, ಒಂದು ಚಿತ್ರ ಸಂಪುಟವನ್ನು ಪ್ರಕಟಿಸುತ್ತಿದೆ.
ಕರ್ನಾಟಕ ಸರ್ಕಾರದ ಮಹತ್ವದ ಯೋಜನೆ 'ಇಂದಿರಾ ಕ್ಯಾಂಟೀನ್'. ಅತಿ ಕಡಿಮೆ ಅವಧಿಯಲ್ಲಿ ಬಹು ಜನಪ್ರಿಯವಾದ ಯೋಜನೆ.
ನಾಡಿನ ಬಡವರು, ಶ್ರಮಿಕರು, ಕಾರ್ಮಿಕರು, ದುರ್ಬಲರಿಗೆ ಅತ್ಯಂತ ಕಡಿಮೆ ಬೆಲೆಗೆ ಗುಣಮಟ್ಟದ ಆಹಾರ ಒದಗಿಸುವ ಇಂದಿರಾ
ಕ್ಯಾಂಟೀನ್ಗಳು ನೈಜ ದಾಸೋಹ ಕೇಂದ್ರಗಳಾಗಿವೆ.

ನೈಜ ಫಲಾನುಭವಿಗಳ ಸಂಖ್ಯೆ ಹೆಚ್ಚಳ
ಶ್ರೀಮತಿ ಇಂದಿರಾ ಗಾಂಧಿ ಅವರ ಜನ್ಮ ಶತಮಾನೋತ್ಸವ ವರ್ಷದಲ್ಲಿ ಅವರ ಹೆಸರಿನಲ್ಲಿಯೇ ಕ್ಯಾಂಟೀನ್ ಆರಂಭಿಸಿರುವುದು ವಿಶೇಷವಾಗಿದೆ. ಸಮಾಜದ ವಿವಿಧ ಸ್ತರಗಳ ಜನತೆಯನ್ನು ಆಕರ್ಷಿಸಿರುವ ಈ ಯೋಜನೆ ಈಗ ಕರ್ನಾಟಕದಾದ್ಯಂತ ಜಾರಿಗೆ ಬರುತ್ತಿದೆ. ಅದಕ್ಕೆ ಕಾರಣ ದಿನ ಕಳೆದಂತೆ ನೈಜ ಫಲಾನುಭವಿಗಳ ಸಂಖ್ಯೆ ಹೆಚ್ಚುತ್ತಿರುವುದು.

ಶ್ರೀಸಾಮಾನ್ಯನ ನೆರವಿಗೆ ಕ್ಯಾಂಟೀನ್
ಹೋಟೆಲ್ ಗಳಲ್ಲಿ ದರ್ಶಿನಿಗಳಲ್ಲಿ ಗಗನಮುಖಿಯಾಗಿರುವ ಬೆಲೆಗಳನ್ನು ಕಂಡು ತತ್ತರಿಸಿಹೋಗಿದ್ದ ಶ್ರೀಸಾಮಾನ್ಯ ತನ್ನ ಜೇಬಿಗೆ ಹೊರೆ ಮಾಡಿಕೊಳ್ಳದೇ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದಾನೆ. ಈ ಸಂದರ್ಭದಲ್ಲಿ ಇಂದಿರಾ ಕ್ಯಾಂಟೀನಿನ ನೈಜ ಫಲಾನುಭವಿಗಳ ನೈಜ ಚಿತ್ರಣ ಬಿಂಬಿಸುವ ಚಿತ್ರ ಸಂಪುಟ 'ಅಭಯ ಹಸ್ತ' ನಿಮ್ಮ ಕೈಗಿಡುತ್ತಿದ್ದೇವೆ. ಇನ್ನಷ್ಟು ಇಂಥ ಸತ್ಕಾರ್ಯಗಳಿಗೆ ಸ್ಫೂರ್ತಿಯಾಗುವುದೇ ಈ ಚಿತ್ರ ಸಂಪುಟದ ಯಶಸ್ಸು.

ಮೊಬೈಲ್ ಕ್ಯಾಂಟೀನ್ಗಳ ಮೂಲಕ ವಿತರಣೆ
ಬಜೆಟ್ನಲ್ಲಿ ಘೋಷಣೆ ಮಾಡಿದಂತೆ ಬೆಂಗಳೂರು ನಗರದ ಪ್ರತಿ ವಾರ್ಡ್ಗೆ 1 ಕ್ಯಾಂಟೀನ್ ಸ್ಥಾಪನೆಯಾಗಬೇಕಿತ್ತು. ಆದರೆ, ಕೆಲವು ವಾರ್ಡ್ಗಳಲ್ಲಿ ಕ್ಯಾಂಟೀನ್ ಸ್ಥಾಪನೆ ಮಾಡಲು ಜಾಗ ಸಿಕ್ಕಿಲ್ಲ. ನಗರದಲ್ಲಿ ಸುಮಾರು 22 ಕ್ಯಾಂಟೀನ್ಗಳು ಆರಂಭವಾಗಲಿವೆ. ಇಂದಿರಾ ಕ್ಯಾಂಟೀನ್ನಲ್ಲಿ ತಯಾರಿಸಿದ ಆಹಾರವನ್ನು ಮೊಬೈಲ್ ಕ್ಯಾಂಟೀನ್ಗಳ ಮೂಲಕ ವಿತರಣೆ ಮಾಡಲಾಗುತ್ತದೆ.

ಕ್ಯಾಂಟೀನ್ ಮಾಹಿತಿಗೆ ಅಪ್ಲಿಕೇಷನ್
ಕ್ಯಾಂಟೀನ್ ಗಳಿಗೆ ರೇಟಿಂಗ್ ನೀಡಲೂ ಆ್ಯಪ್ ನಲ್ಲಿ ಅವಕಾಶವಿದೆ. ಜತೆಗೆ ಅಧಿಕಾರಿಗಳಿಗೆ ಕ್ಯಾಂಟೀನ್ಗೆ ಸರಬರಾಜು ಆದ ಆಹಾರ ಪದಾರ್ಥ, ಖರ್ಚಾದ ಉಪಾಹಾರ, ಊಟ, ಮಿಕ್ಕಿರುವ ಆಹಾರ ಪ್ರಮಾಣದ ಬಗ್ಗೆ ಈ ಆ್ಯಪ್ ನಿಂದಲೇ ಮಾಹಿತಿ ಪಡೆದುಕೊಳ್ಳುವ ಅವಕಾಶವನ್ನೂ ನೀಡಲಾಗಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications