ಆಗಸ್ಟ್ 15ರಿಂದ ಇಂದಿರಾ ಕ್ಯಾಂಟೀನ್ ಬಾಗಿಲು ಓಪನ್: ಸಿದ್ದರಾಮಯ್ಯ
ಇಂದಿರಾ ಕ್ಯಾಂಟೀನ್ ಗೆ ಆಗಸ್ಟ್ 15ರಂದು ಚಾಲನೆ ನೀಡಲು ನಿರ್ಧರಿಸಲಾಗಿದ್ದು ಕ್ಯಾಂಟೀನ್ ಗಳ ನಿರ್ವಹಣಾ ಜವಾಬ್ದಾರಿಯನ್ನು ಬಿಬಿಎಂಪಿಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಬೆಂಗಳೂರು, ಏಪ್ರಿಲ್ 25 : ವಿಳಂಬದ ಹಾದಿ ಹಿಡಿದಿದ್ದ ಸಿದ್ದರಾಮಯ್ಯ ಸರಕಾರದ ಬಹುನಿರೀಕ್ಷಿತ 'ಇಂದಿರಾ ಕ್ಯಾಂಟೀನ್' ಕೊನೆಗೂ ಬಾಗಿಲು ತೆರೆಯಲು ಮುಹೂರ್ತ ಫಿಕ್ಸ್ ಆಗಿದೆ.
"ಬಿಬಿಎಂಪಿಯ 198 ವಾರ್ಡ್ ಗಳಲ್ಲಿ ಆಗಸ್ಟ್ 15ರಿಂದ ಇಂದಿರಾ ಕ್ಯಾಂಟೀನ್ ಆರಂಭವಾಗಲಿದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಕ್ಯಾಂಟೀನ್ ಆರಂಭಿಸುವ ಸಂಬಂಧ ಮಂಗಳವಾರ ಹಣಕಾಸು ಮತ್ತು ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, "ಕ್ಯಾಂಟೀನ್ ಆರಂಭಕ್ಕೆ 2-3 ತಿಂಗಳು ಸಿದ್ಧತೆ ನಡೆಸಬೇಕಾಗುತ್ತದೆ.
ಹೀಗಾಗಿ ಆಗಸ್ಟ್ 15ರಂದು ಚಾಲನೆ ನೀಡಲು ನಿರ್ಧರಿಸಲಾಗಿದ್ದು ಕ್ಯಾಂಟೀನ್ ಗಳ ನಿರ್ವಹಣಾ ಜವಾಬ್ದಾರಿಯನ್ನು ಬಿಬಿಎಂಪಿಗೆ ವಹಿಸಲು ಇಂದಿನ ಸಭೆಯಲ್ಲಿ ತೀರ್ಮಾನಿಸಲಾಗಿದೆ" ಎಂದರು. ['ಇಂದಿರಾ ಕ್ಯಾಂಟೀನ್'ಗೆ ಈರುಳ್ಳಿ-ಬೆಳ್ಳುಳ್ಳಿ ಸಂಕಟ]
ಈ ಇಂದಿರಾ ಕ್ಯಾಂಟೀನ್ 2017ರ ರಾಜ್ಯ ಬಜೆಟ್ ನಲ್ಲಿ ಸಿದ್ದರಾಮಯ್ಯ ಅವರು ಘೋಷಿಸಿದ್ದರು. ಕ್ಯಾಂಟೀನ್ ಎಲ್ಲಿ, ಯಾರು ನಿರ್ವಹಿಸಲಿದ್ದಾರೆ ಎಂಬ ಮಾಹಿತಿಗೆ ಮುಂದೆ ಓದಿ.

198 ವಾರ್ಡ್ ಗಳಲ್ಲಿ ಇಂದಿರಾ ಕ್ಯಾಂಟೀನ್
198 ವಾರ್ಡ್ ಗಳಲ್ಲಿ ತಲಾ 500 ಚದರ ಅಡಿ ಜಾಗದಲ್ಲಿ 7.50 ಲಕ್ಷ ರೂ. ವೆಚ್ಚದಲ್ಲಿ ಕಟ್ಟಡಗಳು ನಿರ್ಮಾಣ ಆಗಲಿದೆ. ನಿರ್ಮಾಣ ಜವಾಬ್ದಾರಿಯನ್ನು ಭೂ ಸೇನಾ ನಿಗಮಕ್ಕೆ ವಹಿಸಲಾಗುವುದು. ಇದರ ಒಟ್ಟು ವೆಚ್ಚ 15 ಕೋಟಿ ರು.ಗಳಾಗಲಿದೆ.

ಇಂದಿರಾ ಕ್ಯಾಂಟೀನ್ ಗೆ ಸಮಿತಿ ರಚನೆ
ಕ್ಯಾಂಟೀನ್ ಗಳ ಲಾಂಛನ, ಕಟ್ಟಡದ ವಿನ್ಯಾಸ ಮತ್ತಿತರ ವಿಚಾರಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲು ಸಚಿವ ಜಾರ್ಜ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ.

ಸಮಿತಿಯಲ್ಲಿ ಯಾರ್ಯಾರು?
ಬಿಬಿಎಂಪಿ ಮೇಯರ್, ಉಪ ಮೇಯರ್, ಆಯುಕ್ತರು, ಆಹಾರ ಸಚಿವರು, ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಗಳು ಸಮಿತಿಯಲ್ಲಿ ಇರುತ್ತಾರೆ ಎಂದು ಮುಖ್ಯಮಂತ್ರಿ ಗಳು ಹೇಳಿದರು.

ಆಹಾರದ ಗುಣಮಟ್ಟದಲ್ಲಿ ರಾಜಿ ಇಲ್ಲ
ಕ್ಯಾಂಟೀನ್ ಗಳಲ್ಲಿ 5 ರು.ಗೆ ಉಪಾಹಾರ, 10 ರು.ಗಳಿಗೆ ಮಧ್ಯಾಹ್ನ, ರಾತ್ರಿ ಊಟ ನೀಡಲಾಗುವುದು. ನಮ್ಮ ಅಧಿಕಾರಿಗಳು ತಮಿಳುನಾಡಿಗೆ ಹೋಗಿ ಅಮ್ಮ ಕ್ಯಾಂಟೀನ್ ಬಗ್ಗೆ ಅಧ್ಯಯನ ನಡೆಸಿ ಬರಲಿದ್ದಾರೆ. ಕ್ಯಾಂಟೀನ್ ಗಳಲ್ಲಿ ನೀಡುವ ಆಹಾರದ ಗುಣಮಟ್ಟದಲ್ಲಿ ರಾಜಿ ಇಲ್ಲ ಎಂದು ಹೇಳಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ












Click it and Unblock the Notifications