ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಂದಿರಾ ಕ್ಯಾಂಟೀನ್‌ಗಳಲ್ಲಿ ರಾಗಿ ಮುದ್ದೆ ಭಾಗ್ಯ?

|
Google Oneindia Kannada News

ಬೆಂಗಳೂರು, ನವೆಂಬರ್ 24 : ಇಂದಿರಾ ಕ್ಯಾಂಟೀನ್‌ಗಳಲ್ಲಿ ಶೀಘ್ರವೇ ರಾಗಿ ಮುದ್ದೆ ದೊರೆಯಲಿದೆ. ಜೆಡಿಎಸ್‌ ನಾಯಕ ಟಿ.ಎ.ಶರವಣ ಆರಂಭಿಸಿರುವ ಅಪ್ಪಾಜಿ ಕ್ಯಾಂಟೀನ್‌ನಲ್ಲಿ ಈಗಾಗಲೇ ರಾಗಿ ಮುದ್ದೆ ನೀಡಲಾಗುತ್ತಿದೆ.

ಇಂದಿರಾ ಕ್ಯಾಂಟೀನ್ ಯಶಸ್ಸಿನ ಸಂಭ್ರಮಕ್ಕೆ ಕಾಫಿಬುಕ್ಇಂದಿರಾ ಕ್ಯಾಂಟೀನ್ ಯಶಸ್ಸಿನ ಸಂಭ್ರಮಕ್ಕೆ ಕಾಫಿಬುಕ್

ಕೃಷಿ ಸಚಿವ ಕೃಷ್ಣ ಬೈರೇಗೌಡ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಇಂದಿರಾ ಕ್ಯಾಂಟೀನ್‌ಗಳಲ್ಲಿ ರಾಗಿ ಮುದ್ದೆ ನೀಡುವಂತೆ ಬಿಬಿಎಂಪಿ ಜೊತೆ ಮಾತುಕತೆ ನಡೆಸಲಾಗಿದೆ. ಪಾಲಿಕೆ ಈ ಕುರಿತು ಚಿಂತನೆ ನಡೆಸುತ್ತಿದೆ' ಎಂದು ಹೇಳಿದ್ದಾರೆ.

ಅಪ್ಪಾಜಿ ಕ್ಯಾಂಟೀನಿನಲ್ಲಿ ಶರವಣಜಿ, ಮಾಂಡ್ರೆ ಮ್ಯಾಮ್ಅಪ್ಪಾಜಿ ಕ್ಯಾಂಟೀನಿನಲ್ಲಿ ಶರವಣಜಿ, ಮಾಂಡ್ರೆ ಮ್ಯಾಮ್

Indira Canteen to serve Ragi mudde soon

ಬೆಂಗಳೂರು ನಗರದಲ್ಲಿ ಈಗಾಗಲೇ ಇಂದಿರಾ ಕ್ಯಾಂಟೀನ್ ಯೋಜನೆ ಯಶಸ್ವಿಯಾಗಿದೆ. 5 ರೂ.ಗೆ ಉಪಹಾರ, 10 ರೂ.ಗೆ ಊಟವನ್ನು ನೀಡಲಾಗುತ್ತಿದೆ. ಜನವರಿಯಲ್ಲಿ ರಾಜ್ಯದ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ 247 ಇಂದಿರಾ ಕ್ಯಾಂಟೀನ್ ಆರಂಭವಾಗಲಿದೆ.

247 ಇಂದಿರಾ ಕ್ಯಾಂಟೀನ್ ಸ್ಥಾಪನೆ, ಯಾವ ನಗರಕ್ಕೆ ಎಷ್ಟು?247 ಇಂದಿರಾ ಕ್ಯಾಂಟೀನ್ ಸ್ಥಾಪನೆ, ಯಾವ ನಗರಕ್ಕೆ ಎಷ್ಟು?

ದಿನಕ್ಕೊಂದು ರೈಸ್ ಬಾತ್, ಅನ್ನ ಸಾಂಬಾರ್ ಗಳನ್ನು ಇಂದಿರಾ ಕ್ಯಾಂಟೀನ್‌ಗಳಲ್ಲಿ ನೀಡಲಾಗುತ್ತಿದೆ. ಕೆಲವೇ ದಿನಗಳಲ್ಲಿ 5 ರೂ.ಗೆ ಟೀ, ಕಾಫಿ ನೀಡುವ ಪ್ರಸ್ತಾವನೆಯೂ ಸಿದ್ಧವಾಗಿದೆ. ಈಗ ರಾಗಿ ಮುದ್ದೆಯನ್ನು ವಿತರಣೆ ಮಾಡುವ ಪ್ರಸ್ತಾಪ ಮಾಡಲಾಗಿದೆ.

ಅಪ್ಪಾಜಿ ಕ್ಯಾಂಟೀನ್ : ವಿಧಾನಪರಿಷತ್ ಸದಸ್ಯ, ಜೆಡಿಎಸ್ ನಾಯಕ ಟಿ.ಎ.ಶರವಣ ಅವರು ಬೆಂಗಳೂರಿನ ಹನುಮಂತ ನಗರದಲ್ಲಿ ಆರಂಭಿಸಿರುವ 'ನಮ್ಮ ಅಪ್ಪಾಜಿ ಕ್ಯಾಂಟೀನ್‌'ನಲ್ಲಿ ರಾಗಿ ಮುದ್ದೆ ವಿತರಣೆ ಮಾಡಲಾಗುತ್ತಿದೆ.

English summary
Ragi mudde to be served Indira Canteen soon. BBMP is working to implement the scheme. Indira Canteen is currently serving rice, sambar and rice bath for Rs 10.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X