ಇಂದಿರಾ ಕ್ಯಾಂಟೀನ್ಗಳಲ್ಲಿ ರಾಗಿ ಮುದ್ದೆ ಭಾಗ್ಯ?
ಬೆಂಗಳೂರು, ನವೆಂಬರ್ 24 : ಇಂದಿರಾ ಕ್ಯಾಂಟೀನ್ಗಳಲ್ಲಿ ಶೀಘ್ರವೇ ರಾಗಿ ಮುದ್ದೆ ದೊರೆಯಲಿದೆ. ಜೆಡಿಎಸ್ ನಾಯಕ ಟಿ.ಎ.ಶರವಣ ಆರಂಭಿಸಿರುವ ಅಪ್ಪಾಜಿ ಕ್ಯಾಂಟೀನ್ನಲ್ಲಿ ಈಗಾಗಲೇ ರಾಗಿ ಮುದ್ದೆ ನೀಡಲಾಗುತ್ತಿದೆ.
ಇಂದಿರಾ ಕ್ಯಾಂಟೀನ್ ಯಶಸ್ಸಿನ ಸಂಭ್ರಮಕ್ಕೆ ಕಾಫಿಬುಕ್
ಕೃಷಿ ಸಚಿವ ಕೃಷ್ಣ ಬೈರೇಗೌಡ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಇಂದಿರಾ ಕ್ಯಾಂಟೀನ್ಗಳಲ್ಲಿ ರಾಗಿ ಮುದ್ದೆ ನೀಡುವಂತೆ ಬಿಬಿಎಂಪಿ ಜೊತೆ ಮಾತುಕತೆ ನಡೆಸಲಾಗಿದೆ. ಪಾಲಿಕೆ ಈ ಕುರಿತು ಚಿಂತನೆ ನಡೆಸುತ್ತಿದೆ' ಎಂದು ಹೇಳಿದ್ದಾರೆ.
ಅಪ್ಪಾಜಿ ಕ್ಯಾಂಟೀನಿನಲ್ಲಿ ಶರವಣಜಿ, ಮಾಂಡ್ರೆ ಮ್ಯಾಮ್
ಬೆಂಗಳೂರು ನಗರದಲ್ಲಿ ಈಗಾಗಲೇ ಇಂದಿರಾ ಕ್ಯಾಂಟೀನ್ ಯೋಜನೆ ಯಶಸ್ವಿಯಾಗಿದೆ. 5 ರೂ.ಗೆ ಉಪಹಾರ, 10 ರೂ.ಗೆ ಊಟವನ್ನು ನೀಡಲಾಗುತ್ತಿದೆ. ಜನವರಿಯಲ್ಲಿ ರಾಜ್ಯದ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ 247 ಇಂದಿರಾ ಕ್ಯಾಂಟೀನ್ ಆರಂಭವಾಗಲಿದೆ.
247 ಇಂದಿರಾ ಕ್ಯಾಂಟೀನ್ ಸ್ಥಾಪನೆ, ಯಾವ ನಗರಕ್ಕೆ ಎಷ್ಟು?
ದಿನಕ್ಕೊಂದು ರೈಸ್ ಬಾತ್, ಅನ್ನ ಸಾಂಬಾರ್ ಗಳನ್ನು ಇಂದಿರಾ ಕ್ಯಾಂಟೀನ್ಗಳಲ್ಲಿ ನೀಡಲಾಗುತ್ತಿದೆ. ಕೆಲವೇ ದಿನಗಳಲ್ಲಿ 5 ರೂ.ಗೆ ಟೀ, ಕಾಫಿ ನೀಡುವ ಪ್ರಸ್ತಾವನೆಯೂ ಸಿದ್ಧವಾಗಿದೆ. ಈಗ ರಾಗಿ ಮುದ್ದೆಯನ್ನು ವಿತರಣೆ ಮಾಡುವ ಪ್ರಸ್ತಾಪ ಮಾಡಲಾಗಿದೆ.
ಅಪ್ಪಾಜಿ ಕ್ಯಾಂಟೀನ್ : ವಿಧಾನಪರಿಷತ್ ಸದಸ್ಯ, ಜೆಡಿಎಸ್ ನಾಯಕ ಟಿ.ಎ.ಶರವಣ ಅವರು ಬೆಂಗಳೂರಿನ ಹನುಮಂತ ನಗರದಲ್ಲಿ ಆರಂಭಿಸಿರುವ 'ನಮ್ಮ ಅಪ್ಪಾಜಿ ಕ್ಯಾಂಟೀನ್'ನಲ್ಲಿ ರಾಗಿ ಮುದ್ದೆ ವಿತರಣೆ ಮಾಡಲಾಗುತ್ತಿದೆ.