ಶಾಲಾ-ಕಾಲೇಜು ವ್ಯಾಪ್ತಿಗೂ ಇಂದಿರಾ ಕ್ಯಾಂಟೀನ್!
ಬೆಂಗಳೂರು, ಫೆಬ್ರವರಿ 17 : ನಗರದಲ್ಲಿರುವ ಶಾಲಾ-ಕಾಲೇಜುಗಳ ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟೀನ್ ಅರಂಭಿಸಲು ತೀರ್ಮಾನಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.
ಇಂದಿರಾ ಕ್ಯಾಂಟೀನ್ ಯೋಜನೆ ವಿಸ್ತರಣೆ, ಇತರ ಸಂಪುಟದ ನಿರ್ಧಾರಗಳು
ಶಂಕರ ಮಠ ವಾರ್ಡ್ ನ ಕಾವೇರಿ ನಗರದಲ್ಲಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ನಗರದಲ್ಲಿ ಇಂದಿರಾ ಕ್ಯಾಂಟೀನ್ ಯಶಸ್ವಿಯಾಗಿದ್ದು, ನಾಗರಿಕರು ಕ್ಯಾಂಟೀನ್ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿರುವುದರಿಂದ ಈ ಯೊಜನೆಯನ್ನು ಶಾಲಾ-ಕಾಲೇಜುಗಳ ವ್ಯಾಪ್ತಿಗೂ ತರಲು ತೀರ್ಮಾನಿಸಲಾಗಿದೆ ಎಂದರು.
ಮೇಯರ್ ಸಂಪತ್ ರಾಜ್ ಮಾತನಾಡಿ, ರಾಜ್ಯ ಸರ್ಕಾರ ಹಸಿವು ಮುಕ್ತ ಬೆಂಗಳೂರು ಘೋಷಣೆಯಡಿ ಜಾರಿಗೆ ತಂದಿರುವ ಇಂದಿರಾ ಕ್ಯಾಂಟೀನ್ ಯಶಸ್ವಿಯಾಗಿದೆ. ಈಗ ಇಂದಿರಾ ಕ್ಯಾಂಟೀನ್ ಪ್ರದೇಶ ಬೆಟ್ಟ-ಗುಡ್ಡಗಳಿಂದ ಕೂಡಿದ ಪ್ರದೇಶವಾಗಿತ್ತು. ಸತತ ಪರಿಶ್ರಮದಿಂದ ಸ್ಥಳವನ್ನು ಸ್ವಚ್ಛ ಮಾಡಿ ಪಾರ್ಕ್ ನಿರ್ಮಿಸುವುದರ ಜತೆಗೆ ಇಂದಿರಾ ಕ್ಯಾಂಟೀನ್ ಸ್ಥಾಪನೆ ಮಾಡಬೇಕಾಯಿತು. ಆದ್ದರಿಂದ ಕ್ಯಾಂಟೀನ್ ಲೋಕಾರ್ಪಣೆ ತಡವಾಯಿತು ಎಂದು ವಿವರಿಸಿದರು.