ಈ ಬಾರಿ ಇಂದಿರಾ ನಗರದಲ್ಲೂ ಸಲೀಸಲ್ಲ ಹೊಸ ವರ್ಷದ ಪಾರ್ಟಿ
ಬೆಂಗಳೂರು, ಡಿಸೆಂಬರ್ 30: ಇಂದಿರಾ ನಗರ ನಿವಾಸಿಗಳು ವಾರದ ಹಿಂದಷ್ಟೇ ನಡೆಸಿದ ಹೋರಾಟ ಅಕ್ರಮ ಪಬ್ ಗಳನ್ನು ಮುಚ್ಚಿಸುವಂತೆ ಮಾಡಿರುವ ಬೆನ್ನಲ್ಲೇ ಹೊಸ ವರ್ಷಾಚರಣೆ ನೆಪದಲ್ಲಿ ಕುಡಿದು ಗದ್ದಲ ಮಾಡುವುದು ಹಾಗೂ ಅನುಚಿತವಾಗಿ ವರ್ತಿಸುವಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಇದೀಗ ಅಲ್ಲಿನ ನಿವಾಸಿಗಳು ಪೊಲೀಸರ ಮೊರೆ ಹೋಗಿದ್ದಾರೆ.
ಇಂದಿರಾನಗರದ ವಿವಿಧ ಎಂಟು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಪ್ರತಿನಿಧಿಗಳು 'ನಾನು ಇಂದಿರಾ ನಗರ ಬದಲಾಯಿಸುತ್ತೇನೆ' (ಐ ಚೇಂಜ್ ಇಂದಿರಾನಗರ) ಎಂಬ ವೇದಿಕೆಯಡಿ ಪೂರ್ವ ವಲಯದ ಹೆಚ್ಚುವರಿ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ ಸಿಂಗ್ ಅವರನ್ನು ಭೇಟಿ ಮಾಡಿ, ಹೊಸ ವರ್ಷಾಚರಣೆ ನೆಪದಲ್ಲಿ ಇಂದಿರಾನಗರದಲ್ಲಿ ಕುಡುಕರ ಅಟಾಟೋಪ ತಪ್ಪಿಸುವಂತೆ ಮನವಿ ಮಾಡಿದ್ದಾರೆ.
ಹೊಸ ವರ್ಷಾಚರಣೆ ನೆಪದಲ್ಲಿ ಇಂದಿರಾನಗರದ ಹಲವು ಪಬ್ ಮತ್ತು ಬಾರ್ಗಳಲ್ಲಿ ನಡೆಯುವ ಸಂಗೀತದ ಹಾವಳಿಯಿಂದ ಜನರಿಗೆ ತೊಂದರೆ ಉಂಟಾಗುತ್ತಿದೆ. ಕಾನೂನಿನಂತೆ ರಾತ್ರಿ ೧೦ರ ನಂತರ ೪೫ ಡಿಬಿಗಿಂತ ಹೆಚ್ಚು ಶಬ್ದ ಮಾಡುವ ಸಂಗೀತ ಕೇಳುವಂತಿಲ್ಲ.

ಅಲ್ಲದೇ ಜನವಸತಿ ಪ್ರದೇಶವಾದ ಇಂದಿರಾನಗರದಲ್ಲಿ ಎಲ್ಲೆಡೆ ವಾಹನಗಳನ್ನು ಪಾರ್ಕ್ ಮಾಡಲಾಗುತ್ತದೆ. ಇದರಿಂದ ನಿವಾಸಿಗಳಿಗೆ ತೊಂದರೆ ಆಗುತ್ತದೆ. ಅಲ್ಲದೇ ರೂಫ್ ಟಾಪ್ ಬಾರ್ಗಳಲ್ಲಿ ನಿಯಮ ಮೀರಿ ಮದ್ಯ ಸೇವನೆ, ಮಾರಾಟ, ಡ್ಯಾನ್ಸ್ ಗದ್ದಲ ನಡೆಯುತ್ತದೆ. ಈ ಬಗ್ಗೆ ಕಾನೂನು ಕ್ರಮ ಹಾಗೂ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು ಎಂದು ನಿವಾಸಿಗಳ ಮನವಿ ಮಾಡಿದರು.
ನಿವಾಸಿಗಳ ಮನವಿಗೆ ಸ್ಪಂದಿಸಿದ ಹೆಚ್ಚುವರಿ ಆಯುಕ್ತ ಸೀಮಂತ್ಕುಮಾರ್ ಸಿಂಗ್, ಹೊಸ ವರ್ಷದ ಮುನ್ನಾದಿನ ರಾತ್ರಿ ಪೊಲೀಸ್ ಭದ್ರತೆ ಹೆಚ್ಚಿಸಲಾಗುವುದು. ನಿಯಮ ಮೀರಿ ಸಂಗೀತ ಕೇಳುವುದು, ಮದ್ಯ ಸೇವನೆ ಮಾಡುವುದು ಮುಂತಾದ ಅಕ್ರಮಗಳನ್ನು ತಡೆಯಲು ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಪೊಲೀಸ್ ಮೂಲಗಳ ಪ್ರಕಾರ, ಈಗಾಗಲೇ ಎಂಜಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆಗಳಲ್ಲಿ ಭಾರಿ ಮುಂಜಾಗ್ರತೆ ಕೈಗೊಂಡಿರುವ ಕಾರಣ ಈ ಬಾರಿ ಪಾರ್ಟಿ ಪ್ರೀಯರು ಇಂದಿರಾನಗರದತ್ತ ಹೆಚ್ಚು ಮುಖ ಮಾಡಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ಇಂದಿರಾನಗರ ನಿವಾಸಿಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎನ್ನಲಾಗುತ್ತಿದೆ.
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications