40 ವರ್ಷ ಬಾಳಿಕೆ ಬರುತ್ತದೆ ಎಂದಿದ್ದ ಇಂದಿರಾ ನಗರದ ರಸ್ತೆಯಲ್ಲಿ 30 ದಿನಗಳಲ್ಲಿಯೇ ಬಿರುಕು!
ಬೆಂಗಳೂರು, ಜ. 08: ಅತ್ಯಂತ ಸಂಭ್ರಮದಿಂದ ಬೆಂಗಳೂರಿನ ಇಂದಿರಾನಗರದಲ್ಲಿ 'ಕ್ಷಿಪ್ರ ರಸ್ತೆ ಕಾಮಗಾರಿ' ತಂತ್ರಜ್ಞಾನ ಬಳಸಿ ನಿರ್ಮಿಸಲಾದ ರಸ್ತೆ ಬಿರುಕು ಬಿಟ್ಟಿದ್ದು, ಕಾಮಗಾರಿಯ ಗುಣಮಟ್ಟ ಮತ್ತು ವಿಧಾನದ ಕಾರ್ಯಸಾಧ್ಯತೆಯ ಬಗ್ಗೆ ಆತಂಕ ಮೂಡಿಸಿದೆ.
ಇಂದಿರಾನಗರದ ಹಳೆಯ ಮದ್ರಾಸ್ ರಸ್ತೆಯ 375 ಮೀಟರ್ ವಿಸ್ತಾರವನ್ನು 20 ಅಡಿ ಉದ್ದ ಮತ್ತು 5 ಅಡಿ ಅಗಲದ ದೊಡ್ಡ ಪ್ರಿ-ಕಾಸ್ಟ್ ಕಾಂಕ್ರೀಟ್ ಬ್ಲಾಕ್ಗಳನ್ನು ಜೋಡಿಸಿ ನಿರ್ಮಿಸಲಾಗಿದೆ. ವರದಿಗಳ ಪ್ರಕಾರ, ವಿಸ್ತರಣೆಗೆ ಬಳಸಲಾದ 250 ಸ್ಲ್ಯಾಬ್ಗಳಲ್ಲಿ ಕನಿಷ್ಠ ಎಂಟರಲ್ಲಿ ಬಿರುಕುಗಳು ಕಾಣಿಸಿಕೊಂಡಿದೆ. ಒಂದು ಮುರಿದುಹೋಗಿದೆ ಎಂದು ವರದಿಯಾಗಿದೆ.
ನಗರದ ರಸ್ತೆಗಳಲ್ಲಿನ ಗುಂಡಿಗಳ ಹಾವಳಿಗೆ ಸಂಬಂಧಿಸಿದಂತೆ ನ್ಯಾಯಾಲಯಗಳು ಮತ್ತು ಸಾರ್ವಜನಿಕರಿಂದ ಛೀಮಾರಿ ಹಾಕಿಸಿಕೊಂಡ ನಂತರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ರಾಪಿಡ್ ರೋಡ್ ತಂತ್ರಜ್ಞಾನವನ್ನು ಕಂಡುಹಿಡಿದಿದೆ. ಈ ತಂತ್ರಜ್ಞಾನದ ರಸ್ತೆಗಳು 40 ವರ್ಷ ಬಾಳಿಕೆ ಬರುತ್ತವೆ ಎಂದು ಬಿಬಿಎಂಪಿ ಹೇಳಿಕೊಂಡಿತ್ತು.

ಹೊಸ ರಸ್ತೆಯನ್ನು ಡಿಸೆಂಬರ್ 8 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಿದರು. ಉದ್ಘಾಟನೆಯ ವೇಳೆ ಬಸವರಾಜ ಬೊಮ್ಮಾಯಿ ಅವರು, ತಂತ್ರಜ್ಞಾನವನ್ನು ಇತರ ರಸ್ತೆಗಳಿಗೆ ವಿಸ್ತರಿಸಲು ನಿರ್ಧರಿಸುವ ಮೊದಲು ಅಧಿಕಾರಿಗಳು ರಸ್ತೆಯ ಗುಣಮಟ್ಟ ಮತ್ತು ಸಹಿಷ್ಣುತೆಯನ್ನು ನಿರಂತರವಾಗಿ 20 ಟನ್ಗಿಂತ ಹೆಚ್ಚು ವಾಹನಗಳನ್ನು ಓಡಿಸಿದ ನಂತರ ವಿಶ್ಲೇಷಿಸಬೇಕು ಎಂದು ಹೇಳಿದ್ದರು.
ಇಷ್ಟು ಬೇಗ ಬಿರುಕು ಬಿಡುತ್ತದೆ ಎಂದು ನಿರೀಕ್ಷಿಸಿರಲಿಲ್ಲ ಎಂದು ಪೌರಾಯುಕ್ತರ ಹಿರಿಯ ಅಧಿಕಾರಿಗಳು ಹೇಳಿದ್ದಾರೆ. ಬಿಬಿಎಂಪಿ ಮುಖ್ಯ ಎಂಜಿನಿಯರ್ ಪ್ರಹ್ಲಾದ್ ಅವರ ಪ್ರಕಾರ, ಇದು ಹೊಸ ತಂತ್ರಜ್ಞಾನ ಮತ್ತು ಪ್ರಾಯೋಗಿಕ ಯೋಜನೆಯಾಗಿರುವುದರಿಂದ, ಇದರ ಬಗ್ಗೆ ಇನ್ನೂ ಕೆಲವು ಸಂಶೋಧನೆ ಮತ್ತು ಅಭಿವೃದ್ಧಿಯ ಅಗತ್ಯವಿದೆ. ಬಿರುಕು ಉಂಟಾಗಲು ಸಾಧ್ಯವಿರುವ ಕಾರಣಗಳನ್ನು ತಜ್ಞರು ವಿಶ್ಲೇಷಿಸುತ್ತಿದ್ದು, ಶೀಘ್ರವೇ ವರದಿ ಸಿದ್ಧಪಡಿಸಲಾಗುವುದು.
ಇದಕ್ಕೂ ಮೊದಲು ಬಿಬಿಎಂಪಿಯನ್ನು ಈ ಹಿಂದೆ ವೈಟ್ ಟಾಪಿಂಗ್ ಮಾಡಲು ನಿರ್ಧರಿಸಲಾಗಿತ್ತು. ಆದರೆ ಇದು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ಮತ್ತು ಟ್ರಾಫಿಕ್ ಜಾಮ್ಗೆ ಕಾರಣವಾದ ಕಾರಣ, ಬಿಬಿಎಂಪಿ ಅಧಿಕಾರಿಗಳು ಕ್ಷಿಪ್ರ ರೋಡ್ ವಿಧಾನವನ್ನು ಅಳವಡಿಸಿಕೊಳ್ಳಲು ನಿರ್ಧರಿಸಿದ್ದಾರೆ.

ಒಂದು ಗಂಟೆಯೊಳಗೆ ಅರ್ಧ ಕಿಲೋಮೀಟರ್ ಹಾಕಬಹುದಾದ ರಸ್ತೆ ನಿರ್ಮಾಣದ ಅತ್ಯಂತ ವೇಗದ ವಿಧಾನ ಇದಾಗಿದೆ. ಆದರೆ, ಅದರ ವೆಚ್ಚವು ವೈಟ್ ಟಾಪಿಂಗ್ ವಿಧಾನಕ್ಕಿಂತ 30 ಪ್ರತಿಶತ ಅಧಿಕವಾಗಿರುತ್ತದೆ. ಹೀಗಾಗಿ ಈ ಕ್ಷಿಪ್ರ ರಸ್ತೆಗಳ ನಿರ್ಮಾಣಕ್ಕೆ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ನಿಧಿಯನ್ನು ಬಳಸುವುದಾಗಿ ಬಿಬಿಎಂಪಿ ಮೊದಲೇ ಹೇಳಿತ್ತು.
-
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications