ಗೌರಿ ಲಂಕೇಶ್ ಸಾವಿನ ಬಗ್ಗೆ ಮಾತನಾಡಿದ್ದು ನೋವು ತಂದಿದೆ: ಇಂದ್ರಜಿತ್
ಬೆಂಗಳೂರು, ಸೆಪ್ಟೆಂಬರ್ 3: ನನ್ನ ಅಕ್ಕ ಪತ್ರಕರ್ತೆ ಗೌರಿ ಲಂಕೇಶ್ ಸಾವಿನ ಬಗ್ಗೆ ಹೇಳಿಕೆ ನೀಡಿರುವುದು ನನಗೆ ತುಂಬಾ ನೋವು ತಂದಿದೆ ಎಂದು ಇಂದ್ರಜಿತ್ ಲಂಕೇಶ್ ಕಣ್ಣೀರು ಹಾಕಿದ ಘಟನೆ ಇಂದು ನಡೆದಿದೆ.
Recommended Video
ಈ ಕುರಿತು ಅವರ ನಿವಾಸದಲ್ಲಿ ಮಾತನಾಡಿದ ಇಂದ್ರಜಿತ್, ಅಕ್ಕ ಗೌರಿ ಲಂಕೇಶ್ ಅವರ ಬಗ್ಗೆ ಹೇಳಿಕೆ ನೀಡಿರುವುದು ತುಂಬಾ ದುಃಖ ತಂದಿದೆ. ಅವರ ತತ್ವ-ಸಿದ್ಧಾಂತ ಬೇರೆ ಇತ್ತು. ಅವರದ್ದು ಸೈದ್ಧಾಂತಿಕ ಕೊಲೆ ಎಂದು ಹೇಳಿ ಕಣ್ಣೀರು ಹಾಕಿದ್ದಾರೆ.
ಈ ಹಿಂದೆ ಒಬ್ಬ ನಟನ ಕುರಿತು ನಾನು ಹೇಳಿಕೆ ನೀಡಿದ್ದೆ. ಆದರೆ ಸಾವಿನ ಬಳಿಕ ಈ ರೀತಿ ಹೇಳಬಾರದು ಎಂದು ನನ್ನ ಹೇಳಿಕೆಯನ್ನು ವಾಪಸ್ ತೆಗೆದುಕೊಂಡಿದ್ದೇನೆ. ನಮ್ಮಕ್ಕನ ಸಾವು ಸಾವಲ್ಲವೇ, ನಮಗೂ ತಾಯಿ ಇಲ್ಲವೇ, ಅವರು ಕ್ಯಾನ್ಸರ್ ರೋಗಿ, ಅವರಿಗೆ ನೋವಾಗುವುದಿಲ್ಲವೇ, ನಮ್ಮಕ್ಕನನ್ನು ಸಿದ್ಧಾಂತ ದೃಷ್ಟಿಯಿಂದ ಹಲವರು ಒಪ್ಪದಿರಬಹುದು. ಆದರೆ ಒಂದು ಸಾವು ತರುವಷ್ಟೂ ಸಿದ್ಧಾಂತ ಕ್ರೂರಿಯಾಗಿದೆಯೇ ಎಂದು ಪರೋಕ್ಷವಾಗಿ ಪ್ರಮೋದ್ ಮುತಾಲಿಕ್ ಅವರಿಗೆ ತಿರುಗೇಟು ನೀಡಿದರು.

ಬುಧವಾರದಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು, ""ಡ್ರಗ್ ವಿಚಾರದಲ್ಲಿ ಇಂದ್ರಜಿತ್ ಲಂಕೇಶ್ ಹೀರೋ ಆಗೋಕೆ ಹೊರಟಿದ್ದಿರಲ್ಲ. ನಿಮ್ಮ ಅಕ್ಕ ಗೌರಿ ಲಂಕೇಶ್ ಡ್ರಗ್ ಅಡಿಕ್ಟ್ ಆದಾಗ ನೀವು ಎಲ್ಲಿ ಹೋಗಿದ್ರಿ? ಅಂದು ಯಾಕೆ ಈ ವಿಚಾರದ ಬಗ್ಗೆ ನೀವು ಮಾತನಾಡಲಿಲ್ಲ? ಗೌರಿ ಲಂಕೇಶ್ರನ್ನು ಸುಧಾರಿಸುವ ಪ್ರಯತ್ನ ಏಕೆ ಮಾಡಲಿಲ್ಲ?'' ಎಂದು ಪ್ರಶ್ನಿಸಿದ್ದರು.
ನಿರ್ದೇಶಕ ಇಂದ್ರಜಿತ್ ಮಾತನಾಡಿ, ಸಿನಿಮಾ ಇಂಡಸ್ಟ್ರಿಗೆ ಕೆಟ್ಟ ಹೆಸರು ಬರುತ್ತದೆ ಎಂದು ಹೇಳಲಾಗುತ್ತಿದೆ. ಆದರೆ ಡ್ರಗ್ಸ್ ಕಳಂಕದಿಂದ ಕೆಟ್ಟ ಹೆಸರು ಬರುತ್ತಿತ್ತು. ಇದನ್ನು ಸರಿಪಡಿಸುವ ಉದ್ದೇಶದಿಂದ, ಚಿತ್ರರಂಗವನ್ನು ಸ್ವಚ್ಛಗೊಳಿಸಬೇಕಿದೆ. ಇದರಲ್ಲಿ ಇತ್ತೀಚಿನ ನಟ, ನಟಿಯರು ಭಾಗಿಯಾಗಿದ್ದಾರೆ ಎಂದು ಪುನರುಚ್ಚರಿಸಿದರು.
ಈ ಕುರಿತು ಚಲನಚಿತ್ರ ವಾಣಿಜ್ಯ ಮಂಡಳಿಯು ಎಲ್ಲ ನಟ, ನಟಿಯರನ್ನು ಕರೆಸಿ ಎಚ್ಚರಿಕೆ, ಸಲಹೆ ನೀಡಿದ್ದರೆ ಈ ಮಟ್ಟಕ್ಕೆ ಬೆಳೆಯುತ್ತಿರಲಿಲ್ಲ. ಇದಾವುದನ್ನೂ ವಾಣಿಜ್ಯ ಮಂಡಳಿ ಮಾಡಲಿಲ್ಲ. ಈ ರೀತಿ ಸ್ವಚ್ಛವಾಗುವುದರಿಂದ ಮುಂದೆ ಬರುವ ಯುವ, ನಟ, ನಟಿಯರಿಗೆ ಸಹಕಾರಿಯಾಗಲಿದೆ. ಹನಿಟ್ರ್ಯಾಪ್ ವಿಚಾರ ಬಂದಾಗಲೂ ಯಾರೂ ಕರೆಸಿ ಮಾತನಾಡಲಿಲ್ಲ ಎಂದು ದೂರಿದ್ದಾರೆ.
ತನಿಖಾಧಿಕಾರಿಗಳಿಗೆ ಸಹಕಾರ ನೀಡುವುದು ನಮ್ಮ ಕರ್ತವ್ಯ, ನಿಮಗೆ ಗೊತ್ತಿದ್ದರೆ ನೀವೂ ಬಂದು ಹೇಳಿ, ಒಟ್ಟಿನಲ್ಲಿ ಚಿತ್ರರಂಗ ಸ್ವಚ್ಛವಾಗಬೇಕು. ನಮಗೆ ಸಪೋರ್ಟ್ ಬೇಕು, ರಕ್ಷಣೆ ಅಗತ್ಯ ನನಗಿಲ್ಲ ಎಂದು ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications