ಪಂ.ಗಣಪತಿ ಭಟ್ ಗೆ ಇನ್ಫೋಸಿಸ್-ಬಾಲೇಖಾನ್ ಸ್ಮರಣಾರ್ಥ ಪ್ರಶಸ್ತಿ
ಬೆಂಗಳೂರು, ಸೆಪ್ಟೆಂಬರ್ 6: ಗ್ವಾಲಿಯರ್ ಹಾಗೂ ಕಿರಾಣಾ ಘರಾಣಾದ ಪ್ರಸಿದ್ಧ ಹಿಂದುಸ್ತಾನಿ ಗಾಯಕ ಪಂ. ಗಣಪತಿ ಭಟ್ ಹಾಸಣಗಿಯವರು ಈ ಬಾರಿಯ "ಇನ್ಫೋಸಿಸ್ - ಸಿತಾರ್ ನವಾಜ್ ಉಸ್ತಾದ್ ಬಾಲೇಖಾನ್ ಸ್ಮರಣಾರ್ಥ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಸಿತಾರ್ ನವಾಜ್ ಉಸ್ತಾದ್ ಬಾಲೇಖಾನ್ ಮೆಮೋರಿಯಲ್ ಫೌಂಡೇಷನ್ ಟ್ರಸ್ಟ್ ವತಿಯಿಂದ ಸೆ.10, ಭಾನುವಾರದಂದು ಬೆಂಗಳೂರಿನ ಜೆಎಸ್ ಎಸ್ ಸಭಾಂಗಣದಲ್ಲಿ ಸ್ಮರಣೆ, ಸಂಗೀತ ಕಾರ್ಯಕ್ರಮ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ಪದ್ಮಶ್ರಿ ಪುರಸ್ಕೃತ ಕವಿ ನಾಡೋಜ ಡಾ. ಕೆ. ಎಸ್ ನಿಸಾರ್ ಅಹ್ಮದ್ ಮತ್ತು ಬಿಎನ್ ಎಂ ಚಾರಿಟೀಸ್ ನ ಟ್ರಸ್ಟಿ ಮತ್ತು ಕಾರ್ಯದರ್ಶಿ ನಾರಾಯಣ್ ರಾವ್ ಆರ್. ಮಾನೆ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಬೆಂಗಳೂರಿನ ಜಯನಗರದ 8ನೇ ಬ್ಲಾಕ್ ನ ಜೆಎಸ್ ಎಸ್ ಸಭಾಂಗಣದಲ್ಲಿ ಸಂಜೆ 5ಕ್ಕೆ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಪರ್ವೀನ್ ಜೆ.ಶೇಖ್ ಮತ್ತು ಅನೀಸಾ ಖಾನ್ ಸೌದಾಗರ್ ಅವರಿಂದ ಹಾಡುಗಾರಿಕೆ ಇರಲಿದೆ. ಶೈಲೇಶ್ ಶೆಣೈ ತಬಲಾ, ಹರ್ಷದಾ ಅವರು ಹಾರ್ಮೋನಿಯಂ ನುಡಿಸಲಿದ್ದಾರೆ. ನಂತರ ಇನ್ಫೋಸಿಸ್ ಸಿತಾರ್ ನವಾಜ್ ಉಸ್ತಾದ್ ಬಾಲೇಖಾನ್ ಸ್ಮಾರಕ ಪ್ರಶಸ್ತಿಯನ್ನು ಅಂತಾರಾಷ್ಟ್ರೀಯ ಖ್ಯಾತಿಯ ಗಾಯಕ ಪಂಡಿತ್ ಗಣಪತಿ ಭಟ್ ಹಾಸಣಗಿ ಅವರಿಗೆ ಪ್ರದಾನ ಮಾಡಲಾಗುತ್ತದೆ.

ನಿತ್ಯೋತ್ಸವ ಕವಿ ಕೆ.ಎಸ್.ನಿಸಾರ್ ಅಹ್ಮದ್, ಬಿಎನ್ ಎಂ ಚಾರಿಟೀಸ್ ನ ಟ್ರಸ್ಟಿ ಮತ್ತು ಕಾರ್ಯದರ್ಶಿ ನಾರಾಯಣ್ ರಾವ್ ಆರ್. ಮಾನೆ ಅವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ರೈಸ್ ಬಾಲೇಖಾನ್ ಮತ್ತು ಹಫೀಸ್ ಬಾಲೇಖಾನ್ ಅವರು ಹಾಡಿರುವ ಮತ್ತು ಉಸ್ತಾದ್ ರಫೀಕ್ ಖಾನ್ ಮತ್ತು ಪಂಡಿತ್ ಶ್ರೀನಿವಾಸ್ ಜೋಶಿ ಅವರು ಸಂಗೀತ ಸಂಯೋಜನೆಯನ್ನು ಮಾಡಿರುವ ವಚನ ಸ್ವರಧಾರೆ ಸಿಡಿಯನ್ನು ಬಿಡುಗಡೆ ಮಾಡಲಾಗುವುದು.
ಇದೇವೇಳೆ, ಎಂ.ಆರ್.ಕಲಾವತಿ ಅವರಿಗೆ ಸೌಭಾಗ್ಯ ಲಕ್ಷ್ಮಿ ವಸಂತರಾವ್ ಜಾಜೀ ಶಿಷ್ಯವೇತನವನ್ನು, ಬಿ.ಕೆ.ಮಮತಾ ಅವರಿಗೆ ಹಮೀದಾ ಬೇಗಂ ಬಾಲೇಖಾನ್ ಶಿಷ್ಯವೇತನವನ್ನು ನೀಡಿ ಗೌರವಿಸಲಾಗುವುದು.
ಇದಾದ ನಂತರ ಪಂಡಿತ್ ಗಣಪತಿ ಭಟ್ ಹಾಸಣಗಿ ಅವರಿಂದ ಹಾಡುಗಾರಿಕೆ ಇರಲಿದ್ದು, ಶ್ರೀಧರ್ ಮಾಂಡ್ರೆ ತಬಲ ಮತ್ತು ಗುರುಪ್ರಸಾದ್ ಹೆಗ್ಡೆ ಅವರು ಹಾರ್ಮೋನಿಯಂ ಸಾಥ್ ನೀಡಲಿದ್ದಾರೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications