ಕಿದ್ವಾಯಿ ಆಸ್ಪತ್ರೆಯ ಧರ್ಮಶಾಲೆ ನವೀಕರಿಸಿದ ಇನ್ಫೋಸಿಸ್
ಬೆಂಗಳೂರು, ಡಿಸೆಂಬರ್ 03: ಕಿದ್ವಾಯಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ನಲ್ಲಿರುವ ಧರ್ಮಶಾಲೆಯ ನವೀಕರಣವನ್ನು ಪೂರ್ಣಗೊಳಿಸಿದ ಇನ್ಫೋಸಿಸ್ ಫೌಂಡೇಷನ್ ಪೂರ್ಣಗೊಳಿಸಿದೆ.
ಇನ್ಫೋಸಿಸ್ನ ಸಹಾಯಾರ್ಥ ಸೇವಾ ವಿಭಾಗವಾದ ಇನ್ಫೋಸಿಸ್ ಫೌಂಡೇಷನ್ ಬೆಂಗಳೂರಿನ ಕಿದ್ವಾಯ್ ಕ್ಯಾನ್ಸರ್ ಇನ್ಸ್ಟಿಟ್ಯೂಟ್ನಲ್ಲಿ ಧರ್ಮಶಾಲೆಯ ನವೀಕರಣವನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿದೆ. ಈ ಧರ್ಮಶಾಲೆಯನ್ನು ಇನ್ಫೋಸಿಸ್ ಫೌಂಡೇಷನ್ನಿಂದ 2001ರಲ್ಲಿ ನಿರ್ಮಿಸಲಾಯಿತು.
ಈ ಪರಿಶ್ರಮದ ಅಂಗವಾಗಿ ಇನ್ಫೋಸಿಸ್ ಫೌಂಡೇಷನ್ ಹಲವಾರು ನವೀಕರಣ ಯೋಜನೆಗಳನ್ನು ಕೈಗೊಂಡಿತ್ತು.
ಸೆವೆದುಹೋಗಿದ್ದ ನೆಲ ಬದಲಾಯಿಸುವುದು ಮತ್ತು ಪ್ಲಂಬಿಂಗ್ನಲ್ಲಿದ್ದ ಹಲವಾರು ಸಮಸ್ಯೆಗಳನ್ನು ಸರಿಪಡಿಸುವುದು ಮುಂತಾದ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಸುಮಾರು 90 ಲಕ್ಷ ರೂ.ಗಳ ಈ ಯೋಜನೆಯಲ್ಲಿ ನೂತನ ಲಿಫ್ಟ್ ಶಾಫ್ಟ್ ಸೃಷ್ಟಿಸುವುದು ಮತ್ತು ನೂತನ ಲಿಫ್ಟ್ ವೊಂದರ ಸಂಪೂರ್ಣ ಸ್ಥಾಪನೆ ಸೇರಿತ್ತು.
2001ರಿಂದ ಕಿದ್ವಾಯ್ ಕ್ಯಾನ್ಸರ್ ಇನ್ಸ್ಟಿಟ್ಯೂಟ್ನೊಂದಿಗೆ ಬಹಳ ಹತ್ತಿರದಲ್ಲಿ ಇನ್ಫೋಸಿಸ್ ಫೌಂಡೇಷನ್ ಕೆಲಸ ಮಾಡಿದೆ. ಹಲವಾರು ಯೋಜನೆಗಳನ್ನು ಕೈಗೊಂಡಿದ್ದು, ಚಂಡೀಗಢ, ಹುಬ್ಬಳ್ಳಿ ಮತ್ತು ಕಲ್ಬುರ್ಗಿಗಳಲ್ಲಿ ಧರ್ಮಶಾಲೆಗಳನ್ನು ಕಟ್ಟಲು ನೆರವು ನೀಡಿದೆ.

ಹೆಚ್ಚುವರಿಯಾಗಿ ಈ ಫೌಂಡೇಷನ್ ಬೆಂಗಳೂರಿನ ಕಿದ್ವಾಯ್ ಕ್ಯಾನ್ಸರ್ ಇನ್ಸ್ಟಿಟ್ಯೂಟ್ನಲ್ಲಿ ಶಸ್ತ್ರಕ್ರಿಯಾ ಕೊಠಡಿ ಸಂಕೀರ್ಣ ನಿರ್ಮಾಣಕ್ಕೆ, ಓಡಿಶಾದಲ್ಲಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಮತ್ತು ಮಹಾರಾಷ್ಟ್ರದಲ್ಲಿ ಆಸ್ಪತ್ರೆ ಘಟಕ ನಿರ್ಮಾಣಕ್ಕೆ, ಕರ್ನಾಟಕದಲ್ಲಿ ವೈದ್ಯಕೀಯ ವಾರ್ಡ್ಗಳು ಮತ್ತು ಪೆಥಾಲಜಿ ಪ್ರಯೋಗಾಲಯ ನಿರ್ಮಾಣಕ್ಕೆ, ಕರ್ನಾಟಕ ಮತ್ತು ಅರುಣಾಚಲ ಪ್ರದೇಶಗಳಲ್ಲಿ ಆಸ್ಪತ್ರೆಗಳಿಗೆ ವೈದ್ಯಕೀಯ ಉಪಕರಣಗಳನ್ನು ಪಡೆದುಕೊಳ್ಳಲು ಮತ್ತು ಇತರೆ ಉಪಕ್ರಮಗಳಿಗೆ ನಿಧಿ ನೆರವು ನೀಡಿದೆ.
ನವೀಕರಣ ಕಾರ್ಯಕ್ಕೆ 2 ಕೋಟಿ ರು ವೆಚ್ಚವಾಗಿದೆ. 40 ಕೋಟಿ ರು ಅನುದಾನ ಸಿಕ್ಕಿದೆ. ಸುಮಾರು 150ರಿಂದ 170 ಕೊಠಡಿಗಳ ಹೊಸ ಧರ್ಮಶಾಲಾ ನಿರ್ಮಾಣಕ್ಕೆ ಸರ್ಕಾರದ ಅನುಮತಿ ನೀಡಲಾಗಿದೆ ಎಂದು ತಿಳಿದು ಬಂದಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications