ಇನ್ಫೋಸಿಸ್ನ 32.6 ದಶಲಕ್ಷ ಷೇರು ಮಾರಾಟಕ್ಕೆ
ಬೆಂಗಳೂರು, ಡಿ. 8: ಸ್ಥಾಪಕರು ಹೊರಬಂದ ನಂತರ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದ ಕರ್ನಾಟಕ ಮೂಲದ ಇನ್ಫೋಸಿಸ್ ಕಂಪನಿಯು ವಿಶಾಲ್ ಸಿಕ್ಕಾ ಅವರು ಸಿಇಓ ಆಗಿ ಆಯ್ಕೆಯಾದ ನಂತರ ಚೇತರಿಸಿಕೊಂಡಿತ್ತು. ಆದರೆ, ಸೋಮವಾರ ಮತ್ತೆ ಕಂಪನಿಯ ಷೇರು ದರ ಶೇ. 3ರಷ್ಟು ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಇನ್ಫೋಸಿಸ್ನ ನಾಲ್ವರು ಸಂಸ್ಥಾಪಕರು ತಮ್ಮಲ್ಲಿರುವ 32.6 ಮಿಲಿಯನ್ ಷೇರುಗಳನ್ನು ಮಾರಾಟಕ್ಕೆ ಮುಂದಾಗಿದ್ದಾರೆ. [ಇನ್ ಫೋಸಿಸ್ ಗೊಣಗಾಟ-ಸರ್ಕಾರ ಗೋಣಾಡಿಸಬೇಕೆ?]
ಇನ್ಫೋಸಿಸ್ ಸಂಸ್ಥೆಯ ಸಂಸ್ಥಾಪಕರಾದ ನಾರಾಯಣ ಮೂರ್ತಿ, ನಂದನ್ ನಿಲೇಕಣಿ, ಎಸ್.ಡಿ. ಶಿಬುಲಾಲ್ ಮತ್ತು ಕೆ. ದಿನೇಶ್ ಅವರು ತಲಾ 1,988 ಕೋಟಿ ರೂ. ಮೊತ್ತದ ಷೇರುಗಳನ್ನು ಶೇ. 4ರಷ್ಟು ರಿಯಾಯಿತಿ ದರದಲ್ಲಿ ಮಾರಲು ನಿರ್ಧರಿಸಿದ್ದಾರೆ. ಡುಯೆಚ್ ಬ್ಯಾಂಕ್ ಈ ಷೇರುಗಳ ಮಾರಾಟದ ಹೊಣೆ ಹೊತ್ತಿದೆ. ಆದರೆ, ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲು ಇನ್ಫೋಸಿಸ್ ಕಾರ್ಯನಿರ್ವಾಹಕ ಅಧಿಕಾರಿಗಳು ನಿರಾಕರಿಸಿದ್ದಾರೆ. [ಇನ್ ಫೋಸಿಸ್ ಶಿಫ್ಟಿಂಗ್: ಸಿಎಂ ಜಾಣ ಉತ್ತರ]

ವಿಶಾಲ್ ಸಿಕ್ಕಾ ಬಂದ ನಂತರ ಈ ಬೆಳವಣಿಗೆ...
ಇನ್ಫೋಸಿಸ್ ಸಂಸ್ಥೆಯು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹುದ್ದೆಗೆ ಹೊರಗಿನ ವ್ಯಕ್ತಿಯೋರ್ವರನ್ನು (ವಿಶಾಲ್ ಸಿಕ್ಕಾ) ಇದೇ ಪ್ರಥಮ ಬಾರಿಗೆ ನೇಮಿಸಿದ ಕೆಲವೇ ತಿಂಗಳುಗಳಲ್ಲಿ ಈ ಬೆಳವಣಿಗೆ ನಡೆದಿರುವುದು ಗಮನೀಯ ಅಂಶ. ವಿಶಾಲ್ ಸಿಕ್ಕಾ ಬರುವಷ್ಟರಲ್ಲಿ ಎಲ್ಲ ಕಾರ್ಯನಿರ್ವಾಹಕರೂ ಕಂಪನಿ ತೊರೆದಿದ್ದರು. [ಸಿಕ್ಕಾ ಸಿಕ್ಕಾಪಟ್ಟೆ ಸಂಬಳ ಏರಿಸ್ತಾರಪ್ಪ!]
ಪ್ರಸ್ತುತ ಮಾರಾಟಕ್ಕಿಟ್ಟಿರುವ ಷೇರುಗಳಿಂದ 1.1 ಬಿಲಿಯನ್ ಡಾಲರ್ ಆದಾಯ ಬರುವ ನಿರೀಕ್ಷೆಯಿದೆ. 2014ರ ಸೆಪ್ಟೆಂಬರ್ 30ರಂತೆ ಪ್ರಮೋಟರ್ಗಳು ಶೇ. 15.92 ರಷ್ಟು, ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಶೇ. 42.67ರಷ್ಟು ಹಾಗೂ ದೇಶೀಯ ಸಾಂಸ್ಥಿಕ ಹೂಡಿಕೆದಾರರು ಶೇ. 14.48 ರಷ್ಟು ಷೇರುಗಳನ್ನು ಹೊಂದಿದ್ದಾರೆ. [ಇನ್ ಫೋಸಿಸ್ ಗೆ ಮರಳಲ್ಲ: ನೀಲೇಕಣಿ]
ಭಾರತದ ಷೇರುಗಳ ಬೆಲೆಯಲ್ಲಿ ಪ್ರಸಕ್ತ ವರ್ಷ ಶೇ. 35.4ರಷ್ಟು ಏರಿಕೆ ಕಂಡುಬಂದಿದ್ದರೆ, ಇನ್ಫೋಸಿಸ್ ಷೇರುಗಳು ಶೇ. 18.8ರಷ್ಟು ಏರಿಕೆ ಕಂಡಿವೆ. ಒಂದು ಕಾಲದಲ್ಲಿ ಅಮೆರಿಕ ಅಧ್ಯಕ್ಷರ ನಿದ್ದೆಗೆಡಿಸಿದ್ದ ಇನ್ಫೋಸಿಸ್ ಎಂಬ ಸಾಫ್ಟ್ವೇರ್ ಹೊರಗುತ್ತಿಗೆ ಪಡೆಯುವ ದೈತ್ಯ ಕಂಪನಿ ಆರ್ಥಿಕ ಚೇತರಿಕೆಗಾಗಿ ಕೈಗೊಳ್ಳುತ್ತಿರುವ ವಿವಿಧ ಕ್ರಮಗಳು ಟೆಕ್ಕಿಗಳಲ್ಲಿ ಹೊಸ ಆಸೆ ಸೃಷ್ಟಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications