ಮಸಿ ಬಳಿದ ಕೇಸ್: ವಕೀಲೆ ಮೀರಾ ವಿರುದ್ಧ ಪ್ರಕರಣ, FIR ದಾಖಲಿಸಿದ ಭಗವಾನ್
ಬೆಂಗಳೂರು, ಫೆಬ್ರವರಿ 4: ಹಿರಿಯ ಸಾಹಿತಿ, ಚಿಂತಕ ಕೆ. ಎಸ್. ಭಗವಾನ್ ಮುಖಕ್ಕೆ ನ್ಯಾಯಾಲಯದ ಆವರಣದಲ್ಲಿ ಮಸಿ ಬಳಿದ ವಕೀಲೆ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ 2ನೇ ಎಸಿಎಂಎಂ ನ್ಯಾಯಾಲಯದ ಆವರಣದಲ್ಲಿ ಗುರುವಾರ ಮಧ್ಯಾಹ್ನ ನಡೆದ ಈ ಘಟನೆಯ ಬಳಿಕ ನೇರ ಹಲಸೂರು ಗೇಟ್ ಠಾಣೆಗೆ ತೆರಳಿದ ಪ್ರೊ ಭಗವಾನ್ ಅವರು ವಕೀಲೆ ಮೀರಾ ರಾಘವೇಂದ್ರ ವಿರುದ್ಧ ದೂರು ದಾಖಲಿಸಿದ್ದಾರೆ. ದೂರು ಸ್ವೀಕರಿಸಿರುವ ಠಾಣಾಧಿಕಾರಿಗಳು ಮೀರಾ ವಿರುದ್ಧ ಐಪಿಸಿ ಸೆಕ್ಷನ್ 504(ಉದ್ದೇಶ ಪೂರ್ವಕವಾಗಿ ಅವಮಾನ), 506(ಜೀವ ಬೆದರಿಕೆ ಹಲ್ಲೆ), 341 (ಉದ್ದೇಶ ಪೂರ್ವಕವಾಗಿ ಅಡ್ಡಗಟ್ಟುವುದು), 323(ಸ್ವಯಂ ಪ್ರೇರಣೆಯಿಂದ ತಡೆಯೊಡ್ಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಸಿ ಬಳಿದಿದ್ದನ್ನು ಸಮರ್ಥಿಸಿಕೊಂಡ ಮೀರಾ:
ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಗೆ ಗ್ರಾಸವಾಗುತ್ತಿದ್ದ ಸಾಹಿತಿ ಪೊ ಕೆ ಎಸ್ ಭಗವಾನ್ ಅವರು ಹಿಂದೂ ಧರ್ಮದ ವಿರುದ್ಧ ಸದಾಕಾಲ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ. ಕಳೆದ ಅಕ್ಟೋಬರ್ ತಿಂಗಳಿನಲ್ಲಿ ''ಹಿಂದೂ ಧರ್ಮವೆಂಬುದೇ ಇಲ್ಲ ಹಿಂದೂ ಧರ್ಮ ಅವಮಾನಕರ, ಮಾನ ಮರ್ಯಾದೆ ಇರುವವರು ಹಿಂದು ಶಬ್ದ ಬಳಸಬಾರದು'' ಎಂದು ಹೇಳಿದ್ದರು. ಈ ಹೇಳಿಕೆ ವಿರುದ್ಧ ಐಪಿಸಿ ಸೆಕ್ಷನ್ 298, 505 ಅಡಿಯಲ್ಲಿ ಬೆಂಗಳೂರಿನ ಎಸಿಎಂಎಂ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದೆ.

ಆದರೆ, ಈ ಪ್ರಕರಣದಲ್ಲಿ ಜಾಮೀನು ಕೋರಿ ಅರ್ಜಿ ಹಾಕಿದ್ದ ಪ್ರೊ ಭಗವಾನ್ ಅವರು ಮೈಸೂರಿನಿಂದ ನ್ಯಾಯಾಲಯಕ್ಕೆ ಹಾಜರಾಗಿದ್ದರು. ನಂತರ ಜಾಮೀನು ಪಡೆದುಕೊಂಡು ಹೊರ ಬಂದರು. ನಾನು ಕಪ್ಪು ಮಸಿ ಬಳಿದು ತಕ್ಕಶಾಸ್ತ್ರಿ ಮಾಡಿದ್ದೇನೆ ಎಂದು ಮೀರಾ ಅವರು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ
''ನನ್ನನ್ನು ಬಂಧಿಸಿ ಏನು ಬೇಕಾದರೂ ಮಾಡಿ. ಐಯಂ ರೆಡಿ ಫಾರ್ ಎವೆರಿ ಥಿಂಗ್. (ನಾನು ಎಲ್ಲಕ್ಕೂ ಸಿದ್ಧಳಾಗಿದ್ದೇನೆ). ನಾನು ಜೈಲಿಗೆ ಹೋಗಲು ಕೂಡ ರೆಡಿ. ಏನ್ಸಾರ್ ಇಷ್ಟು ವಯಸ್ಸಾಗಿದೆ. ಇನ್ನೂ ದೇವರ ಬಗ್ಗೆ ರಾಮನ ಬಗ್ಗೆ ಹಿಂದೂ ಧರ್ಮದ ಬಗ್ಗೆ ಮಾತನಾಡುತ್ತೀರಿ ನಾಚಿಕೆಯಾಗುವುದಿಲ್ಲವೇ ನಿಮಗೆ'' ಎಂದು ವಕೀಲೆ ಆಕ್ರೋಶದಿಂದ ಪ್ರಶ್ನಿಸಿದರು.
ಮೈಸೂರಿನಲ್ಲಿ ಭಗವಾನ್ ಮುಖಕ್ಕೆ ಮಸಿ ಎರಚಿದ ವಕೀಲೆ#Mysuru #Bhagwan pic.twitter.com/aaz0mfcu4E
— oneindiakannada (@OneindiaKannada) February 4, 2021
ನಂತರ ಭಗವಾನ್ ಅವರನ್ನು ಗನ್ ಮ್ಯಾನ್, ಕೆಲ ವಕೀಲರು ಹಾಗೂ ಪೊಲೀಸರು ಕೋರ್ಟ್ ಆವರಣದಿಂದ ಕರೆದುಕೊಂಡು ಹೋದರು.
''ನ್ಯಾಯದೇಗುಲದಲ್ಲಿ ಪ್ರಕರಣ ನಡೆಯಬಾರದಿತ್ತು. ಏನೇ ಇದ್ದರೂ ಕಾನೂನಿನ ಚೌಕಟ್ಟಿನಡಿ ಬಗೆಹರಿಸಿಕೊಳ್ಳಬೇಕು. ಇದು ಕ್ಷಮೆ ಕೋರಬೇಕಾದ ಘಟನೆ'' ಎಂದು ಫೇಸ್ಬುಕ್ ಲೈವ್ನಲ್ಲಿ ನ್ಯಾಯವಾದಿ ಜಗದೀಶ್ ಕೆ ಎನ್ ಮಹದೇವ್ ಅವರು ಬಾರ್ ಅಂಡ್ ಬೆಂಚ್ ತಾಣಕ್ಕೆ ತಿಳಿಸಿದ್ದಾರೆ. ಟ್ವಿಟ್ಟರಲ್ಲೂ ಪರ ವಿರೋಧ ಚರ್ಚೆ ನಡೆದಿದೆ.
Recommended Video
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications