ಬೆಂಗ್ಳೂರಿನ ಸಸ್ಯಕಾಶಿಯಲ್ಲಿ ನಿರ್ಮಾಣವಾಯ್ತು "ಕೀಟ ಕೆಫೆ", ಏನಿದು?, ಇಲ್ಲಿದೆ ಇಂಟರೆಸ್ಟಿಂಗ್ ಸ್ಟೋರಿ
ಬೆಂಗಳೂರು, ಅಕ್ಟೋಬರ್, 15: ಸಾಮಾನ್ಯವಾಗಿ ಮನುಷ್ಯರು, ಪ್ರಾಣಿ-ಪಕ್ಷಿಗಳಿಗೆ ಮನೆ ಇರುವುದನ್ನು ನೋಡಿರುತ್ತೇವೆ. ಆದರೆ ಕೀಟಗಳಿಗೆ ಮನೆ ಮಾಡಿರುವುದನ್ನು ನೋಡಿದ್ದೀರಾ. ಹೌದು ಸಸ್ಯಕಾಶಿ ಅಂತಲೇ ಕರೆಸಿಕೊಳ್ಳುವ ಲಾಲ್ಬಾಗ್ನಲ್ಲಿ ತೋಟಗಾರಿಕಾ ಇಲಾಖೆಯು ಈ ವಿನೂತನ ಪ್ರಯತ್ನಕ್ಕೆ ಮುಂದಾಗಿದೆ. ಹಾಗಾದರೆ ಹೇಗಿದೆ ಈ ಕೀಟಗಳ ಮನೆ? ಹಾಗೂ ಇದರ ವಿಶೇಷತೆ ಏನು ಅನ್ನುವ ವಿವರವನ್ನು ಇಲ್ಲಿ ತಿಳಿಯಿರಿ.
ನೋಡುವುದಕ್ಕೆ ಒಂದು ಚಿಕ್ಕ ಮನೆ ತರ ಇದೆ. ಆದರೆ ಮನೆ ಒಳಗಡೆ ಮನುಷ್ಯರು ಇರುವುದಕ್ಕೆ ಆಗುವುದಿಲ್ಲ. ಬದಲಾಗಿ ಇಲ್ಲಿ ಕೀಟಗಳು ವಾಸ ಮಾಡಬಹುದು. ಸಂತಾನೋತ್ಪತ್ತಿ ಮಾಡಲು ಅನುಕೂಲಕರವಾದ ವಾತಾವರಣ ಇದೆ. ಈ ಮನೆಯ ಪ್ರತಿ ವಿಭಾಗದಲ್ಲಿ ಸಣ್ಣ, ಮಧ್ಯಮ ಮರದ ತುಂಡುಗಳು, ಒಣ ಹುಲ್ಲು, ನಾನಾ ರೀತಿಯ ಸಸ್ಯಗಳ ಕಟ್ಟಿಗೆ ಇತ್ಯಾದಿಗಳನ್ನು ಒಂದಕ್ಕೊಂದು ಅಂಟಿಕೊಂಡಿರುವಂತೆ ಜೋಡಿಸಿ ಭದ್ರಪಡಿಸಲಾಗಿದೆ. ಇಲ್ಲಿ ಎಲ್ಲಾ ಬಗೆಯ ಕೀಟ, ದುಂಬಿಗಳು ನೆಲೆಸಲು ಸಂತಾನೋತ್ಪತ್ತಿ ಹೊಂದಿ ಅವುಗಳ ಬೆಳವಣಿಗೆಗೆ ಪ್ರಮುಖ ಕಾರಣವಾಗಲಿದೆ.

ಕೀಟ-ದುಂಬಿಗಳಿಗೆ ಸರ್ವ ರೀತಿಯಲ್ಲಿಯೂ ಸಹಾಯಕಾರಿ ಆಗುವಂತೆ ಒಣ ಮರ ಕೊರೆಯುವ ದುಂಬಿ ಪ್ರಬೇಧಗಳಿಗೆ ಬೇಕಾದ ಮರಗಳು ಹಾಗೂ ಮಣ್ಣಿನೊಳಗೆ ಕೊರಕಲು ಮಾಡಿ ಅಲ್ಲಿ ಅಡಗಿಕೊಳ್ಳುವ ಕೀಟಗಳಿಗೂ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಕಾರ್ಪೆಂಟರ್ ಬೀ, ಬಿಂಬಲ್ ಬೀ ಇತ್ಯಾದಿ ಪ್ರಭೇದಗಳಲ್ಲಿ ಪ್ರಮುಖವಾದವುಗಳು. ಗೂಡು ಕಟ್ಟಿ ಜೇನು ಸಂಗ್ರಹಿಸುವ ದುಂಬಿಗಳು ಕಡಿಮೆ ಸಂಖ್ಯೆಯಲ್ಲಿದ್ದು, ಒಂಟಿ-ದುಂಬಿಗಳು ಸಹಸ್ರಾರು ಸಂಖ್ಯೆಯಲ್ಲಿವೆ. ಅವು ಗೂಡು ಕಟ್ಟುವುದರ ಬದಲು ಒಂಟಿಯಾಗಿ ಒಣ ಮರ ಕೊರೆದು ರಂದ್ರ ಮಾಡಿ ಅಲ್ಲೇ ಬದುಕುತ್ತವೆ.
ಪರಿಸರದಲ್ಲಿ ಅಸಂಖ್ಯಾತ ಬಗೆಯ ಕ್ರಿಮಿ, ಕೀಟ, ದುಂಬಿಗಳಿದ್ದು, ನೈಸರ್ಗಿಕ ಆಹಾರ ಸರಪಳಿಯ ಪ್ರಥಮ ಹಂತದಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಆದರೆ ಇತ್ತೀಚಿನ ನಗರೀಕರಣದ ದೆಸೆಯಲ್ಲಿ ಪ್ರಕೃತಿ ದತ್ತವಾಗಿದ್ದಂತಹ ಹಸಿರು ತಾಣಗಳು ಮರೆಯಾಗಿದ್ದು, ಕೀಟಗಳ ಆಸರೆ, ಸಂತಾನೋತ್ಪತ್ತಿ ಮತ್ತು ವೃದ್ಧಿಗಾಗಿ ಸುರಕ್ಷಿತ ನೆಲೆ ಇಲ್ಲದಂತಾಗಿದೆ. ಹೀಗಾಗಿ ಸರ್ವರೀತಿಯಲ್ಲಿಯೂ ಕೀಟಗಳಿಗೆ ಪೂರಕವಾಗಬಲ್ಲ ಹೊಸ ಪರಿಕಲ್ಪನೆಯ ಕೀಟ ಕೆಫೆ, ಅಂದರೆ ಎಲೆಗಳ ಮರೆಯಲ್ಲಿ, ಮರಗಳ ರಂಧ್ರ, ಪೊಟರೆಯಲ್ಲಿ ಕೀಟಗಳು ಆಶ್ರಯ ಪಡೆಯಬಹುದಾದ ಹೊಸ ಪರಿಕಲ್ಪನೆಗೆ ನಗರದ ಲಾಲ್ಬಾಗ್ ಸಸ್ಯಕಾಶಿಯಲ್ಲಿ ಚಾಲನೆ ನೀಡಲಾಗಿದೆ.
ತೋಟಗಾರಿಕಾ ಇಲಾಖೆಯ ಸಹಯೋಗದಲ್ಲಿ ವಿಭಿನ್ನ ಇಂಡಿಯಾ ಫೌಂಡೇಶನ್ನ ಸಹಭಾಗಿತ್ವದಲ್ಲಿ ಈ ಪರಿಕಲ್ಪನೆ ಮೂಡಿಬಂದಿದ್ದು, ಇಂದು ತೋಟಗಾರಿಕಾ ನಿರ್ದೇಶಕರಾದ ಡಿ.ಎಸ್.ರಮೇಶ್ ಅವರು ಉದ್ಘಾಟನೆ ಮಾಡಿದ್ದಾರೆ. ಇನ್ನು ಲಾಲ್ಬಾಗ್ ಮಾತ್ರವಲ್ಲದೆ ಕಬ್ಬನ್ ಪಾರ್ಕ್ ಉದ್ಯಾನವನ, ನಂದಿ ಗಿರಿಧಾನ, ಕೃಷ್ಣರಾಜೇಂದ್ರ ಗಿರಿಧಾಮ ಹಾಗೂ ಎಲ್ಲಾ ಸಸ್ಯಶಾಸ್ತ್ರೀಯ ತೋಟಗಳಲ್ಲಿಯೂ ಸಹ ಹೊಸ ಪರಿಕಲ್ಪನೆಯಡಿಯಲ್ಲಿ 50ಕ್ಕೂ ಹೆಚ್ಚು ಕೀಟ ಕೆಫೆಗಳನ್ನ ನಿರ್ಮಿಸಲು ತೋಟಗಾರಿಕಾ ಇಲಾಖೆ ಚಿಂತನೆ ನಡೆಸಿದೆ.
ಒಟ್ಟಿನಲ್ಲಿ ಪ್ರಕೃತಿಯ ಉಳಿವಿಗೆ ಪೂರಕವಾಗಿರುವ ಕೀಟ ಸಂತತಿಯನ್ನ ಉಳಿಸಿಕೊಳ್ಳಬೇಕಾದ್ದು, ನಮ್ಮೆಲ್ಲರ ಹೊಣೆ. ಇಲ್ಲವಾದಲ್ಲಿ ಆಹಾರ ಸರಪಳಿ ವ್ಯವಸ್ಥೆಯಲ್ಲೇ ಏರುಪೇರಾಗಲಿದೆ. ಹೀಗಾಗಿ ಸರ್ವರೂ ಕೀಟ ಕೆಫೆಗಳನ್ನ ಸ್ಥಾಪಿಸುವ ಮುಖೇನ ಕೀಟ ಸಂರಕ್ಷಣೆಗೆ ಪೂರಕವಾಗಬೇಕೆಂಬುದು ತೋಟಗಾರಿಕೆ ಇಲಾಖೆಯ ಆಶಯ.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ











Click it and Unblock the Notifications