ಶ್ರೀ ಶ್ರೀ ರವಿಶಂಕರ್ ಶಾಲೆಯ ಶಿಕ್ಷಕನಿಂದ ಅನುಚಿತ ವರ್ತನೆ
ಬೆಂಗಳೂರು, ಜು. 26: ವಿಬ್ಗಯಾರ್ ಶಾಲಾ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣದ ಬೆಂಕಿ ಆರುವ ಮುನ್ನವೇ ನಗರದ ಪ್ರತಿಷ್ಠಿತ ಶಾಲೆಯಲ್ಲಿ ವಿದ್ಯಾರ್ಥಿನಿಯರೊಂದಿಗೆ ದೈಹಿಕ ಶಿಕ್ಷಕನೊಬ್ಬ ಅನುಚಿತವಾಗಿ ವರ್ತಿಸಿರುವ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ.
ಕನಕಪುರ ರಸ್ತೆಯ ಶ್ರೀ ಶ್ರೀ ರವಿಶಂಕರ್ ವಿದ್ಯಾಮಂದಿರದ ಶಿಕ್ಷಕ ಡಿ.ಆರಿಫುಲ್ಲಾ, ವಿದ್ಯಾರ್ಥಿನಿಯರ ಜತೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಹೇಳಲಾಗುತ್ತಿದೆ.
ಈ ಸಂಬಂಧವಾಗಿ ಜುಲೈ 21ರಂದು ವಿದ್ಯಾರ್ಥಿನಿಯೊಬ್ಬಳು ಶಾಲೆಯ ಪ್ರಾಂಶುಪಾಲರಿಗೆ ದೂರು ನೀಡಿದ್ದಾಳೆ. ಆ ದೂರು ಆಧರಿಸಿ ಮಾರನೇ ದಿನವೇ ಆಡಳಿತ ಮಂಡಳಿ ಆರೀಫ್ಗೆ ಎಚ್ಚರಿಕೆ ನೀಡಿ, 15 ದಿನ 'ದೀರ್ಘ ರಜೆ' ಮೇಲೆ ಕಳುಹಿಸಿದ್ದಾರೆ.
ಆಡಳಿತ ಮಂಡಳಿಯ ಸದಸ್ಯರು ಪೋಷಕರೊಂದಿಗೆ ಶುಕ್ರವಾರ ಸಭೆ ನಡೆಸಿ ಚರ್ಚಿಸಿದ್ದಾರೆ. ವಿದ್ಯಾರ್ಥಿನಿಯೊಬ್ಬಳು ಆತ ತನ್ನ ಮೇಲೆ ಕೆಟ್ಟ ದೃಷ್ಟಿಯಿಂದ ನೋಡುತ್ತಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾಳೆ. ಆದರೆ ಆತ ಯಾವುದೇ ಲೈಂಗಿಕ ದೌರ್ಜನ್ಯ ಎಸಗಿಲ್ಲ ಎಂದು ಶಾಲೆಯ ಪ್ರಾಂಶುಪಾಲೆ ಸುಮಾ ಅತ್ರಿ ಸ್ಪಷ್ಟಪಡಿಸಿದ್ದಾರೆ.
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ (ಪೋಕ್ಸೊ) ಪ್ರಕಾರ ಮಕ್ಕಳ ಮೇಲೆ ದೈಹಿಕ ಸ್ಪರ್ಶ ಮಾಡದಿದ್ದರೂ ಕೆಟ್ಟ ದೃಷ್ಟಿಯಿಂದ ನೋಡುವುದು ಕೂಡ ಲೈಂಗಿಕ ಕಿರುಕುಳ ಎಂದೇ ಪರಿಗಣನೆಯಾಗುವುದರಿಂದ ಹಕ್ಕುಗಳ ರಕ್ಷಣಾ ಆಯೋಗ ಈ ಘಟನೆ ಸಂಬಂಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.[ವಿಬ್ ಗಯಾರ್ ಶಾಲೆಯ ಸಂಸ್ಥಾಪಕನ ಬಂಧನ]
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO













Click it and Unblock the Notifications