ಬೆಂಗಳೂರು : ಇಂಟೆಲ್ ಇನ್ ಸೈಡ್, ಗಾರ್ಬೇಜ್ ಔಟ್ ಸೈಡ್!
ಬೆಂಗಳೂರು, ಆಗಸ್ಟ್ 08: ಆಸ್ತಿತೆರಿಗೆ ಪಾವತಿಸದ ಪ್ರತಿಷ್ಠಿತ ಇಂಟೆಲ್ ಸಂಸ್ಥೆ ಮುಂದೆ ಕಸದ ವಾಹನಗಳನ್ನು ನಿಲ್ಲಿಸಿ ಬಿಬಿಎಂಪಿ ವಿಶಿಷ್ಟವಾಗಿ ಎಚ್ಚರಿಕೆ ನೀಡಿದೆ. ಇಂಟೆಲ್ ಸಂಸ್ಥೆ ಸುಮಾರು 34 ಕೋಟಿ ರು ಬಾಕಿ ಉಳಿಸಿಕೊಂಡಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿನೂತನ ವಿಧಾನ ಅನುಸರಿಸುತ್ತಾ ಬಂದಿರುವುದು ಗೊತ್ತಿರಬಹುದು. ಸಾಲಗಾರ ಸಂಸ್ಥೆಗಳ ಮುಂದೆ ತಮಟೆ ಬಾರಿಸುವುದು, ದಿನ ಪತ್ರಿಕೆಯಲ್ಲಿ ವರದಿ, ನೋಟಿಸ್ ಜಾರಿಗೊಳಿಸುವುದು ಕೊನೆಗೆ ದಾಳಿ ಮಾಡುವುದು ನಡೆಸುವುದು ಗೊತ್ತೇ ಇದೆ. [ಮಾನ್ಯತಾ ಟೆಕ್ ಪಾರ್ಕ್ ಕಚೇರಿ ಜಪ್ತಿ ಮಾಡಿದ ಬಿಬಿಎಂಪಿ]
ಈಗ ಕಸ ಸಂಗ್ರಹಣಾ ವಾಹನಗಳನ್ನು ಕಚೇರಿ ಎದುರು ಸಾಲಾಗಿ ನಿಲ್ಲಿಸಲಾಗುತ್ತಿದೆ. ತೆರಿಗೆ ಪಾವತಿಸದಿದ್ದರೆ ಕಚೇರಿ ಆವರಣದೊಳಗೆ ಕಸ ಸುರಿಯುವುದಾಗಿ ಬಿಬಿಎಂಪಿ ಅಧಿಕಾರಿಗಳು ಎಂದು ಎಚ್ಚರಿಸಿದ್ದಾರೆ.

ಬೆಂಗಳೂರಿನ ಬೆಳ್ಳಂದೂರು ಬಳಿ ಇರುವ ಇಂಟೆಲ್ ಸಂಸ್ಥೆ ಒಟ್ಟು 34 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿದೆ. ತೆರಿಗೆ ಪಾವತಿಸುವಂತೆ ಇಂಟೆಲ್ ಸಂಸ್ಥೆಗೆ ಮುಂಚಿತವಾಗಿ ನೋಟಿಸ್ ನೀಡಲಾಗಿದೆ. ಆದರೆ, ಇದಕ್ಕೆ ಸಂಸ್ಥೆಯಿಂದ ಪ್ರತಿಕ್ರಿಯೆ ಸಿಗದ ಹಿನ್ನಲೆಯಲ್ಲಿ ಬಿಬಿಎಂಪಿ ಈ ಕ್ರಮಕ್ಕೆ ಮುಂದಾಗಿದೆ.
ನಗರದ 10 ಪ್ರತಿಷ್ಠಿತ ಕಂಪನಿಗಳು ತಮ್ಮ ಕಟ್ಟಡದ ವಿಸ್ತೀರ್ಣದ ಲೆಕ್ಕ ತಪ್ಪಾಗಿ ಘೋಷಿಸಿಕೊಂಡಿದ್ದಕ್ಕೆ ದಂಡ ಹಾಗೂ ಬಡ್ಡಿ ಸಮೇತ ಬಾಕಿ ವಸೂಲಿ ಮಾಡಲು ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಬಿಬಿಎಂಪಿ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಂ ಶಿವರಾಜು ಹೇಳಿದ್ದಾರೆ.[ಬಾಕಿ ಉಳಿಸಿಕೊಂಡಿರುವ ಟಾಪ್ 10 ಕಂಪನಿಗಳು]
ಇತ್ತೀಚೆಗೆ ಮಾನ್ಯತಾ ಟೆಕ್ ಪಾರ್ಕ್ ಮೇಲೆ ದಾಳಿ ನಡೆಸಿದ್ದ ಬಿಬಿಎಂಪಿ ಅಧಿಕಾರಿಗಳು, ಸಂಸ್ಥೆಯ ಆಡಳಿತ ಕಚೇರಿ ಬಂದ್ ಮಾಡಿ, ಆಸ್ತಿ ಜಪ್ತಿ ಮಾಡಿದ್ದನ್ನು ಸ್ಮರಿಸಬಹುದು. 10 ಕಂಪನಿಗಳಿಂದ ಒಟ್ಟು 231.66 ಕೋಟಿ ರು ವಸೂಲಿ ಮಾಡಲು ನೋಟಿಸ್ ನೀಡಲಾಗಿದೆ.
ಕೆಎಂಸಿ ಕಾಯ್ದೆಯ ಸೆಕ್ಷನ್ 14, ನಿಯಮ 26 ಹಾಗೂ 27ರ ಪ್ರಕಾರ ಕಟ್ಟಡಗಳ ಮಾಲೀಕರಿಗೆ ನೋಟಿಸ್ ನೀಡಲಾಗುತ್ತಿದೆ. ಬಳಿಕ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications