ಬೆಂಗಳೂರು ಉತ್ತರ ಕ್ಷೇತ್ರ ಫಲಿತಾಂಶದ ಬಗ್ಗೆ ಸಿಎಂಗೆ ಸಿಕ್ಕಿದೆ ನಿಖರ ಮಾಹಿತಿ
Recommended Video
ಬೆಂಗಳೂರು, ಮೇ 11: ಬೆಂಗಳೂರು ಉತ್ತರ ಕ್ಷೇತ್ರ ಚುನಾವಣೆ ಫಲಿತಾಂಶದ ಬಗ್ಗೆ ಸಿಎಂ ಅವರಿಗೆ ನಿಖರ ಮಾಹಿತಿ ಸಿಕ್ಕಿದೆಯಂತೆ. ಹೀಗೆಂದು ಅವರೇ ಸಚಿವ ಸಂಪುಟ ಸಭೆಯಲ್ಲಿ ಹೇಳಿದ್ದಾರೆ.
ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಸದಾನಂದ ಗೌಡ ವಿರುದ್ಧ ಕೃಷ್ಣಬೈರೇಗೌಡ ಅವರ ಗೆಲುವು ಬಹುತೇಕ ಪಕ್ಕಾ ಆಗಿದೆಯೆಂಬ ಮಾಹಿತಿಯನ್ನು ಕುಮಾರಸ್ವಾಮಿ ಅವರು ಸಂಪುಟ ಸಭೆಯಲ್ಲಿ ಹೇಳಿದ್ದಾರೆ, ಇದಕ್ಕೆ ಕೃಷ್ಣ ಬೈರೇಗೌಡ ಅವರು ಸಹ ಧನ್ಯವಾದ ಅರ್ಪಿಸಿದ್ದಾರೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಆದ್ದದ್ದಿಷ್ಟು, ಮೊನ್ನೆ ನಡೆದ ಸಂಪುಟ ಸಭೆಯಲ್ಲಿ ಮೊದಲಿಗೆ ಕೃಷ್ಣಬೈರೇಗೌಡ ಅವರು ಪ್ರಸ್ತಾವಿಕವಾಗಿ ಮಾತನಾಡುತ್ತಿದ್ದರು, ಈ ಸಂದರ್ಭದಲ್ಲಿ ಮಧ್ಯೆ ಪ್ರವೇಶಿಸಿದ ಕುಮಾರಸ್ವಾಮಿ, 'ಕೃಷ್ಣಬೈರೇಗೌಡ ಅವರಿಗೆ ಶುಭಾಷಯಗಳು' ಎಂದು ಹೇಳಿದ್ದಾರೆ. ಶುಭಾಶಯಕ್ಕೆ ಅವಾಕ್ಕಾದ ಸಚಿವರು, ಶುಭಾಶಯ ಕೋರಿದ್ದಕ್ಕೆ ಕಾರಣವೇನೆಂದು ಗೊಂದಲಕ್ಕೆ ಒಳಗಾಗಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, 'ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕೃಷ್ಣಬೈರೇಗೌಡ ಅವರ ಗೆಲುವು ಖಾಯಂ, ಈ ಬಗ್ಗೆ ನನಗೆ ನಿಖರ ಮಾಹಿತಿ ದೊರಕಿದೆ' ಎಂದು ಹೇಳಿದ್ದಾರೆ. ಆ ನಂತರ ಎಲ್ಲ ಸಚಿವರೂ ಕೃಷ್ಣಬೈರೇಗೌಡ ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

ಸದಾನಂದಗೌಡ vs ಕೃಷ್ಣಬೈರೇಗೌಡ
ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಬಿಜೆಪಿಯ ಸದಾನಂದಗೌಡ ಮತ್ತು ಜೆಡಿಎಸ್ ಬೆಂಬಲಿತ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಬೈರೇಗೌಡ ಅವರ ನಡುವೆ ನಿಕಟ ಸ್ಪರ್ಧೆ ಇದೆ. ಸಿಎಂ ಅವರು ಸಚಿವ ಸಂಪುಟ ಸಭೆಯಲ್ಲಿ ನುಡಿದ ಭವಿಷ್ಯಕ್ಕೆ ಗುಪ್ತಚರ ಇಲಾಖೆಯ ವರದಿಯೇ ಕಾರಣ ಎನ್ನಲಾಗುತ್ತಿದೆ.

ಸದಾನಂದಗೌಡ ವಿರುದ್ಧ ಆಡಳಿತವಿರೋಧಿ ಅಲೆ
ಸದಾನಂದಗೌಡ ಅವರು ಎರಡು ಬಾರಿ ಇದೇ ಕ್ಷೇತ್ರದಿಂದ ಗೆಲುವು ಸಾಧಿಸಿ ಈ ಬಾರಿ ಕೇಂದ್ರ ಮಂತ್ರಿ ಸಹ ಆಗಿದ್ದಾರೆ, ಈ ನಡುವೆ ಕ್ಷೇತ್ರದಲ್ಲಿ ಅವರ ವಿರುದ್ಧ ಆಡಳಿತ ವಿರೋಧಿ ಅಲೆ ಕೆಲಸ ಮಾಡಿದೆ ಎನ್ನಲಾಗಿದೆ. ಸದಾನಂದಗೌಡ ಅವರ ವಿರುದ್ಧದ ಅಲೆಯೇ ಕೃಷ್ಣಬೈರೇಗೌಡ ಅವರಿಗೆ ವರವಾಗಿ ಪರಿಣಮಿಸಿ ಅವರ ಹಾದಿ ಸುಗಮಗೊಳಿಸಿದೆ ಎಂದು ಮಾತುಗಳು ಕೇಳಿಬರುತ್ತಿವೆ.

ಬೆಂ.ಉತ್ತರ ಕ್ಷೇತ್ರದಿಂದ ದೇವೇಗೌಡ ಸ್ಪರ್ಧಿಸಬೇಕಿತ್ತು
ದೇವೇಗೌಡ ಅವರು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವ ಉಮೇದು ಹೊಂದಿದ್ದರು, ಆದರೆ ಆ ನಂತರ ನಡೆದ ರಾಜಕೀಯ ಲೆಕ್ಕಾಚಾರದಿಂದಾಗಿ ಹೆಚ್ಚು ಸುರಕ್ಷಿತವಾದ ತುಮಕೂರನ್ನು ಆಯ್ದುಕೊಂಡರು. ಅಲ್ಲಿ ಅವರು ಬಿಜೆಪಿಯ ಜಿ.ಎಸ್.ಬಸವರಾಜು ಅವರ ವಿರುದ್ಧ ಸ್ಪರ್ಧಿಸಿದ್ದಾರೆ.

ಎಲ್ಲ ಕ್ಷೇತ್ರಗಳ ಗುಪ್ತಚರ ವರದಿ?
ಕುಮಾರಸ್ವಾಮಿ ಅವರಿಗೆ ಬಹುತೇಕ ಎಲ್ಲ ಕ್ಷೇತ್ರ ಫಲಿತಾಂಶದ ಬಗ್ಗೆ ಗುಪ್ತಚರ ಇಲಾಖೆ ವರದಿಗಳು ಕೈಸೇರಿವೆ ಎಂಬ ಸುದ್ದಿ ಇದೆ. ಮಂಡ್ಯದಲ್ಲಿ ಭಾರಿ ನಿಕಟ ಪೈಪೋಟಿ ಏರ್ಪಟ್ಟಿದ್ದು, ಸುಮಲತಾ ಅವರ ಕೈ ಮೇಲಾಗುವ ಬಗ್ಗೆಯೂ ಗುಪ್ತಚರ ಇಲಾಖೆ ವರದಿ ಬಂದಿದೆ ಎನ್ನಲಾಗಿದೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications