ಚಿತ್ರಕಲಾ ಪರಿಷತ್ತಿನಲ್ಲಿ ಅಂತಾರಾಷ್ಟ್ರೀಯ ಕಲಾವಿದರ ಶಿಬಿರ
ಬೆಂಗಳೂರು, ಜನವರಿ 09: ಹೊರರಾಷ್ಟ್ರಗಳಲ್ಲಿರುವ ನೂತನ ಕಲಾ ಮಾಧ್ಯಮಗಳ ಬಳಕೆಯನ್ನು ಅರಿಯುವುದು ಹಾಗೂ ಪ್ರಚಲಿತದಲ್ಲಿ ಇಲ್ಲದ ಕಲೆಗಳನ್ನು ಬೆಳಕಿಗೆ ತರುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಕರ್ನಾಟಕ ಚಿತ್ರಕಲಾ ಪರಿಷತ್ತು ಜನವರಿ 17 ರಿಂದ25 ರವರೆಗೆ ಅಂತಾರಾಷ್ಟ್ರೀಯ ಕಲಾವಿದರ ಶಿಬಿರವನ್ನು ಹಮ್ಮಿಕೊಂಡಿದೆ.
ಪ್ರೊ. ಎಂ.ಎಸ್. ನಂಜುಂಡರಾವ್ ಅವರ ಅವಧಿಯಲ್ಲಿ ಸುಮಾರು 30 ವರ್ಷಗಳ ಹಿಂದೆ ಸಾರ್ಕ್ ದೇಶಗಳ ಕಲಾವಿದರ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಅದಾದ ಬಳಿಕ ಇದೇ ಮೊದಲ ಬಾರಿಗೆ ದೊಡ್ಡ ಮಟ್ಟದ ಕಲಾವಿದರ ಶಿಬಿರ ನಡೆಸಲಾಗುತ್ತಿದೆ.
50 ಕಲಾವಿದರ ಸಮಾಗಮ: ಅಮೆರಿಕಾ, ಮಾರಿಷಿಯಸ್, ವಿಯಟ್ನಾಂ, ಶ್ರೀಲಂಕಾ ಸೇರಿದಂತೆ ಏಳು ರಾಷ್ಟ್ರಗಳಿಂದ 10 ಖ್ಯಾತ ಕಲಾವಿದ ಉಪನ್ಯಾಸಕರು, ಚಿತ್ರಕಲಾ ಪರಿಷತ್ತಿನ ಸುಮಾರು 32 ಮಂದಿ ಸೇರಿದಂತೆ ಒಟ್ಟಾರೆ 50 ಕ್ಕೂ ಹೆಚ್ಚು ಕಲಾವಿದರು ಶಿಬಿರದಲ್ಲಿ ಭಾಗವಹಿಸಲಿದ್ದಾರೆ.

ಶಿಬಿರದಲ್ಲಿ ನಡೆಯಲಿರುವ ಚಟುವಟಿಕೆಗಳು: ನಿರಂತರ ಒಂಭತ್ತು ದಿನಗಳ ಶಿಬಿರದಲ್ಲಿ ಕಲಾವಿದರು ಪ್ರತಿದಿನ ಬೆಳಗ್ಗೆ ಕಲಾಗ್ಯಾಲರಿ, ಸ್ಟುಡಿಯೋಗಳಲ್ಲಿ ವೈವಿಧ್ಯಮಯ ಚಿತ್ರಗಳನ್ನು ಬಿಡಿಸುವ ಕಾರ್ಯದಲ್ಲಿ ತೊಡಗುವರು. ಮಧ್ಯಾಹ್ನ 3 ರಿಂದ ಸಂಜೆ 5 ರವರೆಗೆ ವಿದ್ಯಾರ್ಥಿಮತ್ತು ಸಾರ್ವಜನಿಕರೊಂದಿಗೆ ಮುಕ್ತ ಸಂವಾದ ನಡೆಸಲಿದ್ದಾರೆ. ಇದಲ್ಲದೆ ಶಿಬಿರದ ಎರಡು ದಿನ ಬೇರೆ ಬೇರೆ ರಾಷ್ಟ್ರಗಳಲ್ಲಿ ಪ್ರಷಲಿತದಲ್ಲಿರುವ ಹೊಸತನದ ಕಲಾಮಾಧ್ಯಮ ಮತ್ತು ತಂತ್ರಜ್ಞಾನದ ಬಗ್ಗೆ ಪ್ರಾತ್ಯಕ್ಷಿಕೆ ನಡೆಯಲಿದೆ.
ಸರ್ಕಾರದಿಂದ 50 ಲಕ್ಷ ಬಿಡುಗಡೆ: ಶಿಬಿರಕ್ಕೆ ಬರುವ ಅನ್ಯ ರಾಷ್ಟ್ರಗಳ ಕಲಾವಿದರಿಗೆ ವಿಮಾನ ಪ್ರಯಾಣ, ಅವರಿಗೆ ಸಂಗಲು ವ್ಯವಸ್ಥೆ, ಶಿಬಿರದ ವೇಳೆ ಬೇಲೂರು-ಹಳೆಬೀಡು ಶ್ರವಣಬೆಳಗೊಳಕ್ಕೆ ಪ್ರವಾಸ ಕರೆದೊಯ್ದು ಅಲ್ಲಿನ ಶಿಲ್ಪಕಲಾ ಸಂಪತ್ತನ್ನು ಕಲಾವಿದರಿಗೆ ಪರಿಚಯಿಸುವುಉದ ಇತ್ಯಾದಿಗಳ ವೆಚ್ಚಕ್ಕಾಗಿ ಸರ್ಕಾರ 50 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದೆ.
-
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು











Click it and Unblock the Notifications