ಹೆಣ್ಣು ಮಕ್ಕಳ ರಕ್ಷಣೆಗಾಗಿ ಬೆಂಗಳೂರಿನಲ್ಲಿ ಜಾಗೃತಿ
ಬೆಂಗಳೂರು, ಅ. 11 : ಹೆಣ್ಣು ಮಕ್ಕಳ ಸಬಲೀಕರಣ, ಹಾಗು ಹೆಣ್ಣುಮಗುವಿನ ಮೇಲೆ ನಡೆಯುತ್ತಿರುವ ಹಿಂಸೆಗೆ ಅಂತ್ಯ ಹಾಡುವ ಉದ್ದೇಶದೊಂದಿಗೆ ಗೋಡೆಗೆ ಚಿತ್ರ ಬಿಡಿಸುವ ವಿಶೇಷ ಕಾರ್ಯಕ್ರಮವನ್ನು ಹೆಣ್ಣು ಮಗುವಿನ ಅಂತಾರಾಷ್ಟೀಯ ದಿನವಾದ ಅ.11, ಶನಿವಾರ ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಈ ವಿಶೇಷ ದಿನವನ್ನು ಮೂರನೇ ಬಾರಿಗೆ ಪ್ರಪಂಚದಾದ್ಯಂತ ಆಚರಿಸಲಾಗುತ್ತಿದೆ.
ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸ ಸಿಗಬೇಕೆಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೋರಾಟ ನಡೆಸಿರುವ ಪಾಕಿಸ್ತಾನ ಮಲಾಲಾ ಮತ್ತು ಮಕ್ಕಳ ಹಕ್ಕಿಗಾಗಿ ನಿರಂತರ ಹೋರಾಟ ನಡೆಸುತ್ತಿರುವ ಭಾರತದ ಕೈಲಾಶ್ ಸತ್ಯಾರ್ಥಿ ಅವರಿಗೆ ಪ್ರತಿಷ್ಠಿತ ನೊಬೆಲ್ ಶಾಂತಿ ಪುರಸ್ಕಾರ ಬಂದಿರುವ ಹೊತ್ತಿನಲ್ಲಿ ಹೆಣ್ಣು ಮಕ್ಕಳ ಅಂತಾರಾಷ್ಟ್ರೀಯ ದಿನ ಆಚರಿಸುತ್ತಿರುವುದಕ್ಕೆ ವಿಶೇಷ ಕಳೆ ಬಂದಿತ್ತು. [ಮಲಾಲ, ಸತ್ಯಾರ್ಥಿಗೆ ನೊಬೆಲ್]

ಭಾರತದಲ್ಲಿ ಹೆಣ್ಣು ಮಕ್ಕಳು ಇಂದಿಗೂ ತಮ್ಮ ಮೂಲಭೂತ ಹಕ್ಕುಗಳಿಂದ ವಂಚಿತರಾಗಿದ್ದಾರೆ. ಈ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ರ್ಯಾಫಲ್ಸ್ ಸಂಸ್ಥೆಯ ವಿದ್ಯಾರ್ಥಿಗಳು ಹಾಗು ಕ್ರೈ(CRY) ಸಂಸ್ಥೆಯ ಸ್ವಯಂ ಸೇವಕರು ಬೆಂಗಳೂರಿನ ಹೊಸೂರು ರಸ್ತೆಯ ಬಾಲ್ಡ್ವಿನ್ ಶಾಲೆ ಬಳಿಯ ರಸ್ತೆಯ ಅಕ್ಕಪಕ್ಕದ ಗೋಡೆಗಳ ಮೇಲೆ ಚಿತ್ರ ಬಿಡಿಸಿದರು. ಈ ಚಿತ್ರದ ಮೂಲಕ ದೇಶದ ಪ್ರತೀ ಹೆಣ್ಣು ಮಗುವಿಗೂ ಸುಭದ್ರ, ಆರೋಗ್ಯಕರ ಹಾಗು ಸಂತೋಷದಾಯಕ ಬಾಲ್ಯ ಸಿಗಬೇಕು ಎಂಬ ಸಂದೇಶವನ್ನು ಸಾರಿದರು.
ಈ ಸಂದರ್ಭದಲ್ಲಿ ಮಾತನಾಡಿದ CRY ಸಂಸ್ಥೆಯ ದಕ್ಷಿಣ ವಿಭಾಗದ ಪ್ರಾದೇಶಿಕ ನಿರ್ದೇಶಕಿ ಸುಮಾ ರವಿ, ಅಕ್ಟೋಬರ್ 11ರಂದು ನಾವೆಲ್ಲರೂ ಒಗ್ಗೂಡಿ ದೇಶದ ಪ್ರತೀ ಹೆಣ್ಣು ಮಗೂ ಆರೋಗ್ಯಪೂರ್ಣ ಬದುಕು ನಡೆಸಲು ಸಹಾಯವಾಗುವ ಎಲ್ಲಾ ಬಗೆಯ ಪ್ರಯತ್ನವನ್ನು ಮಾಡಬೇಕು. ಈ ದಿಸೆಯಲ್ಲಿ ನಮ್ಮೊಟ್ಟಿಗೆ ರ್ಯಾಫಲ್ಸ್ ಮಿಲೇನಿಯಂ ಇಂಟರ್ನ್ಯಾಷನಲ್ ಸಂಸ್ಥೆ ಕೈ ಜೋಡಿಸಿರುವುದು ಸಂತಸದ ಸಂಗತಿ ಎಂದು ತಿಳಿಸಿದರು.

ನಂತರ ಮಾತನಾಡಿದ ರ್ಯಾಫಲ್ಸ್ ಮಿಲೇನಿಯಮ್ ಇಂಟರ್ನ್ಯಾಷನಲ್ ಸಂಸ್ಥೆಯ ನಿರ್ದೇಶಕ ಡಾರೆನ್ ಕಾಂಗ್ ಮಾತನಾಡಿ, ಕಲೆ ಹಾಗು ವಿನ್ಯಾಸವನ್ನು ಸಾಮಾಜಿಕ ಜಾಗೃತಿ ಮೂಲಕ ಬದಲಾವಣೆಗೆ ಬಳಸಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ. ಈ ರೀತಿಯ ಪ್ರಯತ್ನಗಳು ಸಾಮಾಜಿಕ ಕಾಳಜಿಯುಳ್ಳ ವಿನ್ಯಾಸಕರನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಲು ಸಹಕರಿಸುತ್ತೇವೆ ಎಂದರು.
ವಿಶ್ವಸಂಸ್ಥೆಯ ಆಶಯದಂತೆ 2011ರಿಂದ ಹೆಣ್ಣು ಮಗುವಿನ ಅಂತಾರಾಷ್ಟ್ರೀಯ ದಿನವನ್ನು ಆಚರಿಸಲಾಗುತ್ತಿದೆ. 2012ರಲ್ಲಿ ಬಾಲ್ಯ ವಿವಾಹ ಹಾಗು 2013ರಲ್ಲಿ ಹೆಣ್ಣು ಮಕ್ಕಳ ಶಿಕ್ಷಣದ ಕುರಿತಂತೆ ಇದೇ ರೀತಿ ಸಂಸ್ಥೆಯಿಂದ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ದಿವ್ಯ - 77605 98121
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications