ಬಿಜೆಪಿ ಕಚೇರಿಯಲ್ಲಿ ಯೋಗದ ಕಸರತ್ತು ನಡೆಸಿದ ಯಡಿಯೂರಪ್ಪ
Recommended Video

ಬೆಂಗಳೂರು, ಜೂನ್ 21: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ವಿವಿಧ ಮುಖಂಡರು ರಾಜ್ಯ ಬಿಜೆಪಿ ಕಚೇರಿಯಲ್ಲಿ ನಾಲ್ಕನೇ ವಿಶ್ವ ಯೋಗ ದಿನಾಚರಣೆ ಆಚರಿಸಿದರು.
ಬಿಜೆಪಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಭಾರತಿ ಶೆಟ್ಟಿ, ಮಂಜುಳಾ ಸೇರಿದಂತೆ ಪಕ್ಷದ ಹಲವು ಮುಖಂಡರು, ಸದಸ್ಯರು ಭಾಗಿಯಾಗಿದ್ದರು.
ಪಕ್ಷದ ಹಿರಿಯ ನಾಯಕರು ಮತ್ತು ಕಿರಿಯರು ಜತೆಗೂಡಿ ಸೂರ್ಯನಮಸ್ಕಾರ, ಪ್ರಾಣಾಯಾಮ ಸೇರಿದಂತೆ ಯೋಗಾಸನದ ವಿವಿಧ ಭಂಗಿಗಳನ್ನು ಪ್ರದರ್ಶಿಸುವ ಮೂಲಕ ನಾಲ್ಕನೇ ಯೋಗ ದಿನಾಚರಣೆಯನ್ನು ಆಚರಿಸಿದರು.

ಯುವಕರು ನಾಚುವಂತೆ ಹಿರಿಯರು ಅನೇಕ ಕಷ್ಟಕರ ಯೋಗದ ಪಟ್ಟುಗಳನ್ನು ಸಲೀಸಾಗಿ ನಿಭಾಯಿಸಿ ಗಮನ ಸೆಳೆದರು. ಇನ್ನು ಕೆಲವರಿಗೆ ವಯಸ್ಸಿನ ಕಾರಣ ದೇಹ ಸಹಕರಿಸದಿದ್ದರೂ, ಅದರಲ್ಲಿಯೂ ಕಸರತ್ತು ನಡೆಸಿ ಯುವಜನರಿಗೆ ಸ್ಫೂರ್ತಿ ನೀಡಿದರು.
ಯೋಗ ಪ್ರದರ್ಶನದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಯಡಿಯೂರಪ್ಪ, ಸ್ವಾಮಿ ವಿವೇಕಾನಂದರು ಹೇಳಿದಂತೆ ಯೋಗ ಮನಸ್ಸನ್ನು ಶಕ್ತಿಯುತ ಮತ್ತು ಶಿಸ್ತುಬದ್ಧಗೊಳಿಸುತ್ತದೆ.
ಯೋಗ ದೈಹಿಕ ವ್ಯಾಯಾಮ ಮಾತ್ರವಲ್ಲ, ಅದು ಶರೀರ, ಬುದ್ಧಿ, ಮನಸ್ಸುಗಳಲ್ಲಿ ಸಮತೋಲನ ಸಾಧಿಸುವ ಜೀವನ ವಿಧಾನವಾಗಿದೆ. ನಮ್ಮಲ್ಲಿನ ಶಕ್ತಿಯನ್ನು ಕಂಡುಕೊಳ್ಳುವುದೇ ಯೋಗ. ಪುರಾತನ ಯೋಗ ಪದ್ಧತಿ ನಮ್ಮ ದೇಶದ ಹೆಮ್ಮೆ ಎಂದರು.

ದೇಹವು ದೇವಸ್ಥಾನವಿದ್ದಂತೆ. ಅದನ್ನು ಶುದ್ದಿಯಾಗಿಟ್ಟುಕೊಳ್ಳುವುದೇ ಯೋಗ. ಯೋಗ ಇಂದು ಜಾಗತಿಕ ಮನ್ನಣೆ ಪಡೆದಿದೆ. ಜೂನ್ 21ಅನ್ನು ಅಂತರರಾಷ್ಟ್ರೀಯ ಯೋಗ ದಿನ ಎಂದು ವಿಶ್ವಸಂಸ್ಥೆ ಘೋಷಿಸಿದೆ. ಇದರ ಯಶಸ್ಸು ನರೇಂದ್ರ ಮೋದಿ ಅವರಿಗೆ ಸಲ್ಲಬೇಕು.
ಯೋಗ ಶಿಕ್ಷಣವನ್ನು ನೀಡುವ ಮೂಲಕ ಮಕ್ಕಳನ್ನು ಆರೋಗ್ಯವಂತರನ್ನಾಗಿ ಮಾಡುವ ಅಗತ್ಯವಿದೆ. ಎಲ್ಲರೂ ದೈಹಿಕ ಮತ್ತು ಮಾನಸಿಕ ಸದೃಢತೆ ಬೆಳೆಸಿಕೊಳ್ಳಬೇಕು. ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗಬೇಕು.
Celebrated International Yoga Day at Malleshwaram, Yoga is a way to have a divine lifestyle and also strengthen mind body & soul. I also take the opportunity to thank Shri Narendra Modi for his commendable efforts in taking yoga to the global platform. pic.twitter.com/evskHB08dh
— B.S. Yeddyurappa (@BSYBJP) 21 June 2018
ಯೋಗಾಸನವು ಯೋಗ ದಿನಾಚರಣೆ ದಿನಗೆ ಮಾತ್ರ ಸೀಮಿತವಾಗಬಾರದು. ಯೋಗ ನಮ್ಮ ಬದುಕಿನ ದೈನಂದಿನ ಕ್ರಿಯೆ, ಆಚರಣೆಯ ಅವಿಭಾಜ್ಯ ಅಂಗವಾಗಬೇಕು. ಪ್ರತಿದಿನವು ಯೋಗ ದಿನವಾಗಿರಬೇಕು ಎಂದು ಹೇಳಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications