ಬೆಂಗಳೂರಿನಲ್ಲೇ ತಯಾರಾಗಲಿವೆ ಐಫೋನ್: ಯಾವಾಗಿಂದ? ಎಷ್ಟು ಉದ್ಯೋಗ ಸೃಷ್ಟಿ? ಘಟಕವೆಲ್ಲಿ? ಮಾಹಿತಿ, ವಿವರ
ಬೆಂಗಳೂರು, ಜೂನ್ 06: ಆಪಲ್ ಐಫೋನ್ ತಯಾರಕ ಕಂಪನಿಯಾದ ಫಾಕ್ಸ್ಕಾನ್ ಏಪ್ರಿಲ್ 2024 ರ ವೇಳೆಗೆ ಬೆಂಗಳೂರು ಬಳಿಯ ದೇವನಹಳ್ಳಿ ಸ್ಥಾವರದಲ್ಲಿ ಐಫೋನ್ ಘಟಕಗಳನ್ನು ಪ್ರಾರಂಭಿಸಲು ಯೋಜಿಸಿದೆ. ಕರ್ನಾಟಕ ಸರ್ಕಾರವು ಈ ವರ್ಷ ಜುಲೈ 1 ರೊಳಗೆ ಕಂಪನಿಗೆ ಅಗತ್ಯವಾದ ಭೂಮಿಯನ್ನು ಹಸ್ತಾಂತರಿಸಲು ಸಹ ಸಿದ್ಧವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಮಾಹಿತಿ ನೀಡಿದ್ದಾರೆ.
ಗುರುವಾರ ಫಾಕ್ಸ್ಕಾನ್ ಪ್ರತಿನಿಧಿಗಳೊಂದಿಗಿನ ಸಭೆಯ ನಂತರ ಕರ್ನಾಟಕದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರು ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ. ರಾಜ್ಯ ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಉಪಸ್ಥಿತರಿದ್ದರು.

ಇದರೊಂದಿಗೆ, ಹೊಸ ಸರ್ಕಾರವು 50,000 ಉದ್ಯೋಗಗಳನ್ನು ಸೃಷ್ಟಿಸುವ ನಿರೀಕ್ಷೆಯ ₹ 13,600 ಕೋಟಿ ಯೋಜನೆಯ ಪ್ರಕ್ರಿಯೆಯನ್ನು ವೇಗಗೊಳಿಸಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
'ದೇವನಹಳ್ಳಿಯ ಐಟಿಐಆರ್ (ಮಾಹಿತಿ ತಂತ್ರಜ್ಞಾನ ಹೂಡಿಕೆ ಪ್ರದೇಶ) ನಲ್ಲಿ ಗುರುತಿಸಲಾದ 300 ಎಕರೆ ಭೂಮಿಯನ್ನು ಜುಲೈ 1, 2023 ರೊಳಗೆ ಹಸ್ತಾಂತರಿಸಲಾಗುವುದು. ಇದರೊಂದಿಗೆ, ಸರ್ಕಾರವು ದಿನಕ್ಕೆ 5 ಮಿಲಿಯನ್ ಲೀಟರ್ (ಎಂಎಲ್ಡಿ) ನೀರು, ಗುಣಮಟ್ಟದ ವಿದ್ಯುತ್ ಪೂರೈಕೆಯನ್ನು ಒದಗಿಸುವುದನ್ನು ಖಚಿತಪಡಿಸುತ್ತದೆ. ರಸ್ತೆ ಸಂಪರ್ಕ ಮತ್ತು ಇತರ ಮೂಲಸೌಕರ್ಯ ಸೌಲಭ್ಯಗಳು ಇಲ್ಲಿ ಇರಲಿದೆ' ಎಂಬಿ ಪಾಟೀಲ್ ಹೇಳಿದರು.

'ಕಂಪನಿಯು ಉದ್ಯೋಗಿಗಳಿಂದ ಬಯಸುತ್ತಿರುವ ಕೌಶಲ್ಯಗಳ ವಿವರಗಳನ್ನು ಒದಗಿಸುವಂತೆ ಕೇಳಲಾಗಿದೆ. ಅದರಂತೆ ಅರ್ಹ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕ್ರಮಕೈಗೊಳ್ಳಲಾಗುವುದು' ಎಂದೂ ಅವರು ತಿಳಿಸಿದರು.
ತೈವಾನ್ ಮೂಲದ ಜಾಗತಿಕ ಕಂಪನಿಯು ಈಗಾಗಲೇ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿಗೆ ( ಕೆಐಎಡಿಬಿ ) ಭೂಮಿಗೆ ( ₹ 90 ಕೋಟಿ ) ವೆಚ್ಚದ ಶೇಕಡಾ 30 ರಷ್ಟು ಪಾವತಿಸಿದೆ ಎಂದು ಪ್ರಕಟಣೆ ತಿಳಿಸಿದೆ.
ಇದು ಯೋಜನೆಯನ್ನು ಮೂರು ಹಂತಗಳಲ್ಲಿ ಪೂರ್ಣಗೊಳಿಸುವ ಗುರಿಯನ್ನು ಹೊಂದಿದೆ ಮತ್ತು ಎಲ್ಲಾ ಮೂರು ಹಂತಗಳನ್ನು ಪೂರ್ಣಗೊಳಿಸಿದ ನಂತರ ಸ್ಥಾವರದಿಂದ ವಾರ್ಷಿಕವಾಗಿ 20 ಮಿಲಿಯನ್ ಘಟಕಗಳನ್ನು ( 2 ಕೋಟಿ ಯುನಿಟ್ ) ಉತ್ಪಾದಿಸುವ ಗುರಿಯನ್ನು ಹೊಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
-
ಮಾರ್ಚ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ












Click it and Unblock the Notifications