ಕ್ರಿಕೆಟ್ ಬೆಟ್ಟಿಂಗ್ : ಶ್ರೀರಾಮಪುರದಲ್ಲಿ ಸುರೇಶ್ ಬಂಧನ
ಬೆಂಗಳೂರು, ಮೇ 28 : ದೆಹಲಿಯ ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ಮೇ 27ರಂದು ನಡೆದ, ಐಪಿಎಲ್ 9ರ ಕೊನೆಯ ಪ್ಲೇಆಫ್ ಪಂದ್ಯಕ್ಕೆ ಸಂಬಂಧಿಸಿದಂತೆ ಕ್ರಿಕೆಟ್ ಜೂಜಾಟದಲ್ಲಿ ತೊಡಗಿದ್ದ ಶ್ರೀರಾಮಪುರದ ವ್ಯಕ್ತಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಗುಜರಾತ್ ಲಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಮೇ 27ರಂದು ನಡೆಯುತ್ತಿದ್ದ ಪಂದ್ಯದ ಸೋಲು ಗೆಲುವಿನ ಬಗ್ಗೆ ಫೋನ್ ಮುಖಾಂತರ, ಸಾರ್ವಜನಿಕರಿಂದ ಬೆಟ್ಟಿಂಗ್ ಹಣ ಕಟ್ಟಿಸಿಕೊಂಡು ಜೂಜಾಟವಾಡುತ್ತಿದ್ದ.
ಖಚಿತ ಮಾಹಿತಿಯ ಮೇರೆಗೆ ಕೇಂದ್ರ ಅಪರಾಧ ವಿಭಾಗ(ಸಿ.ಸಿ.ಬಿ), ವಿಶೇಷ ವಿಚಾರಣ ದಳದ ಎಸಿಪಿ ಮತ್ತಿತರ ಸಿಬ್ಬಂದಿಗಲು ದಾಳಿ ಮಾಡಿ, ಶ್ರೀರಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಎಲ್ಎನ್ ಪುರದಲ್ಲಿ 38 ವರ್ಷದ ಸುರೇಶ್ ಅಲಿಯಾಸ್ ಅರ್ಜುನ ಎಂಬಾತನನ್ನು ಬಂಧಿಸಿದ್ದಾರೆ. [ಹೈದರಾಬಾದ್ ತಂಡವನ್ನು ಫೈನಲ್ಗೆ ತಂದ ವಾರ್ನರ್!]

ಸುರೇಶನಿಂದ 56,400 ರು. ನಗದು, ಬೆಲೆ ಬಾಳುವ 6 ಮೊಬೈಲ್ ಫೋನ್, ಬೆಟ್ಟಿಂಗ್ ವಿವರಗಳಿರುವ ಒಂದು ಹಾಳೆ, ಸ್ಯಾಮ್ಸಂಗ್ ಎಲ್ಇಡಿ ಟಿವಿ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿಕೊಂಡಿದ್ದಾರೆ.
ಐಪಿಎಲ್ 9 ಟೂರ್ನಾಮೆಂಟಿನ ಅಂತಿಮ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೇ 29ರ ಸಂಜೆ ನಡೆಯಲಿದೆ. ಈ ಪಂದ್ಯಕ್ಕೂ ಭಾರೀ ಪ್ರಮಾಣದಲ್ಲಿ ಬೆಟ್ಟಿಂಗ್ ನಡೆಯುವ ಸಾಧ್ಯತೆಗಳಿವೆ. [ಫೈನಲ್ ಪ್ರವೇಶಿಸಿದ ಜೋಶ್ ನಲ್ಲಿ ಆರ್ ಸಿಬಿ ಹುಡ್ಗರ ಡಾನ್ಸ್]
-
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್












Click it and Unblock the Notifications