ಐಪಿಎಲ್ ಬೆಟ್ಟಿಂಗ್ ಆಪ್ ಪ್ರಕರಣ: ಸೋನು ಶ್ರೀನಿವಾಸಗೌಡ ಸೇರಿ ಹಲವು ರೀಲ್ಸ್ ಸ್ಟಾರ್ಗಳ ವಿಚಾರಣೆ
ಬೆಂಗಳೂರು ಏಪ್ರಿಲ್ 8: ರೀಲ್ಸ್ ಸ್ಟಾರ್ ಆಗಿದ್ದೇ ಆಗಿದ್ದು ಸೋನು ಶ್ರೀನಿವಾಸಗೌಡ ಮೇಲೆ ಒಂದಿಲ್ಲಾ ಒಂದು ಆರೋಪ ಕೇಳಿ ಬರುತ್ತಲೇ ಇವೆ. ಕನ್ನಡದ ಬಿಗ್ ರಿಯಾಲಿಟಿ ಶೂ ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದ ಸೋನು ಶ್ರೀನಿವಾಸಗೌಡ ಈಗ ರೀಲ್ಸ್ ಸ್ಟಾರ್ಗಳ ಪಟ್ಟಿಯಲ್ಲಿ ಮುಂಚುಣಿಯಲ್ಲಿ ಇದ್ದಾರೆ. ಇದೀಗ ಅವರಿಗೆ ಹೊಸದೊಂದು ಸಂಕಷ್ಟ ಶುರುವಾಗಿದೆ.
ಹೌದು ಬೆಟ್ಟಿಂಗ್ ಆಪ್ ಅನುಮತಿ ಇಲ್ಲದೆ ಪ್ರಮೋಟ್ ಮಾಡಿದ ಆರೋಪದ ಮೇಲೆ ಸೋನು ಶ್ರೀನಿವಾಸಗೌಡ ಅವರ ವಿಚಾರಣೆಗೆ ಪೊಲೀಸರು ಮುಂದಾಗಿದ್ದಾರೆ. ಸೋನು ಮಾತ್ರವಲ್ಲ ಬೆಟ್ಟಿಂಗ್ ಆಪ್ ಪ್ರಮೋಟ್ ವಿಚಾರದಲ್ಲಿ 100ಕ್ಕೂ ಹೆಚ್ಚು ರೀಲ್ಸ್ ಸ್ಟಾರ್ಗಳನ್ನು ಸೈಬರ್ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.

ರೀಲ್ಸ್ ಸ್ಟಾರ್ಗಳು ಅನುಮತಿ ಇಲ್ಲದೆ ತಮ್ಮ ಇನ್ಸ್ಟಾಗ್ರಾಮ್ ಪೇಜ್ನಲ್ಲಿ ಐಪಿಎಲ್ ಬೆಟ್ಟಿಂಗ್ ಸಂಬಂಧ ಜಾಹೀರಾತು ಬಿತ್ತರಿಸಿದ್ದಾರೆ. ಇಂತಹವರನ್ನು ಪಟ್ಟಿ ಮಾಡಿ ವಕೀಲರೊಬ್ಬರು ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ. ರೀಲ್ಸ್ ಸ್ಟಾರ್ಗಳ ಪೇಜ್ನಲ್ಲಿ ಬಿತ್ತರಿಸಲಾದ ಜಾಹೀರಾತುಗಳು ಜನರಿಗೆ ವಂಚಿಸುವ ಜಾಹೀರಾತುಗಳು ಆಗಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹೀಗಾಗಿ ಸೈಬರ್ ಪೊಲೀಸರು ಪಟ್ಟಿ ಮಾಡಿ ನೋಟೀಸ್ ಜಾರಿ ಮಾಡಿ ರೀಲ್ಸ್ ಸ್ಟಾರ್ಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಸೈಬರ್ ಪೊಲೀಸರು ನೋಟೀಸ್ ಜಾರಿ ಮಾಡುತ್ತಿದ್ದಂತೆ ರೀಲ್ಸ್ ಸ್ಟಾರ್ಗಳು ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ಹಾಜರಾದವರಲ್ಲಿ ಸೋನು ಶ್ರೀನಿವಾಸಗೌಡ ಸೇರಿದಂತೆ ವರುಣ್ ಆರಾಧ್ಯ, ದಚ್ಚು, ದೀಪಕ್ಗೌಡ ಇದ್ದಾರೆ. ವಿಚಾರಣೆ ವೇಳೆ ರೀಲ್ಸ್ ಸ್ಟಾರ್ಗಳು ಸೈಬರ್ ಪೊಲೀಸರ ಮುಂದೆ ಕ್ಷಮೆ ಕೇಳಿದ್ದಾರೆ.
ಜೊತೆಗೆ ತಮಗೆ ಹಾಗೂ ಜನರಿಗೆ ಈ ಜಾಹಿರಾತಿನಿಂದ ತೊಂದರೆಯಾಗಲಿದೆ ಎಂದು ಅರಿವೇ ಇರಲಿಲ್ಲ. ಇನ್ಮುಂದೆ ಇಂತಹ ಜಾಹೀರಾತುಗಳನ್ನು ನಾವು ಪ್ರಕಟಿಸುವುದಿಲ್ಲ ಎಂದು ಹೇಳಿದ್ದಾರೆ. ತಮಗೆ ತಮ್ಮ ತಪ್ಪಿನ ಬಗ್ಗೆ ಅರಿವಾಗಿದೆ. ಇನ್ಮುಂದೆ ಇಂತಹ ತಪ್ಪು ಆಗದೇ ಇರುವಂತೆ ನಾವು ನೋಡಿಕೊಳ್ಳುತ್ತೇವೆ ಎಂದಿದ್ದಾರೆ.
ಜೊತೆಗೆ ಜಾಹೀರಾತುಗಳನ್ನೂ ಡಿಲೀಟ್ ಮಾಡುವುದಾಗಿ ಹೇಳಿಕೊಂಡಿದ್ದಾರೆ. ಅಲ್ಲದೆ ಪೊಲೀಸರು ಇಂತಹ ತಪ್ಪು ಮರುಕಳಿಸಿದರೆ ಜೈಲಿಗೆ ಕಳುಹಿಸುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆಂದು ತಿಳಿದು ಬಂದಿದೆ.

ಈ ಹಿಂದೆ ಸೋನು ಗೌಡ ರೀಲ್ಸ್ ಮಾಡಲು ಬಡ ಹುಡುಗಿಯನ್ನು ಬಳಸಿಕೊಂಡು ದುಡ್ಡು ಮಾಡುತ್ತಿದ್ದಾರೆ ಅನ್ನೋ ಆರೋಪ ಕೇಳಿ ಬಂದಿತ್ತು. ಈ ವಿಚಾರದಲ್ಲಿ ಅವರು ಜೈಲಿಗೂ ಕೂಡ ಹೋಗಿ ಬಂದಿದ್ದಾರೆ. ಇದೀಗ ಅವರ ಮೇಲೆ ಮತ್ತೊಂದು ಆರೋಪ ಕೇಳಿ ಬಂದಿದ್ದು, ಇದರಲ್ಲಿ ಪೊಲೀಸರು ಅವರಿಗೆ ವಾರ್ನಿಂಗ್ ಮಾತ್ರ ಕೊಟ್ಟಿದ್ದಾರೆ. ಆದರೆ ಮುಂದೆ ಇಂತಹ ಘಟನೆಗಳು ನಡೆದರೆ ಸೋನು ಗೌಡ ಸಂಕಷ್ಟ ಮಾತ್ರ ತಪ್ಪಿದ್ದಲ್ಲ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications