IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ
IPL Free Ticket Row: ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ಐಪಿಎಲ್ ಪಂದ್ಯಗಳಿಗೆ ಶಾಸಕರಿಗೆ ತಲಾ ಐದು ಫ್ರೀ ಟಿಕೆಟ್ ನೀಡಬೇಕು ಎಂದು ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಅವರು ವಿಧಾನಸಭೆಯಲ್ಲಿ ಚರ್ಚೆ ಮಾಡಿದ ಬೆನ್ನಲ್ಲೇ ಇದು ಕರ್ನಾಟಕದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಫೋಟೋವನ್ನು ಹಂಚಿಕೊಂಡಿರುವ ಸಂಸದ ತೇಜಸ್ವಿ ಸೂರ್ಯ ಅವರು ತೀವ್ರ ಟೀಕೆ ಮಾಡಿದ್ದಾರೆ.

ಈ ಚಿತ್ರ ಸಾವಿರಕ್ಕೂ ಹೆಚ್ಚು ಪದಗಳನ್ನು ಹೇಳುತ್ತದೆ ಎಂದು ಅವರು ವೆಂಕಟೇಶ್ ಪ್ರಸಾದ್ ಅವರು, ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ಫೋಟೋವನ್ನು ಹಂಚಿಕೊಂಡು ಹೇಳಿದ್ದಾರೆ. ಈ ಒಂದು ಚಿತ್ರ ಸಾವಿರ ಮಾತುಗಳನ್ನು ಹೇಳುತ್ತದೆ. ಇದು ನಮ್ಮ ರಾಜಕೀಯ ಸಂಸ್ಕೃತಿ ಎಷ್ಟು ಕೆಳಮಟ್ಟಕ್ಕೆ ಇಳಿದಿದೆ ಎನ್ನುವುದನ್ನು ತೋರಿಸುತ್ತದೆ. ಭಾರತಕ್ಕೆ ಹೆಮ್ಮೆ ತಂದ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಇಂದು ಒಬ್ಬ ಮುಖ್ಯಮಂತ್ರಿ ಮುಂದೆ ಕೈಮುಗಿದು ನಿಂತಿದ್ದಾರೆ ಏಕೆ ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಭಾರತಕ್ಕೆ ಹೆಮ್ಮೆ ತಂದ ರಾಷ್ಟ್ರೀಯ ನಾಯಕ ವೆಂಕಟೇಶ್ ಪ್ರಸಾದ್, ಪಾಕಿಸ್ತಾನ ವಿರುದ್ಧದ ಅವರ ಅದ್ಭುತ ಆಟ ಇಂದಿಗೂ ನಮ್ಮ ನೆನಪಿನಲ್ಲಿ ಇದೆ, ಅಂಥವರು ಇಂದು ಒಬ್ಬ ಮುಖ್ಯಮಂತ್ರಿ ಮುಂದೆ ಕೈಮುಗಿದು ನಿಂತಿದ್ದಾರೆ. ಅವರು ತಪ್ಪು ಮಾಡಿಲ್ಲ. ತಮ್ಮ ಕೆಲಸವನ್ನು ಸರಿಯಾಗಿ ಮಾಡಿದದ್ದಕ್ಕೆ ಮಾತ್ರ ಈ ರೀತಿ ಆಗಿದೆ ಎಂದು ಸಂಸದ ತೇಜಸ್ವಿ ಸೂರ್ಯ ಅವರು ಹೇಳಿದ್ದಾರೆ.
ರಾಜಕಾರಣಿಗಳ ಅಹಂಕಾರಕ್ಕೆ ಧಕ್ಕೆ ಆಗಬಹುದು ಎಂದು ಊಹಿಸದೇ ಇದ್ದದ್ದಕ್ಕೆ. ಉಚಿತ ಸೌಲಭ್ಯ, ವಿಶೇಷ ಸವಲತ್ತುಗಳಿಗೆ ತಲೆಬಾಗದೆ ಇದ್ದದ್ದಕ್ಕೆ. ಇದು ದುಃಖಕರ ಸಂಗತಿ. ದೇಶಕ್ಕೆ ಸೇವೆ ಮಾಡಿದವರು ತಲೆಬಾಗಬೇಕಾದರೆ, ಅಧಿಕಾರದಲ್ಲಿರುವವರು ಹೊಣೆಗಾರಿಕೆಗೆ ಬದಲು ವಿಶೇಷ ಹಕ್ಕು ಕೇಳುತ್ತಿದ್ದರೆ, ವ್ಯವಸ್ಥೆಯಲ್ಲಿ ಏನೋ ತಪ್ಪಾಗಿದೆ.ಇದು ಒಂದು ಘಟನೆ ಮಾತ್ರ ಅಲ್ಲ - ಇದು ದೊಡ್ಡ ಸಮಸ್ಯೆಯ ಲಕ್ಷಣ. ಅಧಿಕಾರವನ್ನು ಜವಾಬ್ದಾರಿಯಂತೆ ನೋಡದ ರಾಜಕೀಯ ಹೋಗಬೇಕು. ಅಹಂಕಾರಕ್ಕೆ ಮಣಿಯುವ ವ್ಯವಸ್ಥೆ ಬದಲಾಗಬೇಕು. ಹೊಸ ರಾಜಕೀಯ ಪೀಳಿಗೆ ಅಗತ್ಯವಾಗಿದೆ. ಅಲ್ಲದೆ ಈ ಪರಿಸ್ಥಿತಿಯಿಂದ ನಾವು ಕಳವಳಗೊಳ್ಳದಿದ್ದರೆ, ಇನ್ನೇನು ಕಳವಳಗೊಳಿಸಲು ಸಾಧ್ಯ. ಭಾರತ ಇನ್ನಷ್ಟು ಉತ್ತಮ ಸಮಾಜಕ್ಕೆ ಅರ್ಹವಾಗಿದೆ. ನಾನು ವೆಂಕಟೇಶ್ ಪ್ರಸಾದ್ ಅವರ ಜೊತೆ ಇದ್ದೇನೆ - ಲಕ್ಷಾಂತರ ಜನರೂ ಹಾಗೆಯೇ ಅವರ ಬೆಂಬಲಕ್ಕೆ ನಿಂತಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಅವರು ಅಭಿಪ್ರಾಯಪಟ್ಟಿದ್ದಾರೆ.
-
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ಮೈದಾನಕ್ಕೆ ಬರ್ತಾರಾ ಆರ್ಸಿಬಿ ಅಭಿಮಾನಿಗಳ ಹೊಸ ಕ್ರಶ್ ಬಿರ್ಲಾ ಕುಡಿ ಅನನ್ಯಾ?; ಕಾವ್ಯಾ ಮಾರನ್ ಬಗ್ಗೆ ಹೊಸ ಚರ್ಚೆ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
IPL 2026 Full Schedule: ಐಪಿಎಲ್ 2026ರ ಸಂಪೂರ್ಣ ವೇಳಾಪಟ್ಟಿ ಪ್ರಕಟ -
ಕ್ರಿಕೆಟ್ ಆಟ, ಬೆಟ್ಟಿಂಗ್ ದಂಧೆ, ಜೂಜಿನ ಮಜಾ ಇದೇ ಮಾರ್ಚ್ 28ರಿಂದ ಪ್ರಾರಂಭ: ವಿವೇಕಾನಂದ ಎಚ್.ಕೆ. ಮಹತ್ವದ ಸಂದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಶುಭ್ಮನ್ ಗಿಲ್ ಭೇಟಿಯಾದ ಅನನ್ಯಾ ಬಿರ್ಲಾ; ಆರ್ಸಿಬಿ ಹೊಸ ಮಾಲೀಕನ ಸಹೋದರಿಗೆ ಗುಜರಾತ್ ಜೆರ್ಸಿನಾ ಎಂದ ನೆಟ್ಟಿಗರು -
IPL 2026: ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ದರೆ 'ನಮ್ಮ ಮೆಟ್ರೋ' ಪ್ರಯಾಣ ಉಚಿತ -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ












Click it and Unblock the Notifications