IPL Match in Bengaluru: ಬಿಎಂಟಿಸಿ ಸೇವೆ ಅವಧಿ ವಿಸ್ತರಣೆ-ಸಮಯ, ಮಾರ್ಗಗಳ ವಿವರ ತಿಳಿಯಿರಿ
ಬೆಂಗಳೂರು, ಮೇ, 04: ಇಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ & ಗುಜರಾತ್ ಟೈಟನ್ ನಡುವೆ ಪಂದ್ಯ ಇರುವ ಹಿನ್ನೆಲೆ, ಮೆಟ್ರೋ, ಬಿಎಂಟಿಸಿ ಸೇವೆಯ ಅವಧಿ ವಿಸ್ತರಣೆ ಮಾಡಲಾಗಿದೆ. ಹಾಗಾದರೆ ಸಮಯಗಳ ವಿವರವನ್ನು ಇಲ್ಲಿ ತಿಳಿಯಿರಿ.
ಈಗಾಗಲೇ ಆಡಿರುವ 10ರಲ್ಲಿ 7 ಸೋತು, 3 ಪಂದ್ಯಗಳಲ್ಲಿ ಮಾತ್ರ ಗೆದ್ದಿರುವ ಆರ್ಟಿಸಿ ತಂಡ ಇಂದು ಗುಜರಾಜ್ ಟೈಟಾನ್ ವಿರುದ್ದ ನಡೆಯಲಿತುವ 11ನೇ ಪಂದ್ಯದಲ್ಲಿ ಗೆಲ್ಲುವ ತವಕದಲ್ಲಿದೆ. ಇನ್ನು ಗುಜರಾತ್ ಟೈಟಾನ್ಸ್, 10ರಲ್ಲಿ 6 ಸೋತು, 4 ಪಂದ್ಯಗಳಲ್ಲಿ ಮಾತ್ರ ಗೆದ್ದಿದೆ. ಇಂದಿನ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದ್ದು, ಈ ಹಿನ್ನೆಲೆ ಮೆಟ್ರೋ, ಬಿಎಂಟಿಸಿ ಸೇವೆಯ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಪಂದ್ಯ ವೀಕ್ಷಣೆಗೆ ಬರುವವರ ಅನುಕೂಲಕ್ಕೆ ತಕ್ಕಂತೆ ಬಿಎಂಟಿಸಿ ಬಸ್ ಸೇವೆಯ ಸಮಯವನ್ನು ವಿಸ್ತರಣೆ ಮಾಡಲಾಗಿದೆ. ಮತ್ತೊಂದೆಡೆ ಮೆಟ್ರೋ ಸೇವೆಯ ಅವಧಿಯನ್ನೂ ಕೂಡ ವಿಸ್ತರಣೆ ಮಾಡಲಾಗುತ್ತದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಮೇ 4, 12 ಮತ್ತು 18ರಂದು ಆಯೋಜನೆ ಆಗಿರುವ ಎಲ್ಲ ಪಂದ್ಯಗಳ ವೀಕ್ಷಣೆಗೆ ಬರುವ ಹಾಗೂ ವಾಪಸ್ ಹೋಗುವ ಎರಡು ಅವಧಿಯಲ್ಲಿ ಹೆಚ್ಚುವರಿ ಬಸ್ಗಳು ಕಾರ್ಯಾಚರಣೆ ನಡೆಸಲಿದ್ದು, ಅಂದು ಎಲ್ಲಾ ನಿಲ್ದಾಣಗಳಿಂದ ರಾತ್ರಿ 1 ಗಂಟೆವರೆಗೆ ಬಿಎಂಟಿಸಿ ಬಸ್ಗಳ ಸೇವೆ ಇರಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಎಂ.ಚಿನ್ನಸ್ವಾಮಿ ಕ್ರೀಡಾಂಗಣದಿಂದ ಕಾಡುಗೋಡಿ ಬಸ್ ನಿಲ್ದಾಣ, ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ ಮೃಗಾಲಯ, ಕೆಂಗೇರಿ ಕೆಎಚ್ಬಿ ಕ್ವಾರ್ಟರ್ಸ್, ಮಾಗಡಿ ರಸ್ತೆ, ಯಲಹಂಕ 5ನೇ ಹಂತ, ಆರ್.ಕೆ.ಹೆಗಡೆ ನಗರ, ಬಾಗಲೂರು, ಹೊಸಕೋಟೆ ಹಾಗೂ ಬನಶಂಕರಿ ನಡುವೆ ಬಸ್ಗಳು ಕಾರ್ಯಾಚರಣೆ ಮಾಡಲಿದೆ ಎಂದು ಬಿಎಂಟಿಸಿ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ಬಸ್ ಸಂಚರಿಸುವ ಮಾರ್ಗಗಳ ವಿವರ
SBS-1K -ಕಾಡುಗೋಡಿ ಬಸ್ ನಿಲ್ದಾಣ-ಎಚ್.ಎ.ಎಲ್ ರಸ್ತೆ, SBS-13K-ಕಾಡುಗೋಡಿ ಬಸ್ ನಿಲ್ದಾಣ-ಹೂಡಿ ರಸ್ತೆ, KBS-12HK-ಹೊಸಕೋಟೆ-ಟಿನ್ ಫ್ಯಾಕ್ಟರಿ, G-6-ಕೆಂಗೇರಿ ಕೆ.ಎಚ್.ಬಿ.ಕ್ವಾಟ್ರಸ್-ಎಂ.ಸಿ.ಟಿ.ಸಿ ನಾಯಂಡನಹಳ್ಳಿ,
G-7-ಜನಪ್ರಿಯ ಟೌನಷಿಪ್-ಮಾಗಡಿ ರಸ್ತೆ, G-8- ನೆಲಮಂಗಲ-ಯಶವಂತಪುರ, G-2-ಸರ್ಜಾಪುರ ಅಗರ-ದೊಮ್ಮಸಂದ್ರ ಮಾರ್ಗದಲ್ಲಿ ಬಸ್ಗಳು ಸಂಚರಿಸಲಿವೆ.
ಅಲ್ಲದೆ G-3-ಎಲೆಕ್ಟ್ರಾನಿಕ್ ಸಿಟಿ-ಹೊಸೂರು ರಸ್ತೆ, G-4-ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್-ಜಯದೇವ
ಆಸ್ಪತ್ರೆ, G-9-ಯಲಹಂಕ 5ನೇ ಹಂತ-ಹೆಬ್ಬಾಳ, G-10-ಆರ್.ಕೆ.ಹೆಗಡೆ ನಗರ-ಯಲಹಂಕ ನಾಗವಾರ, ಟ್ಯಾನರಿ ರಸ್ತೆ
G-11-ಬಾಗಲೂರು -ಹೆಣ್ಣೂರು ರಸ್ತೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಪ್ರಯಾಣಿಕರಿಗೆ ಸಿಹಿ ಸುದ್ದಿ: ಬಿಎಂಟಿಸಿ ಹೊಸ ಮಾರ್ಗಗಳ ಪರಿಚಯ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ












Click it and Unblock the Notifications