ಪೊಲೀಸ್ ಆಯುಕ್ತರ ನೇಮಕ : ಅಲೋಕ್ ಕುಮಾರ್ ಅರ್ಜಿ ವಾಪಸ್!
ಬೆಂಗಳೂರು, ಆಗಸ್ಟ್ 16 : ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರರಾವ್ ನಿರಾಳರಾಗಿದ್ದಾರೆ. ಪೊಲೀಸ್ ಆಯುಕ್ತರ ವರ್ಗಾವಣೆ ಪ್ರಶ್ನಿಸಿ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆಯಲಾಗಿದೆ.
ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿ (ಸಿಎಟಿ) ಗೆ ಸಲ್ಲಿಸಿದ್ದ ಅರ್ಜಿಯನ್ನು ಅಲೋಕ್ ಕುಮಾರ್ ವಾಪಸ್ ಪಡೆದರು. ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದ ಅಲೋಕ್ ಕುಮಾರ್ರನ್ನು 45 ದಿನದಲ್ಲಿ ವರ್ಗಾವಣೆ ಮಾಡಲಾಗಿತ್ತು.
ವರ್ಗಾವಣೆ : ಸಿಎಟಿಗೆ ಅರ್ಜಿ ಸಲ್ಲಿಸಿದ ಅಲೋಕ್ ಕುಮಾರ್
ಯಡಿಯೂರಪ್ಪ ಮುಖ್ಯಮಂತ್ರಿಯಾದ ತಕ್ಷಣ ಅಲೋಕ್ ಕುಮಾರ್ರನ್ನು ವರ್ಗಾವಣೆ ಮಾಡಿ, ಭಾಸ್ಕರರಾವ್ ಅವರನ್ನು ಬೆಂಗಳೂರು ಪೊಲೀಸ್ ಆಯುಕ್ತರಾಗಿ ನೇಮಿಸಿದ್ದರು. ಇದನ್ನು ಪ್ರಶ್ನಿಸಿ ಅಲೋಕ್ ಕುಮಾರ್ ನ್ಯಾಯಮಂಡಳಿ ಮೊರೆ ಹೋಗಿದ್ದರು.
ಬೆಂಗಳೂರು ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ವರ್ಗಾವಣೆ
ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ನ್ಯಾಯಮಂಡಳಿ ನೇಮಕಾತಿ ಆದೇಶಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು. ರಾಜ್ಯ, ಕೇಂದ್ರ ಸರ್ಕಾರ, ಭಾಸ್ಕರರಾವ್ಗೆ ನೋಟಿಸ್ ನೀಡಿ ವಿಚಾರಣೆ ಮುಂದೂಡಿತ್ತು. ಈಗ ಅಲೋಕ್ ಕುಮಾರ್ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.
ಅಲೋಕ್ ಕುಮಾರ್ ಗೆ ಚಾಲೆಂಜ್ ಹಾಕಿದ್ದ ರೇಣುಕಾಚಾರ್ಯ
ಅಲೋಕ್ ಕುಮಾರ್ರನ್ನು ವರ್ಗಾವಣೆ ಮಾಡಿದ ಬಗ್ಗೆ ಭಾರಿ ಚರ್ಚೆ ನಡೆದಿತ್ತು. ಅದರಲ್ಲೂ ಬೆಂಗಳೂರು ಪೊಲೀಸ್ ಆಯುಕ್ತರಾದ 45 ದಿನದಲ್ಲಿಯೇ ಅವರನ್ನು ವರ್ಗಾವಣೆ ಮಾಡಿದ ಬಗ್ಗೆ ಹೆಚ್ಚು ಚರ್ಚೆಗಳು ನಡೆದಿದ್ದವು.