ವರ್ಗಾವಣೆ ಪ್ರಶ್ನಿಸಿದ್ದ ಅರ್ಜಿಯನ್ನು ಹಿಂಪಡೆದ ಅಲೋಕ್ ಕುಮಾರ್
ಬೆಂಗಳೂರು, ಆಗಸ್ಟ್ 17: ಬೆಂಗಳೂರು ನಗರ ಪೊಲೀಸ್ ಆಯುಕ್ತರ ಹುದ್ದೆಯಿಂದ ವರ್ಗಾಯಿಸಿದ್ದ ಸರ್ಕಾರದ ಕ್ರಮ ಪ್ರಶ್ನಿಸಿದ್ದ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ತಮ್ಮ ಅರ್ಜಿ ಹಿಂಪಡೆದಿದ್ದಾರೆ.
ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿಯ ಮೆಟ್ಟಿಲೇರಿದ್ದರು.
ಶುಕ್ರವಾರ ಬೆಳಗ್ಗೆ ಸಿಎಟಿ ಕಲಾಪ ಪ್ರಾರಂಭವಾಗುತ್ತಿದ್ದಂತೆ ಅಲೋಕ್ ಕುಮಾರ್ ಪರ ವಕೀಲರು ಅರ್ಜಿ ಹಿಂಪಡೆಯುವುದಾಗಿ ಜ್ಞಾಪನಾ ಪತ್ರ ಸಲ್ಲಿಸಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಪೀಠ ವಿನಾಕಾರಣ ಅರ್ಜಿ ಸಲ್ಲಿಸುವುದು ಹಿಂಪಡೆಯುವುದು ಸರಿ ಅಲ್ಲ ದಂಡ ವಿಧಿಸಲಾಗುವುದು ಎಂದು ತಿಳಿಸಿತು.
ರಾಜ್ಯದಲ್ಲಿ ಎಚ್ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಬೆಂಗಳೂರು ಆಯುಕ್ತರನ್ನಾಗಿ ಅಲೋಕ್ ಕುಮಾರ್ ಅವರನ್ನು ಸರ್ಕಾರವು ಜೂನ್ 17ರಂದು ನೇಮಕ ಮಾಡಿತ್ತು.
ಸರ್ಕಾರ ಬದಲಾಗುತ್ತಿದ್ದಂತೆ ಮೂರೇ ತಿಂಗಳಿನಲ್ಲಿ ಅವರನ್ನು ಆಗಸ್ಟ್ 3ರಂದು ಕೆಎಸ್ಆರ್ಪಿ ಎಡಿಜಿಪಿಯನ್ನಾಗಿ ವರ್ಗಾಯಿಸಿ ಆದೇಶಿಸಿತ್ತು.
ವಿಚಾರಣೆ ವೇಳೆ ಪ್ರತಿಕ್ರಿಯಿಸಿದ ಅಡ್ವೊಕೇಟ್ ಪ್ರಭುಲಿಂಗ ನಾವದಗಿ, ಅರ್ಜಿದಾರರು ರಾಜ್ಯ ಸರ್ಕಾರದ ಅಧಿಕಾರಿಯಾಗಿದ್ದಾರೆ. ಆದ್ದರಿಂದ ದಂಡ ವಿಧಿಸುವ ಅಗತ್ಯವಿಲ್ಲ ಎಂದು ಪೀಠಕ್ಕೆ ಮನವಿ ಮಾಡಿದರು.
ಈ ಅಂಶ ಪರಿಗಣಿಸಿದ ನ್ಯಾಯಪೀಠ ಅರ್ಜಿ ವಜಾಗೊಳಿಸಿತು. ಅಲೋಕ್ ಕುಮಾರ್ ಅವರು ತಮ್ಮ ವರ್ಗಾವಣೆ ಪ್ರಶ್ನಿಸಿ ವರ್ಗಾವಣೆ ಆದೇಶ ರದ್ದು ಮಾಡುವಂತೆ ಸಿಎಟಿಯಲ್ಲಿ ಅರ್ಜಿ ಸಲ್ಲಿಸಿದ್ದರು. ಈಗ ಶುಕ್ರವಾರ ಅರ್ಜಿಯನ್ನು ಹಿಂಪಡೆದಿದ್ದಾರೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications