IPS; ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ರಾಜೀನಾಮೆ
ಬೆಂಗಳೂರು, ಫೆಬ್ರವರಿ 09: ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಅವರು ಕಾರ್ಯ ನಿರ್ವಹಣೆ ಮಾಡಿದ್ದರು.
ಪ್ರಸ್ತುತ ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್ ರೆಡ್ಡಿ ಅವರು 1991ನೇ ಬ್ಯಾಚ್ನ ಐಪಿಎಸ್ ಅಧಿಕಾರಿ. ಅವರು ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರು.

ಪ್ರತಾಪ್ ರೆಡ್ಡಿ ಅವರ ನಿವೃತ್ತಿಗೆ ಎರಡು ತಿಂಗಳು ಬಾಕಿ ಇತ್ತು. ಇಂತಹ ಸಂದರ್ಭದಲ್ಲಿಯೇ ಅವರು ವೈಯಕ್ತಿಕ ಕಾರಣವನ್ನು ನೀಡಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಈ ರಾಜೀನಾಮೆ ರಾಜ್ಯ ಪೊಲೀಸ್ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಕಮಲ್ ಪಂತ್ ಅವರ ಬಳಿಕ ಪ್ರತಾಪ್ ರೆಡ್ಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿದ್ದರು. ಬಳಿಕ ಅವರನ್ನು ವರ್ಗಾವಣೆ ಮಾಡಿ ದಯಾನಂದ್ ಅವರನ್ನು ನಗರ ಪೊಲೀಸ್ ಆಯುಕ್ತರಾಗಿ ಸರ್ಕಾರ ನೇಮಕ ಮಾಡಿತ್ತು.
ಸೈಬರ್ ಕ್ರೈಂ ಸ್ಪೆಷಲಿಸ್ಟ್: ಸಿ. ಎಚ್. ಪ್ರತಾಪ್ ರೆಡ್ಡಿ ಅವರು ಸಿಬಿಐನಲ್ಲಿಯೂ ಕೆಲಸ ಮಾಡಿದ್ದಾರೆ. ಬ್ಯಾಂಕಿಂಗ್ ವಂಚನೆಗಳು, ಸೈಬರ್ ಕ್ರೈಂಗಳಲ್ಲಿ ಅವರು ಅಪಾರವಾದ ಜ್ಞಾನವನ್ನು ಹೊಂದಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿಯಾಗಿದ್ದ ಅವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿತ್ತು.
ಜು. 1, 1964ರಲ್ಲಿ ಜನಿಸಿದ ಸಿ. ಎಚ್. ಪ್ರತಾಪ್ ರೆಡ್ಡಿ ಬಿ. ಟೆಕ್ ಪದವೀಧರರು. 1991ರಲ್ಲಿ ಕರ್ನಾಟಕ ಕೆಡರ್ನ ಐಪಿಎಸ್ ಅಧಿಕಾರಿಯಾಗಿ ಕಾರ್ಯವನ್ನು ಆರಂಭಿಸಿದರು. ರಾಜ್ಯದ ಕೂಲ್ ಐಪಿಎಸ್ ಅಧಿಕಾರಿಗಳಲ್ಲಿ ಪ್ರತಾಪ್ ರೆಡ್ಡಿ ಅವರು ಸಹ ಒಬ್ಬರು.
ಸಿ. ಎಚ್. ಪ್ರತಾಪ್ ರೆಡ್ಡಿ ಸಿಬಿಐನ ಭ್ರಷ್ಟಾಚಾರ ನಿಗ್ರಹ ದಳದ ಮುಂಬೈ ಮತ್ತು ಬೆಂಗಳೂರು ವಿಭಾಗದಲ್ಲಿ ಕೆಲಸ ಮಾಡಿದ್ದಾರೆ. ಬ್ಯಾಂಕಿಂಗ್ ಮತ್ತು ಸೈಬರ್ ಸೆಕ್ಯುರಿಟಿ ವಿಭಾಗದ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವ ಮೂಲಕ ರಾಷ್ಟ್ರೀಯ ಮಟ್ಟದಲ್ಲಿಯೂ ಗುರುತಿಸಿಕೊಂಡಿದ್ದರು.
ಕರ್ನಾಟಕದಲ್ಲಿ ಹಾಸನ ಜಿಲ್ಲೆಯಲ್ಲಿ ಸಹಾಯಕ ಸೂಪರಿಟೆಂಡೆಂಟ್ ಆಗಿ ಪ್ರತಾಪ್ ರೆಡ್ಡಿ ಅವರು ಕೆಲಸ ಆರಂಭಿಸಿದ್ದರು. ಉತ್ತರ ಕರ್ನಾಟಕ ಭಾಗದಲ್ಲಿ ಎಸ್ಪಿಯಾಗಿ, ಸಿಐಡಿಯ ಡಿಐಜಿಯಾಗಿ ಹಲವಾರು ಮಹತ್ವದ ಪ್ರಕರಣಗಳನ್ನು ಪತ್ತೆ ಹಚ್ಚಲು ಮಾರ್ಗದರ್ಶನ ನೀಡಿದ್ದಾರೆ.
ರಾಜೀನಾಮೆ ಪತ್ರವನ್ನು ಸಿ. ಎಚ್. ಪ್ರತಾಪ್ ರೆಡ್ಡಿ ಸರ್ಕಾರಕ್ಕೆ ಕಳಿಸಿದ್ದಾರೆ. ಏಪ್ರಿಲ್ 30ರಂದು ಸೇವೆಯಿಂದ ಬಿಡುಗಡೆ ಮಾಡಬೇಕು ಎಂದು ಪತ್ರದಲ್ಲಿ ಅವರು ಮನವಿ ಮಾಡಿದ್ದಾರೆ.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications