ಐಪಿಎಸ್ ಅಧಿಕಾರಿ ಆರ್. ಪಿ. ಶರ್ಮಾಗೆ ಗುಂಡೇಟು; ಆಸ್ಪತ್ರೆಗೆ ದಾಖಲು
ಬೆಂಗಳೂರು, ಸೆಪ್ಟೆಂಬರ್ 02: ಹಿರಿಯ ಐಪಿಎಸ್ ಅಧಿಕಾರಿ ಆರ್. ಪಿ. ಶರ್ಮಾ ಗುಂಡೇಟಿನಿಂದ ಗಾಯಗೊಂಡಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದೆ. ಆರೋಗ್ಯ ಸ್ಥಿತಿ ಗಂಭೀರವಾಗಿದೆ.
Recommended Video
ಬುಧವಾರ ರಾತ್ರಿ ತಮ್ಮ ನಿವಾಸಿದಲ್ಲಿ ಕರ್ನಾಟಕ ಹೌಸಿಂಗ್ ಬೋರ್ಡ್ ಡಿಜಿಯಾಗಿರುವ ಆರ್. ಪಿ. ಶರ್ಮಾಗೆ ಗುಂಡೇಟು ತಗುಲಿದೆ. ಎದೆಯ ಎಡಭಾಗಕ್ಕೆ ಗುಂಡು ತಗುಲಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರ್. ಪಿ. ಶರ್ಮಾಗೆ ಗುಂಡೇಟು; ಪೊಲೀಸರು ಹೇಳಿದ್ದೇನು?
ಕೊತ್ತನೂರಿನ ನಿವಾಸದಲ್ಲಿ ತಮ್ಮ ಪಿಸ್ತೂಲ್ನಿಂದ ಆಕಸ್ಮಿಕವಾಗಿ ಹಾರಿದ ಗುಂಡಿನಿಂದಾಗಿ ಆರ್. ಪಿ. ಶರ್ಮಾ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಡಿ ರೂಪಾ, ರೋಹಿಣಿ ಸೇರಿ ಹಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆರ್. ಪಿ. ಶರ್ಮಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೆಬ್ಬಾಳದಲ್ಲಿರುವ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ್ದು ಅಧಿಕಾರಿಯ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಬಿಜೆಪಿಗೆ ಸೇರ್ಪಡೆಯಾದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಜನರಿಗೆ ಬರೆದ ಪತ್ರ
ಆರ್. ಪಿ. ಶರ್ಮಾ 1977ನೇ ಬ್ಯಾಚ್ ಐಪಿಎಸ್ ಅಧಿಕಾರಿ. ಬಿಎಂಟಿಎಫ್ ಎಡಿಜಿಪಿಯಾಗಿದ್ದ ವೇಳೆಯಲ್ಲಿ ತಮ್ಮ ಕಾರ್ಯ ವೈಖರಿ ಮೂಲಕ ಅವರು ಬಹಳ ಖ್ಯಾತಿಗಳಿಸಿದ್ದರು.