ಸದಸ್ಯರ ಅಭಿಪ್ರಾಯ ಪಡೆದೇ ಪತ್ರ ಬರೆದಿದ್ದೇನೆ: ಶರ್ಮಾ
ಬೆಂಗಳೂರು, ಮಾರ್ಚ್ 14: ಪೊಲೀಸ್ ಇಲಾಖೆಯಲ್ಲಿ ಸರ್ಕಾರದ ಹಸ್ತಕ್ಷೇಪ ಸೇರಿದಂತೆ ಹಲವು ವಿಚಾರವಾಗಿ ಖಾರವಾಗಿ ಸರ್ಕಾರಕ್ಕೆ ಪತ್ರ ಬರೆದಿದ್ದ ಕರ್ನಾಟಕ ಐಪಿಎಸ್ ಅಧಿಕಾರಿಗಳ ಒಕ್ಕೂಟದ ಅಧ್ಯಕ್ಷ ಆರ್.ಪಿ.ಶರ್ಮಾ ಅವರು ವಿವಾದ ಉಂಟಾದ ನಂತರ ಇದೇ ಮೊದಲ ಬಾರಿಗೆ ಮೌನ ಮುರಿದಿದ್ದಾರೆ.
ಐಪಿಎಸ್ ಅಧಿಕಾರಿಗಳ ಒಕ್ಕೂಟದ ಸದಸ್ಯರ ಅಭಿಪ್ರಾಯ ಪಡೆದೇ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ, ಅಭಿಪ್ರಾಯ ಪಡೆದ ಕಾರಣದಿಂದಲೇ ಸಂಘದ ಲೆಟರ್ಹೆಡ್ನಲ್ಲಿ ಪತ್ರ ಬರೆದಿದ್ದು ಎಂದು ಅನೌಪಚಾರಿಕವಾಗಿ ಮುಖ್ಯಮಂತ್ರಿಗಳ ಸಚಿವಾಲಯಕ್ಕೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಆದರೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರು ಅವರು ಲಿಖಿತ ಉತ್ತರ ನೀಡುವಂತೆ ನೊಟೀಸ್ ನೀಡಿದ್ದು, ಇಂದು ಮಾರ್ಚ್ 14 ರ ಒಳಗೆ ಉತ್ತರ ನೀಡುವಂತೆ ಸೂಚಿಸಿದ್ದಾರೆ. ಅಲ್ಲದೆ ಐಪಿಎಸ್ ಅಧಿಕಾರಗಳ ಒಕ್ಕೂಟದ ಸಂಘದ ಸಭೆಯಲ್ಲಿ ಪತ್ರ ಬರೆಯುವ ನಿರ್ಣಯ ಕೈಗೊಂಡಿದ್ದರೆ, ಸಭೆಯ ನಡಾವಳಿಯನ್ನು ಕಳುಹಿಸುವಂತೆ ಪತ್ರದಲ್ಲಿ ಸೂಚಿಸಿದ್ದಾರೆ.

ಆರ್.ಪಿ.ಶರ್ಮಾ ಅವರು ಇಂದು ನೊಟೀಸ್ಗೆ ಉತ್ತರ ನೀಡದಿದ್ದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಯುಪಿಎಸ್ಸಿಗೆ ಪತ್ರ ಬರೆಯಲಿದ್ದಾರೆ. ಈಗಾಗಲೇ ಕೆ.ರತ್ನಪ್ರಭಾ ಅವರು ಪೊಲೀಸ್ ಮಹಾನಿರ್ದೇಶಕಿ ನೀಲಮಣಿರಾಜು ಅವರೊಂದಿಗೆ ಮಾತನಾಡಿದ್ದು ಯುಪಿಎಸ್ಸಿ ಕೈಗೊಳ್ಳಬಹುದಾದ ಶಿಸ್ತು ಕ್ರಮಗಳ ಬಗ್ಗೆಯೂ ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ.
ರಾಜಕಾರಣಿಗಳು ಪೊಲೀಸ್ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿರುವ ಕಾರಣ ಪೊಲೀಸ್ ಇಲಾಖೆಯ ಘನತೆ ಕುಂದಿದೆ ಹಾಗೂ ರಾಜ್ಯದಲ್ಲಿ ಉನ್ನತ ಅಧಿಕಾರಿಗಳಿಗೆ ಭದ್ರತೆ ಇಲ್ಲದ ಹಾಗಾಗಿದೆ, ಈ ವಿಷಯಗಳನ್ನು ಚರ್ಚಿಸಲು ಸರ್ಕಾರವು ಈ ಕೂಡಲೇ ಐಪಿಎಸ್ ಅಧಿಕಾರಿಗಳ ಸಭೆ ಕರೆಯಬೇಕು ಎಂದು ಆರ್.ಪಿ.ಶರ್ಮಾ ಅವರು ಪತ್ರದಲ್ಲಿ ಬರೆದಿದ್ದರು.
-
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ












Click it and Unblock the Notifications