ಮೆಹದಿ ವಿರುದ್ಧ ಕಠಿಣ ಪ್ರಕರಣ ದಾಖಲು : ಪೊಲೀಸ್
ಬೆಂಗಳೂರು, ಡಿ. 18: ಐಎಸ್ಐಎಸ್ ಪರ ಟ್ವಿಟ್ಟರ್ ಖಾತೆ ನಿರ್ವಹಿಸುತ್ತಿದ್ದ ಆರೋಪಕ್ಕೊಳಗಾಗಿರುವ ಮೆಹದಿ ಮಸ್ರೂರ್ ಬಿಸ್ವಾಸ್ (24) ವಿರುದ್ಧ ಕಠಿಣ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ಮೆಹದಿ ವಿರುದ್ಧ ಗಂಭೀರವಲ್ಲದ ಪ್ರಕರಣ ದಾಖಲಿಸಲಾಗಿದೆ ಎಂಬ ಆರೋಪವನ್ನು ಪೊಲೀಸರು ಅಲ್ಲಗಳೆದಿದ್ದಾರೆ.
ಭಾರತೀಯ ದಂಡ ಸಂಹಿತೆಯ 27ನೇ ಪರಿಚ್ಛೇದದಡಿ ಹೊಸದಾಗಿ ಪ್ರಕರಣ ದಾಖಲಿಸಲಾಗಿದೆ. ಈಗಾಗಲೇ 125ನೇ ಪರಿಚ್ಛೇದದಡಿ ದೇಶ ಅಥವಾ ಭಾರತದ ಜೊತೆ ಸ್ನೇಹ ಹೊಂದಿರುವ ರಾಷ್ಟ್ರದ ವಿರುದ್ಧ ಸಂಚು ರೂಪಿಸಿದ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ, ಪರಿಚ್ಛೇದ 18 ಹಾಗೂ 39ರ ಅಡಿ ಕಾನೂನು ಬಾಹಿರ ಚಟುವಟಿಕೆ (ತಡೆ) ಕಾಯಿದೆ ಹಾಗೂ ಪರಿಚ್ಛೇದ 66 (ಎಫ್) ಅಡಿ ಪಿತೂರಿ ಮತ್ತು ಸೈಬರ್-ಭಯೋತ್ಪಾದನೆ ನಡೆಸಿದ ಪ್ರಕರಣ ದಾಖಲಾಗಿದೆ. [ತಪ್ಪೊಪ್ಪಿಕೊಂಡ ಮೆಹದಿ ಬಿಸ್ವಾಸ್]

"ಐಎಸ್ಐಎಸ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಿಷೇಧಿತ ಸಂಘಟನೆ. ಬಿಸ್ವಾಸ್ ಆ ಸಂಘಟನೆಯ ತತ್ವವನ್ನು ಟ್ವೀಟ್ ಮಾಡುತ್ತಿದ್ದ. ಆದ್ದರಿಂದ ಪ್ರಕರಣದ ಕಾಠಿಣ್ಯತೆ ಕುರಿತು ಅನುಮಾನ ಬೇಡ" ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. [ಮೆಹದಿ ಬಂಧನ : ಟಾಪ್ 10 ಬೆಳವಣಿಗೆ]
"ಮೆಹದಿ ಬಿಸ್ವಾಸ್ ಐಎಸ್ಐಎಸ್ ಸಿದ್ಧಾಂತವನ್ನು ಟ್ವೀಟ್ ಮಾಡುತ್ತಿದ್ದ ಕಾರಣ ಆತನ ವಿರುದ್ಧ ಸೈಬರ್ ಭಯೋತ್ಪಾದನೆ ಪ್ರಕರಣ ದಾಖಲಿಸಲಾಗಿದೆ. ನಮಗೆ ಈಗ ಈ ಎಲ್ಲ ಪ್ರಕರಣಗಳನ್ನು ಸಾಬೀತುಪಡಿಸಲು ಸಾಕ್ಷಿ ಸಂಗ್ರಹವೊಂದೆ ಉಳಿದಿರುವ ಕೆಲಸ" ಎಂದು ಸ್ಪಷ್ಟಪಡಿಸಿದ್ದಾರೆ. [ಮೆಹದಿ ಗುಪ್ತದಳದ ಕಣ್ಣು ತಪ್ಪಿಸಿದ್ದು ಹೇಗೆ]
ಭಾರತೀಯ ಮುಸ್ಲಿಮರು ಅಲ್ಲಾಹ್ ಮತ್ತು ಶರಿಯಾ ಆಡಳಿತದ ಬದಲು ಭಾರತೀಯ ರಾಜ್ಯವನ್ನು ಒಪ್ಪಿಕೊಂಡಿದ್ದಾರೆ ಎಂದು ಮೆಹದಿ ನಂಬಿದ್ದಾನೆ.
ಆತ ಬಹುಶಃ 18ನೇ ವಯಸ್ಸಿನಲ್ಲಿ ಅಲ್ ಖೈದಾ ಹರಡಿದ ಸಿದ್ಧಾಂತಗಳಿಂದ ಪ್ರಭಾವಿತನಾಗಿದ್ದಾನೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications