ಅಕ್ರಮ ಗಣಿಗಾರಿಕೆ: ಎಸ್ ಐಟಿಗೆ ವಹಿಸಲು ಸಂಪುಟ ತೀರ್ಮಾನ
ಬೆಂಗಳೂರು, ಜನವರಿ 18 : ಕಬ್ಬಿಣದ ಅದಿರು ಅಕ್ರಮ ರಫ್ತು ಪ್ರಕರಣವನ್ನು ರಾಜ್ಯದ ವಿಶೇಷ ತನಿಖಾ ತಂಡಕ್ಕೆ ವಹಿಸಿ ತನಿಖೆ ನಡೆಸುವಂತೆ ಸೂಚಸಿಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ ಬಿ ಜಯಚಂದ್ರ ತಿಳಿಸಿದರು.
ಗೋವಾ ರಾಜ್ಯದ ಮರ್ಮ ಗೋವಾ ಹಾಗೂ ಪಣಜಿ ಬಂದರು ಮೂಲಕ ಕಬ್ಬಿಣದ ಅದಿರು ಸಾಗಣೆಯಾಗಿರುವ ಕುರಿತಂತೆ ಮೇಲ್ನೋಟಕ್ಕೆ ಯಾವುದೇ ದಾಖಲೆಗಳು ಕಂಡು ಬರುತ್ತಿಲ್ಲ ಎಂಬ ಕೇಂದ್ರ ತನಿಖಾ ತಂಡದ ವರದಿಯನ್ನು ಸಮಗ್ರವಾಗಿ ಪರಿಶೀಲಿಸಿದ ರಾಜ್ಯ ಸಚಿವ ಸಂಪುಟವು ಗೋವಾ ರಾಜ್ಯದ ಈ ಎರಡೂ ಪ್ರದೇಶಗಳೂ ಹಾಗೂ ರಾಜ್ಯದ ನವ ಮಂಗಳೂರು ಮತ್ತು ಕಾರವಾರದ ಬೇಲಿಕೇರಿ ಬಂದರು ಮೂಲಕ ಅವ್ಯಾಹತವಾಗಿ ನಡೆದಿದೆ ಎನ್ನುವುದನ್ನು ತಿಳಿಸಿದರು.

ಬಳ್ಳಾರಿ ಜಿಲ್ಲೆಯಲ್ಲಿ ನಡೆದ ಅಕ್ರಮ ಗಣಿಗಾರಿಕೆ ಹಾಗೂ ಕಬ್ಬಿಣದ ಅದಿರು ಸಾಗಣೆ ಕುರಿತಂತೆ ಕರ್ನಾಟಕ ಲೋಕಾಯುಕ್ತ ಸಲ್ಲಿಸಿದ ಎರಡು ವರದಿಗಳನ್ನು ಆಧರಿಸಿ, ಕರ್ನಾಟಕ, ಗೋವಾ, ಆಂಧ್ರ ಪ್ರದೇಶ ಹಾಗೂ ತಮಿಳು ನಾಡು ರಾಜ್ಯಗಳ ವಿವಿಧ ಬಂದರುಗಳ ಮೂಲಕ ರಾಜ್ಯದ 50,000 ಲಕ್ಷಕ್ಕೂ ಹೆಚ್ಚು ಮೆಟ್ರಿಕ್ ಟನ್ ಕಬ್ಬಿಣದ ಅದಿರು ಲೂಟಿಯಾಗಿದೆ ಎಂಬ ಆರೋಪ ಕುರಿತಂತೆ ತನಿಖೆ ನಡೆಸಲು ಲೋಕಾಯುಕ್ತ ವರದಿಯಲ್ಲಿನ ದಾಖಲೆಗಳನ್ನು ಆಧರಿಸಿ ಭಾರತ ಸರ್ವೋಚ್ಛ ನ್ಯಾಯಾಲಯವು ಪ್ರಕರಣವನ್ನು ಸಿ ಬಿ ಐ ಗೆ ವಹಿಸಿತ್ತು.
ಲೋಕಾಯುಕ್ತ ವರದಿಯಲ್ಲಿಯೇ ದಾಖಲೆಗಳು ನಮೂದಾಗಿದ್ದರೂ, ಗೋವಾ ರಾಜ್ಯದ ಬಂದರುಗಳಲ್ಲಿ ತನಿಖೆ ನಡೆಸಿದ ಸಿ ಬಿ ಐ ಮೇಲ್ನೋಟಕ್ಕೆ ದಾಖಲೆಗಳಿಲ್ಲ ಎಂದು ಹೇಳಿ ಪ್ರಕರಣವನ್ನು ಮುಕ್ತಾಯಗೊಳಿಸಿದೆ. ಈ ಹಿನ್ನೆಲೆಯಲ್ಲಿ ಈ ನಿಟ್ಟಿನಲ್ಲಿ ತನಿಖೆ ನಡೆಸಲು ರಾಜ್ಯದ ಎಸ್ ಐ ಟಿ ಗೆ ವಹಿಸಲು ಸಂಪುಟ ನಿರ್ಧರಿಸಿದೆ ಎಂದು ಸಚಿವರು ತಿಳಿಸಿದರು.
-
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ












Click it and Unblock the Notifications