ಕೆಪಿಎಸ್ಸಿ 660 ಎಇ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಆರೋಪ: ನ್ಯಾಯಾಂಗ ತನಿಖೆಗೆ ಎಎಪಿ ಆಗ್ರಹ
ಬೆಂಗಳೂರು, ಜನವರಿ 18: ಲೋಕೋಪಯೋಗಿ ಇಲಾಖೆಯ 660 ಸಹಾಯಕ ಎಂಜಿನಿಯರ್ ಹುದ್ದೆಗಳ ನೇಮಕಾತಿ ಸಂದರ್ಶನದಲ್ಲಿ ಕರ್ನಾಟಕ ಲೋಕಸೇವಾ ಆಯೋಗ (KPSC) ಎಸಗಿದ ಅಕ್ರಮದ ವಿರುದ್ಧ ನ್ಯಾಯಾಂಗ ತನಿಖೆಗೆ ಆಮ್ ಆದ್ಮಿ ಪಾರ್ಟಿ ರಾಜ್ಯ ಯುವ ಘಟಕ ಆಗ್ರಹಿಸಿದೆ.
ಬುಧವಾರ ಬೆಂಗಳೂರಿನಲ್ಲಿ ಕೆಪಿಎಸ್ಸಿ ಕಚೇರಿ ಮುಂದೆ ಏಕಾಂಗಿಯಾಗಿ ಆಮ್ ಆದ್ಮಿ ಪಾರ್ಟಿ (AAP) ರಾಜ್ಯ ಯುವ ಘಟಕದ ಅಧ್ಯಕ್ಷ ಮುಕುಂದ ಗೌಡ ಅವರು ಪ್ರತಿಭಟನೆ ನಡೆಸಿದರು. ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು,
ಕೆಪಿಎಸ್ಸಿಯಲ್ಲಿ ಭ್ರಷ್ಟಾಚಾರವು ಅವ್ಯಾಹತವಾಗಿ ನಡೆಯುತ್ತಿದೆ. ಇದರಿಂದ ಪ್ರಾಮಾಣಿಕ ಯುವಕರಿಗೆ ಅನ್ಯಾಯವಾಗುತ್ತಿದೆ. ಲೋಕೋಪಯೋಗಿ ಇಲಾಖೆಯ 660 ಎಇ ಹುದ್ದೆಗಳ ಭರ್ತಿಗೆ ಕೆಪಿಎಸ್ಸಿ ನಡೆಸಿದ ಸಂದರ್ಶನದ ಅಂಕ ನೀಡಿಕೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಆಪಾದಿಸಿದರು.

ಒಟ್ಟು 400 ಅಂಕಗಳ ಲಿಖಿತ ಪರೀಕ್ಷೆಯಲ್ಲಿ ಕೇವಲ 83.50 ರಿಂದ 94 ಅಂಕ ಗಳಿಸಿದ ಅಭ್ಯರ್ಥಿಗಳಿಗೆ ವ್ಯಕ್ತಿತ್ವ ಪರೀಕ್ಷೆಯಲ್ಲಿ ಒಟ್ಟು 50ಕ್ಕೆ 40 ಅಂಕಗಳನ್ನು ನೀಡಲಾಗಿದೆ. ಲಿಖಿತ ಪರೀಕ್ಷೆಯಲ್ಲಿ 69 ಅಂಕ ಗಳಿಸಿದ ಅಭ್ಯರ್ಥಿಗೆ ಸಂದರ್ಶನದಲ್ಲಿ 39 ಅಂಕ ಕೊಡಲಾಗಿದೆ. ಆದರೆ 236 ಅಂಕ ಗಳಿಸಿ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ಅಭ್ಯರ್ಥಿಗೆ ಸಂದರ್ಶನದಲ್ಲಿ ಕೇವಲ 13.25 ಅಂಕ ನೀಡಲಾಗಿದೆ ಎಂದು ಅವರು ವಿವರಿಸಿದರು.
ಈ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕದ ಆಧಾರದಲ್ಲಿ 1:3 ಅನುಪಾತದಲ್ಲಿ ವ್ಯಕ್ತಿತ್ವ ಪರೀಕ್ಷೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹೀಗೆ ಅಂಕ ನೀಡಲಾಗಿದೆ. ಇದನ್ನು ಸ್ಪಷ್ಟವಾಗಿ ಗಮನಿಸಿದರೆ ಎಇ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿರುವುದು ಕಂಡು ಬರುತ್ತದೆ ಎಂದು ಅವರು ಹೇಳಿದರು.

ಶೇ.25ರಷ್ಟು ಮಂದಿಗೆ ಸಮಾನ ಅಂಕ
ವ್ಯಕ್ತಿತ್ವ ಪರೀಕ್ಷೆಯಲ್ಲಿ ಅಭ್ಯರ್ಥಿ ಗಳಿಸಿದ ಅಂಕವು ಸಂದರ್ಶನ ಮಂಡಳಿಯ ನಾಲ್ವರು ಸದಸ್ಯರು ನೀಡಿದ ಅಂಕಗಳ ಸರಾಸರಿ ಆಗಬೇಕು. ಹೀಗಿದ್ದರೂ ಒಟ್ಟು ಅಭ್ಯರ್ಥಿಗಳಲ್ಲಿ ಶೇ. 25ರಷ್ಟು ಮಂದಿಗೆ ಒಂದೇ ಸಮನಾಗಿ ಅದೂ 40 ಅಂಕಗಳನ್ನು ನೀಡಿರುವುದು ಹೇಗೆ? ಎಂದು ಅವರು ಪ್ರಶ್ನಿಸಿದರು. ಅವರೆಲ್ಲರಿಗೂ ಈ 497 ಅಭ್ಯರ್ಥಿಗಳೂ ಅತ್ಯಂತ ಪ್ರತಿಭಾನ್ವಿತರು ಎಂದು ಅನಿಸಿದ್ದಲ್ಲಿ, ಕೆಲವರಿಗಾದರೂ 40ಕ್ಕಿಂತ ಹೆಚ್ಚು ಅಂಕಗಳನ್ನು ನೀಡಿಬಹುದಿತ್ತಲ್ಲವೇ?. ಕೆಪಿಎಸ್ಸಿ ಮಾಡಿದ ಈ ಅಕ್ರಮದ ಕುರಿತು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು. ತಿಂಗಳೊಳಗೆ ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು ಎಂದು ಮುಕುಂದ್ ಗೌಡ ಒತ್ತಾಯಿಸಿದರು.
ಲೋಕೋಪಯೋಗಿ ಇಲಾಖೆ (PWD) ಸಹಾಯಕ ಎಂಜಿನಿಯರ್ ಹುದ್ದೆ ಅಭ್ಯರ್ಥಿಗಳ ವ್ಯಕ್ತಿತ್ವ ಪರೀಕ್ಷೆಯಲ್ಲಿ, ಹಣ ನೀಡಿದ ಅಭ್ಯರ್ಥಿಗಳಿಗೆ ಗರಿಷ್ಠ ಹಾಗೂ ಉಳಿದವರಿಗೆ ಕನಿಷ್ಠ ಅಂಕಗಳನ್ನು ನೀಡಿ ಅನ್ಯಾಯ ಎಸಗಲಾಗಿದೆ. 40 ಅಂಕ ಪಡೆದ ಬಹುತೇಕ ಅಭ್ಯರ್ಥಿಗಳು 30 ಲಕ್ಷದಿಂದ 50 ಲಕ್ಷ ರೂಪಾಯಿವರೆಗೆ ಹಣ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಕೆಪಿಎಸ್ಸಿಯಲ್ಲಿನ ಸಾಲು ಸಾಲು ಅಕ್ರಮಗಳಿಂದಾಗಿ ಬಡ ಹಾಗೂ ಮಧ್ಯಮ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರಿ ಹುದ್ದೆಗಳು ಗಗನ ಕುಸುಮವಾಗಿವೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications