ಜಿಹಾದಿ ಗ್ಯಾಂಗ್ ಸೆರೆ: ಐಸಿಸ್ ಕಮಾಂಡರ್ ವಿದೇಶಕ್ಕೆ ಪರಾರಿ?
ಬೆಂಗಳೂರು, ಜನವರಿ 14: ಜಿಹಾದಿ ಗ್ಯಾಂಗ್ ಬಂಧನದ ಬೆನ್ನಲ್ಲೇ ಭಾವಿ ಐಸಿಸ್ ಕಮಾಂಡರ್ ವಿದೇಶಕ್ಕೆ ಪರಾರಿಯಾಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.
ರಾಜ್ಯದಲ್ಲಿ ಐಸಿಸ್ ಸೇನೆ ಕಟ್ಟುವ ತಂಡದ ಕಮಾಂಡರ್ ಎನ್ನಲಾದ ಬೆಂಗಳೂರಿನ ಸದ್ದುಗುಂಟೆಪಾಳ್ಯದ ಮೆಹಬೂಬ್ ಪಾಷ ಪತ್ತೆಗೆ ಸಿಸಿಬಿ ತನ್ನ ಕಾರ್ಯಾಚರಣೆ ತೀವ್ರಗೊಳಿಸಿದೆ. ಆತ ದೇಶದ ಗಡಿ ದಾಟಿರುವ ಬಗ್ಗೆ ಬಲವಾದ ಅನುಮಾನ ವ್ಯಕ್ತವಾಗಿದೆ.

ದೆಹಲಿ ಮತ್ತು ಬೆಂಗಳೂರಿನಲ್ಲಿದ್ದ ಜಿಹಾದಿಗಳು ಸೆರೆ
ದೆಹಲಿಯಲ್ಲಿ ತಮಿಳುನಾಡು ಮೂಲದ ಜಿಹಾದಿ ಗ್ಯಾಂಗ್ ಪ್ರಮುಖ ನಾಯಕ ಖಾಜಾಮೊಹಿದ್ದೀನ್ ಹಾಗೂ ಬೆಂಗಳೂರಿನಲ್ಲಿ ಆತನ ಸಹಚರರು ಸೆರೆಯಾಗಿದ್ದರು.ಈ ವಿಚಾರಣೆ ವೇಳೆ ಕರ್ನಾಟಕದಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಗೆ ಹೊಸ ಸದಸ್ಯರ ನೇಮಕಾತಿ ಹೊಣೆಗಾರಿಕೆಯನ್ನು ಮೆಹಬೂಬ್ ಪಾಷ ಹೊತ್ತಿದ್ದ ಸಂಗತಿ ಬೆಳಕಿಗೆ ಬಂದಿದೆ.

ಸಹಚರರ ಬಂಧನ ವಿಷಯ ತಿಳಿದು ಪರಾರಿ
ತನ್ನ ಸಹಚರರ ಬಂಧನ ವಿಷಯ ತಿಳಿದ ತಕ್ಷಣವೇ ಬೆಂಗಳೂರು ತೊರೆದಿರುವ ಆತನಿಗಾಗಿ ಹೊರ ರಾಜ್ಯಗಳಲ್ಲಿ ಪೊಲೀಸರು ಹುಡುಕಾಟ ನಡೆಸಿದ್ದಾರೆ ಎಂದು ಗೊತ್ತಾಗಿದೆ. ಕೇಂದ್ರ ಗುಪ್ತಚರ , ತಮಿಳುನಾಡು ಹಾಗೂ ಸಿಸಿಬಿ ಪೊಲೀಸರು, ಮೆಹಬೂಬ್ ಪಾಷ ಬೆನ್ನು ಹತ್ತಿದ್ದಾರೆ.

ಮೆಹಬೂಬ್ ಪಾಷಾ ಪ್ರಮುಖ ನೇತಾರ
ಜಿಹಾದಿ ಗ್ಯಾಂಗ್ನಲ್ಲಿ ಖಾಜಾ ಮೊಹಿದ್ದೀನ್ ಬಳಿಕ ಮೆಹಬೂಬ್ ಪಾಷಾ ಪ್ರಮುಖ ನೇತಾರನಾಗಿದ್ದು, ಆತನಿಗೆ ಬೆಂಗಳೂರು ಮಾತ್ರವಲ್ಲದೆ ಚಾಮರಾಜನಗರ, ಕೋಲಾರ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಸಂಪರ್ಕ ಜಾಲವಿದೆ. ಖಾಜಾ ಬಂಧನದ ವಿಷಯ ತಿಳಿದ ಬಳಿಕ ಜಾಗ್ರತನಾಗಿರುವ ಮೆಹಬೂಬ್ , ಐಸಿಸ್ ಹಿತೈಷಿಗಳ ಸಹಕಾರ ಪಡೆದು ದೇಶದ ಗಡಿ ದಾಟಿರಬಹುದು ಎಂದು ಹೇಳಲಾಗುತ್ತಿದೆ.

ಬೆಂಗಳೂರಲ್ಲಿ ಇಬ್ಬರು ವಶಕ್ಕೆ
ಬೆಂಗಳೂರಲ್ಲಿ ಮತ್ತೆ ಮೆಹಬೂಬ್ ಪಾಷಾ ಇಬ್ಬರು ಸಹಚರನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೆಹಬೂಬ್ ಪಾಷಾ ಜೊತೆ ಅವರು ನಿರಂತರ ಸಂಪರ್ಕದಲ್ಲಿದ್ದರು. ಹಾಗೆಯೇ ಪಾಷ ನೇತೃತ್ವದಲ್ಲಿ ನಡೆದ ಸಭೆಗಳಲ್ಲಿ ಕೂಡ ಇಬ್ಬರು ಪಾಲ್ಗೊಂಡಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಸದ್ದುಗುಂಟೆ ಪಾಳ್ಯ ಸಮೀಪ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications