ಉಗ್ರರ ಜತೆ ನಂಟು: ಬೆಂಗಳೂರು ವೈದ್ಯನ ವಿರುದ್ಧ ಚಾರ್ಜ್ಶೀಟ್
ಬೆಂಗಳೂರು, ಜನವರಿ 12:ಉಗ್ರ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಆರೋಪದ ಮೇರೆಗೆ ಬೆಂಗಳೂರು ಮೂಲದ ವೈದ್ಯನೊಬ್ಬನ ವಿರುದ್ಧ ಎನ್ಐಎ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ.
ಬೆಂಗಳೂರಿನ ಬಸವನಗುಡಿಯಲ್ಲಿ ವಾಸವಿದ್ದ ವೈದ್ಯ ಅಬ್ದುಲ್ ರೆಹಮಾನ್ ಅಲಿಯಾಸ್ ಡಾ. ಬ್ರೇವ್ ವಿರುದ್ಧ ಎನ್ಐಎ ಚಾರ್ಜ್ ಶೀಟ್ ದಾಖಲು ಮಾಡಿದೆ.
ಗಡಿ ಪಾರಾಗಿ ಬಂದು ಭಾರತದಲ್ಲಿ ಪಿತೂರಿ ನಡೆಸುತ್ತಿದ್ದ ಖಲಿಸ್ತಾನಿ ಉಗ್ರನನ್ನು ಬಂಧಿಸಿದ ಎನ್ಐಎ
ರೆಹಮಾನ್ನನ್ನು ಎನ್ಐಎ 2020 ರ ಆಗಸ್ಟ್ನಲ್ಲಿ ಬೆಂಗಳೂರಿನಿಂದ ಬಂಧಿಸಿತ್ತು. ಈತ ನಗರದ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ನೇತ್ರ ತಜ್ಞನಾಗಿ ಕೆಲಸ ಮಾಡುತ್ತಿದ್ದ.
2013 ರಲ್ಲಿ ವೈದ್ಯ ಸಿರಿಯಾಕ್ಕೆ ಪ್ರಯಾಣ ಬೆಳೆಸಿದ್ದನೆಂದು ಕೇಂದ್ರ ಸಂಸ್ಥೆ ಆರೋಪಿಸಿದೆ. ಅವನು ಹಿಂದಿರುಗಿದ ನಂತರ, ಭಯೋತ್ಪಾದಕರ ಚಿಕಿತ್ಸೆಗಾಗಿ ಮೆಡಿಕಲ್ ಅಪ್ಲಿಕೇಷನ್ ಅನ್ನು ಅಭಿವೃದ್ಧಿಪಡಿಸುವಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಐಪಿಸಿಯ ಹಲವಾರು ವಿಭಾಗಗಳು ಮತ್ತು ಬೆಂಗಳೂರು ವೈದ್ಯನ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಇಲ್ಲಿ ವಿಶೇಷ ಎನ್ಐಎ ನ್ಯಾಯಾಲಯದಲ್ಲಿ ಚಾರ್ಜ್ಶೀಟ್ ಸಲ್ಲಿಸಿಲಾಗಿದೆ.
ಇದಕ್ಕೂ ಮೊದಲು, 2020 ರ ಸೆಪ್ಟೆಂಬರ್ನಲ್ಲಿ ಎನ್ಐಎ ಜಹನ್ಜೈಬ್ ಸಾಮಿ ವಾನಿ ಮತ್ತು ಅವರ ಪತ್ನಿ ಹಿನಾ ಬಶೀರ್ ಬೇಗ್ ಜಮ್ಮು ಮತ್ತು ಕಾಶ್ಮೀರದ ನಿವಾಸಿಗಳು ಮತ್ತು ಪ್ರಸ್ತುತ ದೆಹಲಿಯ ಓಖ್ಲಾ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ), ಹೈದರಾಬಾದ್ನ ಅಬ್ದುಲ್ಲಾ ಬಸಿತ್, ಸಾದಿಯಾ ಅನ್ವರ್ ಶೇಖ್ ಮತ್ತು ನಬೀಲ್ ಸಿದ್ದಿಕ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿತ್ತು.
ಎನ್ಐಎಯ ಮತ್ತೊಂದು ಐಎಸ್ ಅಬುಧಾಬಿ ಮಾಡ್ಯೂಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬ್ದುಲ್ಲಾ ಬಸಿತ್ ನನ್ನು ಈಗಾಗಲೇ ದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.
Recommended Video
ಕರ್ನಾಟಕದ ಬೆಂಗಳೂರಿನ ನಿವಾಸಿಯಾಗಿರುವ ಇಪ್ಪತ್ತೆಂಟು ವರ್ಷದ ಅಬ್ದುರ್ ರೆಹಮಾನ್, ಸಹ-ಆರೋಪಿ ಜಹನ್ಜೈಬ್ ಸಾಮಿಮತ್ತು ಇತರರೊಂದಿಗೆ ಸಹಭಾಗಿತ್ವದಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆಯ ಐಸಿಸ್ / ಐಎಸ್ಕೆಪಿ ಯ ಸಿದ್ಧಾಂತ ಮತ್ತು ಚಟುವಟಿಕೆಗಳನ್ನು ಮುಂದುವರೆಸಿದ್ದ.