ವಿದ್ಯಾರ್ಥಿಗಳು ರಿಯಾಯಿತಿ ದರದಲ್ಲಿ ಬಿಎಂಟಿಸಿ ಪಾಸ್ ಪಡೆಯುವುದು ಹೇಗೆ?
ಬೆಂಗಳೂರು, ನವೆಂಬರ್ 11: ಸಿಲಿಕಾನ್ ಸಿಟಿಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರಿಯಾಯಿತಿ ದರದಲ್ಲಿ ಬಿಎಂಟಿಸಿ ವಾರ್ಷಿಕ ಪಾಸ್ ವಿತರಿಸಲಾಗುವುದು ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯ ಸರ್ಕಾರದ ನಿರ್ದೇಶನದಂತೆ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬಿಎಂಟಿಸಿ ಪಾಸ್ ವಿತರಣೆ ಮಾಡಲಾಗುತ್ತಿದೆ. 2021-22ನೇ ಸಾಲಿನ ವಿದ್ಯಾರ್ಥಿ ಪಾಸ್ ಪಡೆಯುವುದಕ್ಕೆ ನವೆಂಬರ್ 12ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ನೀಡಲಾಗಿದೆ.
ಸೇವಾ ಸಿಂಧು ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕೃತ ವೆಬ್ ಸೈಟ್ ಮೂಲಕ ವಿದ್ಯಾರ್ಥಿಗಳು ರಿಯಾಯಿತಿ ಪಾಸಿಗಾಗಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿ ಪಾಸಿನ ಅರ್ಜಿಗಳನ್ನು ಸಂಬಂಧಿಸಿದ ಶಿಕ್ಷಣ ಸಂಸ್ಥೆಗಳಿಂದ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಅನುಮೋದಿಸಲಾಗುವುದು. ತದನಂತರ ವಿದ್ಯಾರ್ಥಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಪಾಸ್ ವಿತರಣೆಗಾಗಿ ಬೆಂಗಳೂರು ಒನ್ ಕೇಂದ್ರ, ದಿನಾಂಕ ಹಾಗೂ ಸಮಯವನ್ನು ನಿಗದಿಪಡಿಸಿಕೊಳ್ಳಬೇಕು.

ಪಾಸ್ ಪಡೆಯುವ ವೇಳೆ ದಾಖಲೆಗಳು ಅವಶ್ಯಕ:
2021-22ನೇ ಸಾಲಿನ ವಿದ್ಯಾರ್ಥಿ ಪಾಸ್ ಪಡೆಯುವುದಕ್ಕೆ ತೆರಳುವ ವೇಳೆಯಲ್ಲಿ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ತಮ್ಮೊಂದಿಗೆ ತೆಗೆದುಕೊಂಡು ಹೋಗುವುದು ಕಡ್ಡಾಯವಾಗಿರುತ್ತದೆ. ಪಾಸ್ ವಿತರಣಾ ಕೇಂದ್ರಕ್ಕೆ ತೆರಳುವ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಕೇಂದ್ರ, ದಿನಾಂಕ , ಸಮಯ ನಿಗದಿಪಡಿಸಿಕೊಂಡ ಸ್ವೀಕೃತಿ ಪತ್ರ, ಶಾಲೆ ಅಥವಾ ಕಾಲೇಜಿನ ಗುರುತಿನ ಚೀಟಿ, ಶುಲ್ಕ ರಶೀದಿ, ಶಾಲಾ ಮುಖ್ಯಸ್ಥರಿಂದ ದೃಢೀಕರಿಸಿದ ಪತ್ರವನ್ನು ಹಾಜರುಪಡಿಸಬೇಕು. ಸ್ಮಾರ್ಟ್ ಕಾರ್ಡ್ ವಿದ್ಯಾರ್ಥಿ ಪಾಸುಗಳನ್ನು 2021ರ ನವೆಂಬರ್ 14ರಿಂದ ಬೆಂಗಳೂರು ಒನ್ ಕೇಂದ್ರಗಳಲ್ಲಿ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.
ಒಂದು ವೇಳೆ ವಿದ್ಯಾರ್ಥಿಗಳ ಅರ್ಜಿಯನ್ನು ಅನುಮೋದಿಸಲು ಶಿಕ್ಷಣ ಸಂಸ್ಥೆಯವರು ನೋಂದಣಿಯಾಗದೇ ಇದ್ದರೆ, ರಾಜ್ಯ ಪಠ್ಯಕ್ರಮ ಹೊಂದಿರುವ 1 ರಿಂದ 10ನೇ ತರಗತಿವರೆಗಿನ ಶಾಲೆಗಳನ್ನು ಹೊರತುಪಡಿಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕೃತ ವೆಬ್ ಸೈಟ್ ನಲ್ಲಿ ನೋಂದಣಿ ಮಾಡಿಕೊಳ್ಳಲು ಸೂಚಿಸಲಾಗಿದೆ.
ಬೆಂಗಳೂರು ಒನ್ ಕೇಂದ್ರದಲ್ಲಿ ಪಾಸ್ ವಿತರಣೆ:
ಬಿಎಂಟಿಸಿಯ ವಿದ್ಯಾರ್ಥಿ ಪಾಸುಗಳನ್ನು ಒಟ್ಟು 95 ಬೆಂಗಳೂರು ಒನ್ ಕೇಂದ್ರದಲ್ಲಿ ವಿತರಿಸಲಾಗುವುದು. ಬೆಳಗ್ಗೆ 8 ಗಂಟೆಯಿಂದ ಸಂಜೆ 6.30ರವರೆಗೂ ವಿದ್ಯಾರ್ಥಿಗಳು ಪಾಸ್ ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications