ನ.28ರಂದು ಸುಕೇಶ್ ಚಂದ್ರಶೇಖರ್ ಒಡೆತನದ ಐಷಾರಾಮಿ ಕಾರುಗಳ ಹರಾಜು
ವಂಚನೆ ಆರೋಪಿ ಸುಕೇಶ್ ಚಂದ್ರಶೇಖರ್ ಅವರಿಗೆ ಸೇರಿದ ಐಷಾರಾಮಿ ಕಾರುಗಳನ್ನು ಬೆಂಗಳೂರಿನ ಆದಾಯ ತೆರಿಗೆ ಇಲಾಖೆ ಹರಾಜು ಮಾಡಲಿದೆ. ಕೇಂದ್ರ ಕಾನೂನು ಸಚಿವಾಲಯದ ಅಧಿಕಾರಿ ಎಂದು ಹೇಳಿಕೊಂಡು, ವಿವಿಧ ಸಂಸ್ಥೆಗಳಿಗೆ ವಂಚಿಸಿದ ಆರೋಪದ ಮೂಲಕ ಆತ ಗಳಿಸಿದ ಮೊತ್ತವನ್ನು ವಸೂಲಿ ಮಾಡುವ ಭಾಗವಾಗಿ ಕಾರುಗಳ ಹರಾಜು ನಡೆಸಲಾಗುವುದು.
ಪಿಟಿಐ ವರದಿ ಮಾಡಿರುವ ಪ್ರಕಾರ, ಸುಕೇಶ್ ಒಡೆತನದ ಬಿಎಂಡಬ್ಲ್ಯು ಎಂ5, ಟೊಯೊಟಾ ಪ್ರಾಡೊ, ರೇಂಜ್ ರೋವರ್, ಲಂಬೋರ್ಗಿನಿ, ಜಾಗ್ವಾರ್ ಎಕ್ಸ್ಕೆಆರ್ ಕೂಪೆ, ರೋಲ್ಸ್ ರಾಯ್ಸ್, ಬೆಂಟ್ಲಿ, ಇನ್ನೋವಾ ಕ್ರಿಸ್ಟಾ, ಟೊಯೊಟಾ ಫಾರ್ಚುನರ್, ನಿಸ್ಸಾನ್ ಟೀನಾ ಮತ್ತು ಪೋರ್ಷೆ ಸೇರಿದಂತೆ ಐಷಾರಾಮಿ ಕಾರುಗಳು ಹರಾಜಿಗೆ ಬರಲಿವೆ, ಕಾರುಗಳ ಹೊರತಾಗಿ ಅವರ ಸ್ಪೋರ್ಟ್ಸ್ ಬೈಕ್ಗಳೂ ಹರಾಜಾಗಲಿವೆ.

ಈ ವಾಹನಗಳ ಬೆಲೆ ಕನಿಷ್ಠ ₹2.03 ಲಕ್ಷದಿಂದ ಗರಿಷ್ಠ ₹1.74 ಕೋಟಿ ಎಂದು ಹೇಳಲಾಗುತ್ತಿದೆ. ಹರಾಜಿಗಿರುವ ಎಲ್ಲಾ ವಾಹನಗಳು ಸುಸ್ಥಿತಿಯಲ್ಲಿವೆ ಎಂದು ಐಟಿ ಇಲಾಖೆ ಸ್ಪಷ್ಟಪಡಿಸಿದೆ.
ದೇಶದ ವಿವಿಧ ಭಾಗಗಳಿಂದ ವಶ
"ಸುಕೇಶ್ ಒಡೆತನದ ಈ ವಾಹನಗಳನ್ನು ಐಟಿ ಇಲಾಖೆಯು 2018 ರಲ್ಲಿ ಕೇರಳ ಮತ್ತು ತಮಿಳುನಾಡು ಸೇರಿದಂತೆ ದೇಶದ ವಿವಿಧ ಭಾಗಗಳಿಂದ ವಶಪಡಿಸಿಕೊಂಡಿದೆ. ಅವರು ವಿವಿಧ ಸರ್ಕಾರಿ ಸಂಸ್ಥೆಗಳಿಗೆ ಹಲವಾರು ಕೋಟಿಗಳಷ್ಟು ಬಾಕಿ ಉಳಿಸಿಕೊಂಡಿದ್ದಾರೆ, ಆದ್ದರಿಂದ ನಾವು ಆ ಬಾಕಿಗಳನ್ನು ವಸೂಲಿ ಮಾಡಲು ನಿರ್ಧರಿಸಿದ್ದೇವೆ. ಈ ಅತ್ಯಾಧುನಿಕ ವಾಹನಗಳನ್ನು ಹರಾಜಿಗೆ ಹಾಕುವ ಮೂಲಕ," ಎಂದು ಮೂಲವೊಂದು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.
ಚಂದ್ರಶೇಖರ್ (33) ದೆಹಲಿ, ಮುಂಬೈ, ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಕನಿಷ್ಠ 32 ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. 2020 ಮತ್ತು 2021 ರ ಆರಂಭದ ನಡುವೆ, ಅವರು ದೆಹಲಿಯ ರೋಹಿಣಿ ಜೈಲಿನಲ್ಲಿದ್ದಾಗ, ಜೈಲಿನಲ್ಲಿದ್ದ ಕೈಗಾರಿಕೋದ್ಯಮಿ ಶಿವಿಂದರ್ ಮೋಹನ್ ಅವರ ಪತ್ನಿ ಅದಿತಿ ಸಿಂಗ್ ಅವರನ್ನು ಕೇಂದ್ರ ಕಾನೂನು ಕಾರ್ಯದರ್ಶಿ ಎಂದು ಹೇಳಿಕೊಂಡು ಜೈಲಿನಿಂದ ಪತಿಗೆ ಜಾಮೀನಿ ಕೊಡಿಸುವುದಾಗಿ ನಂಬಿಸಿ ₹ 200 ಕೋಟಿ ವಂಚಿಸಿದ್ದರು.
ಈ ಪ್ರಕರಣದಲ್ಲಿ ಪೊಲೀಸರು ನಾಲ್ಕು ಚಾರ್ಜ್ ಶೀಟ್ಗಳನ್ನು ಸಲ್ಲಿಸಿದ್ದು, ಚಂದ್ರಶೇಖರ್ಗೆ ಜೈಲು ನಿಯಮಗಳನ್ನು ತಪ್ಪಿಸಲು ಸಹಾಯ ಮಾಡಿದ ಐವರು ಜೈಲು ಅಧಿಕಾರಿಗಳು ಸೇರಿದಂತೆ 17 ಜನರ ವಿರುದ್ಧ ಆರೋಪ ಹೊರಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications